• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಹರಿಯಾಣ; ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ; ಪೇದೆ ಸೇರಿ 4 ಜನರ ವಿರುದ್ಧ ಪ್ರಕರಣ

ಹರಿಯಾಣ; ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ; ಪೇದೆ ಸೇರಿ 4 ಜನರ ವಿರುದ್ಧ ಪ್ರಕರಣ

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಗುರುಗಾಂವ್ ಜಿಲ್ಲೆಯ ಸೊಹ್ನಾ ಬಳಿಯ ತನ್ನ ಹಳ್ಳಿಯವರೇ ಶಂಕಿತ ಆರೋಪಿಗಳು ಎಂದು ಯುವತಿ ಅನುಮಾನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 30 ರಂದು ಯುವತಿಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಸೆರೆಯಲ್ಲಿಟ್ಟು ಅತ್ಯಾಚಾರ ನಡೆಸಲಾಗಿದೆ.

  • Share this:

    ಹರಿಯಾಣ; 20 ವರ್ಷದ ವಿವಾಹಿತ ದಲಿತ ಯುವತಿಯನ್ನು ಅಪಹರಿಸಿ, ಸೆರೆಯಾಳಾಗಿಸಿಕೊಂಡು ಮಂಪರು ಬರುವ ಔಷಧಿಯನ್ನು ನೀಡಿ ಸತತ ಒಂಬತ್ತು ದಿನಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹರಿಯಾಣದ ಗುರುಗಾಂವ್‌ ನಲ್ಲಿ ನಡೆದಿದೆ. ಈ ಹೇಯ ಘಟನೆಯಲ್ಲಿ ಪೊಲೀಸ್​ ಪೇದೆಯೊಬ್ಬನ ಕೈವಾಡವೂ ಇದ್ದು, ಆತನೂ ಸೇರಿದಂತೆ ಒಟ್ಟು ನಾಲ್ಕು ಜನ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದಲ್ಲದೆ, ಅತ್ಯಾಚಾರದ ನಂತರ ವಿವಾಹಿತ ಸಂತ್ರಸ್ತ ಯುವತಿಗೆ ದೂರು ದಾಖಲಿಸಲು ಸಹಾಯ ಮಾಡಿದ್ದಕ್ಕಾಗಿಯೂ ವ್ಯಕ್ತಿಯೊಬ್ಬನ ಮೇಲೆ ಕೆಲವು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.


    ತನ್ನ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಯುವತಿ ದೂರು ನೀಡಿದ್ದು, ತನ್ನ ದೂರಿನಲ್ಲಿ, "ಅತ್ಯಾಚಾರಿಗಳು ನನ್ನನ್ನು ಅಪಹರಿಸಿ ಮಂಪರು ಬರುವ ಔಷಧಿಗಳನ್ನು ನೀಡುತ್ತಿದ್ದರು, ಹಾಗಾಗಿ ತಾನು ಹೆಚ್ಚಿನ ಸಮಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದೆ. ಈ ಸಂದರ್ಭದಲ್ಲಿ ಸತತ 9 ದಿನ ನನ್ನ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅತ್ಯಾಚಾರ ನಡೆಸಿದವರ ಪೈಕಿ ಪೊಲೀಸ್​ ಕಾನ್ಸ್ಟೇಬಲ್ ಸಹ ಓರ್ವ" ಎಂದು ತಿಳಿಸಿದ್ದಾಳೆ.


    ಗುರುಗಾಂವ್ ಜಿಲ್ಲೆಯ ಸೊಹ್ನಾ ಬಳಿಯ ತನ್ನ ಹಳ್ಳಿಯವರೇ ಶಂಕಿತ ಆರೋಪಿಗಳು ಎಂದು ಯುವತಿ ಅನುಮಾನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 30 ರಂದು ಯುವತಿಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಸೆರೆಯಲ್ಲಿಡ ಲಾಗಿತ್ತು. ಫರಿದಾಬಾದ್‌ನ ಬಲ್ಲಭ್‌ಗಢ ಎಂಬಲ್ಲಿ ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


    ನಂತರ ಯುವತಿಯನ್ನು ಜುಲೈ 8 ರಂದು ಬಲ್ಲಭ್‌ಗಢ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿ ದ್ದಾರೆ. ಆಕೆ ತನ್ನ ಕುಟುಂಬವನ್ನು ಸಂಪರ್ಕಿಸಿ ಮನೆಗೆ ತಲುಪಿದ ಬಳಿಕ ಜುಲೈ 10 ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


    ಅತ್ಯಾಚಾರ, ಅಪಹರಣ, ಮತ್ತು ಎಸ್‌ಸಿ / ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿಭಾಗಗಳು ಸೇರಿದಂತೆ ಐಪಿಸಿಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗಳನ್ನು ಬಂಧಿಸುತ್ತೇವೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಸೊಹ್ನಾ ವ್ಯಾಪ್ತಿಯ ಸಾದರ್‌ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉಮೇಶ್ ಕುಮಾರ್ ಬುಧವಾರ ಹೇಳಿದ್ದಾರೆ.


    ಇದನ್ನೂ ಓದಿ: Infosys| 2022 ರ ಆರ್ಥಿಕ ವರ್ಷದಲ್ಲಿ 35,000 ಕಾಲೇಜು ಪದವೀಧರರನ್ನು ನೇಮಿಸಿಕೊಳ್ಳಲಿದೆ ಇನ್ಫೋಸಿಸ್..!


    ಪ್ರಕರಣದಲ್ಲಿ ಆರೋಪಿಯಾಗಿರುವ ಕಾನ್‌ಸ್ಟೆಬಲ್‌ ಫರಿದಾಬಾದ್‌ನ ಪೊಲೀಸ್‌ ಠಾಣೆ ಯಲ್ಲಿ ಕರ್ತವ್ಯದಲ್ಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಬುಧವಾರ, ಯುವತಿಗೆ ಹಳ್ಳಿಯ ವ್ಯಕ್ತಿಯೊಬ್ಬರು ಪೊಲೀಸ್ ದೂರು ದಾಖಲಿಸಲು ಸಹಾಯ ಮಾಡಿದ್ದಕ್ಕಾಗಿ ಕೆಲವು ಜನರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ನಡೆಸುತ್ತಿದ್ದ ಖಾಸಗಿ ಶಾಲೆಯ ಆವರಣದಲ್ಲಿ ಕೆಲವರು ಪ್ರವೇಶಿಸಿ ಹಲ್ಲೆ ನಡೆಸಿ ಹಳ್ಳಿಯಲ್ಲಿ ಮೆರವಣಿಗೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾ ಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸ ಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿ ನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿ ಯುತವಾಗಿ ನಡೆದುಕೊ ಳ್ಳಬೇಕು.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು