• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಮಿಷನ್ ಶಕ್ತಿ ಯೋಜನೆ ಯಶಸ್ವಿ: ಮೋದಿಗೆ ವಿಶ್ವ ರಂಗಭೂಮಿ ದಿನದ ಶುಭ ಹಾರೈಸುವ ಮೂಲಕ ರಾಹುಲ್ ವ್ಯಂಗ್ಯ!

ಮಿಷನ್ ಶಕ್ತಿ ಯೋಜನೆ ಯಶಸ್ವಿ: ಮೋದಿಗೆ ವಿಶ್ವ ರಂಗಭೂಮಿ ದಿನದ ಶುಭ ಹಾರೈಸುವ ಮೂಲಕ ರಾಹುಲ್ ವ್ಯಂಗ್ಯ!

ಮೋದಿ-ರಾಹುಲ್​

ಮೋದಿ-ರಾಹುಲ್​

ಹಾಗೆಯೇ ಭಾರತವನ್ನು ಬಾಹ್ಯಾಕಾಶ ಸೂಪರ್‌ ಪವರ್ ಮಾಡಿದ 'ಎ-ಸ್ಯಾಟ್‌' ಪ್ರಯೋಗವನ್ನು ಕಾಂಗ್ರೆಸ್‌ ಸ್ವಾಗತಿಸಿದೆ. 'ಈ ಸಾಧನೆಗಾಗಿ ನಾವು ಇಸ್ರೊ ಮತ್ತು ಭಾರತ ಸರ್ಕಾರವನ್ನು ಅಭಿನಂದಿಸುತ್ತೇವೆ ಎಂದು ಹೇಳಿದೆ.

  • News18
  • 4-MIN READ
  • Last Updated :
  • Share this:

ನವದೆಹಲಿ(ಮಾ.27): ಬಾಹ್ಯಾಕಾಶದ ಸಾಧನೆಗಾಗಿ ವಿಜ್ಞಾನಿಗಳನ್ನು ಅಭಿನಂದಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಬಾಹ್ಯಾಕಾಶದಲ್ಲಿ 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಕೇವಲ ಮೂರು ನಿಮಿಷಗಳಲ್ಲಿ ಹೊಡೆದುರುಳಿಸುವ ಮೂಲಕ ಭಾರತ ಸೂಪರ್ ಪವರ್ ದೇಶವಾಗಿ ಹೊರಹೊಮ್ಮಿದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ತಿಳಿಸಿದ್ದರು. ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್​​​ ಗಾಂಧಿ, ಒಂದೆಡೆ ವಿಜ್ಞಾನಿಗಳನ್ನು ಅಭಿನಂದಿಸುತ್ತಾ ಇನ್ನೊಂದೆಡೆ ಪ್ರಧಾನಿ ಮೋದಿ ಅವರಿಗೆ ವಿಶ್ವ ರಂಗಭೂಮಿ ದಿನದ ಶುಭಾಶಯಗಳು ಎಂದು ಲೇವಡಿ ಮಾಡಿದ್ದಾರೆ.



ಇನ್ನು ವಿಶ್ವದಲ್ಲೇ ಬಾಹ್ಯಾಕಾಶದಲ್ಲಿರುವ ಉಪಗ್ರಹವನ್ನು ಕ್ಷಿಪಣಿ ಪ್ರಯೋಗಿಸಿ ಹೊಡೆದುರುಳಿಸುವ ಸಾಮರ್ಥ್ಯ ಹೊಂದಿರುವ ಕೆಲವೇ ದೇಶಗಳ ಸಾಲಿಗೆ ಭಾರತವೂ ಇಂದು ಸೇರ್ಪಡೆಯಾಗಿದೆ. ಈ ವಿಚಾರದ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ತಿಳಿಸಿದ್ದು, 'ಭಾರತವು ಈಗ ವಿಶ್ವದ ಸ್ಪೇಸ್‌ ಸೂಪರ್‌ಪವರ್' (ಬಾಹ್ಯಾಕಾಶ ಶಕ್ತ) ರಾಷ್ಟ್ರವಾಗಿದೆ' ಎಂದು ಘೋಷಿಸಿದ್ದಾರೆ.

ಪ್ರಪಂಚದಲ್ಲೀಗ ಅಮೆರಿಕಾ, ರಷ್ಯಾ ಮತ್ತು ಚೀನಾಗಳಿಗೆ ಮಾತ್ರ ಉಪಗ್ರಹಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಇದೆ. ಈ ಸಾಲಿಗೆ ಇಂದು ಭಾರತವೂ  ಸೇರ್ಪಡೆಯಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: 'ಮಿಷನ್ ಶಕ್ತಿ' ಯೋಜನೆ ಯಶಸ್ವಿ; ಬಾಹ್ಯಾಕಾಶದಲ್ಲಿ ಭಾರತ ನಾಲ್ಕನೇ ಶಕ್ತಿಶಾಲಿ ರಾಷ್ಟ್ರ; ಪ್ರಧಾನಿ ಮೋದಿ

'ಈಚೆಗಷ್ಟೇ ಭಾರತವು ಉಪಗ್ರಹ ನಿಗ್ರಹ ಕ್ಷಿಪಣಿ ಪ್ರಯೋಗಿಸಿ ಕೆಳ ಕಕ್ಷೆಯಲ್ಲಿದ್ದ (ಭೂಮಿಯ ಸನಿಹ) ಉಪಗ್ರಹವನ್ನು ಹೊಡೆದುರುಳಿಸಿತು. ಮಿಷನ್ ಶಕ್ತಿ ಯೋಜನೆಯಡಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ. ಕೇವಲ ಮೂರು ನಿಮಿಷಗಳಲ್ಲಿ ಕಾರ್ಯಾಚರಣೆ ಪೂರ್ಣಗೊಂಡಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾಡಿದ ತಮ್ಮ ತುರ್ತು ಭಾಷಣದಲ್ಲಿ ಘೋಷಿಸಿದರು.

ಇದನ್ನೂ ಓದಿ: ಏನಿದು 'ಮಿಷನ್​ ಶಕ್ತಿ'?; ಇಲ್ಲಿದೆ ಬಾಹ್ಯಾಕಾಶ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಉತ್ತರ

ಹಾಗೆಯೇ ಭಾರತವನ್ನು ಬಾಹ್ಯಾಕಾಶ ಸೂಪರ್‌ ಪವರ್ ಮಾಡಿದ 'ಎ-ಸ್ಯಾಟ್‌' ಪ್ರಯೋಗವನ್ನು ಕಾಂಗ್ರೆಸ್‌ ಸ್ವಾಗತಿಸಿದೆ. 'ಈ ಸಾಧನೆಗಾಗಿ ನಾವು ಇಸ್ರೊ ಮತ್ತು ಭಾರತ ಸರ್ಕಾರವನ್ನು ಅಭಿನಂದಿಸುತ್ತೇವೆ. 1961ರಲ್ಲಿ ಜವಾಹರಲಾಲ್ ನೆಹರು ಬಾಹ್ಯಾಕಾಶ ಯೋಜನೆ ಆರಂಭಿಸಿದ್ದರು. ಇಂದಿರಾ ಗಾಂಧಿ ಆರಂಭಿಸಿದ ಇಸ್ರೊ ಹಲವು ಸಾಧನೆಗಳ ಮೂಲಕ ಭಾರತಕ್ಕೆ ಹೆಮ್ಮೆ ತಂದುಕೊಂಡಿದೆ' ಎಂದು ಹೇಳಿದೆ.
---------------

First published: