• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಶೀಘ್ರದಲ್ಲಿ ಒಂದು ರಾಷ್ಟ್ರ-ಒಂದು ರೇಷನ್​ ಕಾರ್ಡ್​ ಯೋಜನೆಯನ್ನು ಜಾರಿಗೊಳಿಸಿ: ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಸುಪ್ರೀಂ ತಾಕೀತು

ಶೀಘ್ರದಲ್ಲಿ ಒಂದು ರಾಷ್ಟ್ರ-ಒಂದು ರೇಷನ್​ ಕಾರ್ಡ್​ ಯೋಜನೆಯನ್ನು ಜಾರಿಗೊಳಿಸಿ: ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಸುಪ್ರೀಂ ತಾಕೀತು

ಸುಪ್ರೀಂ ಕೋರ್ಟ್​.

ಸುಪ್ರೀಂ ಕೋರ್ಟ್​.

ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೇಂದ್ರ ಸರ್ಕಾರ ನೀಡುವ ರೇಷನ್‌ ಅಗತ್ಯವಾಗಿದೆ. ನೀವು ಈ ಕೂಡಲೇ ಯೋಜನೆಯನ್ನು ಜಾರಿಗೊಳಿಸಿ ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

  • Share this:

    ನವ ದೆಹಲಿ (ಜೂನ್ 11); ಒಂದು ದೇಶ ಒಂದು ರೇಷನ್​ ಕಾರ್ಡ್​ (one nation-one ration card) ಎಂಬುದು ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆ. ಈ ಯೋಜನೆಯನ್ನು ಅತಿ ಶೀಘ್ರದಲ್ಲೇ ಜಾರಿಗೆ ತರುವುದಾಗಿ ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಆಶ್ವಾಸನೆಯನ್ನೂ ನೀಡಿತ್ತು. ಅದರಂತೆ ದೇಶದ ಎಲ್ಲಾ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಇದೀಗ ತನ್ನ ಬಹು ನಿರೀಕ್ಷಿತ ಒನ್‌ ನೇಷನ್-‌ ಒನ್‌ ರೇಷನ್‌ ಎಂಬ ಏಕ ರೂಪದ ಪಡಿತರ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರದ ಈ ಯೋಜನೆಗೆ ಕೆಲವು ರಾಜ್ಯಗಳು ಮೊದಲಿನಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿವೆ. ಇದುವರೆಗೆ ಒನ್‌ ನೇಷನ್‌ – ಒನ್‌ ರೇಷನ್‌ ಯೋಜನೆಯನ್ನು ಜಾರಿಗೊಳಿಸದ ರಾಜ್ಯಗಳಲ್ಲಿ ಪಶ್ಚಿಮ ಬಂಗಾಳವೂ ಒಂದು. ಆದರೆ, ಇಂದು ಸುಪ್ರೀಂ ಕೋರ್ಟ್‌ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಒನ್‌ ನೇಷನ್‌ ಒನ್‌ ರೇಷನ್‌ ಯೋಜನೆಯನ್ನು ಅತೀ ಶೀಘ್ರದಲ್ಲಿ ಜಾರಿಗೊಳಿಸುವಂತೆ ಸೂಚಿಸಿದೆ.


    ವಲಸೆ ಕಾರ್ಮಿಕರಿಗೆ ನೆರವಾಗುವ ಒನ್‌ ನೇಷನ್‌ – ಒನ್‌ ರೇಷನ್‌ ಯೋಜನೆಯನ್ನು ನೀವು ಬೇರೆ ಬೇರೆ ಕಾರಣಗಳನ್ನು ಹೇಳಿ ಮುಂದೂಡಲು ಸಾಧ್ಯವಿಲ್ಲ. ಶೀಘ್ರದಲ್ಲಿ ಯೋಜನೆಯನ್ನು ಜಾರಗೊಳಿಸಿ ನ್ಯಾಯಲಾಯಕ್ಕೆ ವರದಿ ಸಲ್ಲಿಸಿ ಎಂದು ಸುಪ್ರೀಂ ಕೋರ್ಟ್‌ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿತು.


    ಇದನ್ನೂ ಓದಿ: West Bengal| ಬಂಗಾಳದಲ್ಲಿ ಮುಂದುವರೆದ ಘರ್ ವಾಪಸಿ; ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಕಡೆ ಮುಖ ಮಾಡಿದ ಮುಕುಲ್ ರಾಯ್


    ಕೇಂದ್ರ ಸರ್ಕಾರ ಮುಂದಿನ ದೀಪಾವಳಿಯ ವರೆಗೆ ಬಿಪಿಎಲ್‌ ಕಾರ್ಡುದಾರರಿಗೆ ನೀಡುವ ರೇಷನ್‌ ಜನರಿಗೆ ತಲುಪಬೇಕಾದರೆ ಒನ್‌ ನೇಷನ್‌ ಒನ್‌ ರೇಷನ್‌ ಯೋಜನೆ ಜಾರಿ ಮಾಡುವುದು ಮುಖ್ಯವಾಗಿದೆ. ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಕೇಂದ್ರ ಸರ್ಕಾರ ನೀಡುವ ರೇಷನ್‌ ಅಗತ್ಯವಾಗಿದೆ. ನೀವು ಈ ಕೂಡಲೇ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಿ ಎಂದು  ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿದ ಸುಪ್ರೀಂ ಕೋರ್ಟ್‌ ಪ್ರಕರಣ ವಿಚಾರಣೆಯನ್ನು ಮುಂದೂಡಿತು.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು