ನವ ದೆಹಲಿ (ಜನವರಿ 26); ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಈವರೆಗೆ ಪಂಜಾಬ್ ಪರಿಯಾಣ ಭಾಗಗಳಲ್ಲಿನ ಅನೇಕ ಬಿಜೆಪಿ ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷವನ್ನೇ ತೊರೆದಿದ್ದಾರೆ. ಕೆಲ ಸ್ವಾತಂತ್ರ್ಯ ಶಾಸಕರು ಮತ್ತು ಅಕಾಲಿ ದಳದಂತಹ ಮಿತ್ರ ಪಕ್ಷಗಳು ಬಿಜೆಪಿ ಸಖ್ಯವನ್ನು ಕೊನೆಗೊಳಿಸಿಕೊಂಡಿವೆ. ಈ ಸಾಲಿಗೆ ಇದೀಗ ಐಎನ್ಎಲ್ಡಿ (Indian National Lok Dal) ಪಕ್ಷವೂ ಸೇರ್ಪಡೆಯಾಗಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕ್ ದಳ (ಐಎನ್ಎಲ್ಡಿ) ಪಕ್ಷದ ಏಕೈಕ ಶಾಸಕ ಅಭಯ್ ಸಿಂಗ್ ಚೌಟಾಲ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಪಂಜಾಬ್-ಹರಿಯಾಣ ಭಾಗದಲ್ಲಿ ರೈತ ಹೋರಾಟ ಮತ್ತಷ್ಟು ಬಲಗೊಳ್ಳಲಿದೆ ಎನ್ನಲಾಗುತ್ತಿದೆ.
ಅಭಯ್ ಸಿಂಗ್ ಚೌಟಾಲ ಇಂದು ಸ್ವತಃ ರಾಜ್ಯಪಾಲ ಜ್ಞಾನ್ಚಂದ್ ಗುಪ್ತಾ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರೂ ಸಹ ಈ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ. ಆದರೆ, ರಾಜೀನಾಮೆ ನೀಡಿದ ನಂತರ ಈ ಕುರಿತು ಟ್ವಿಟರ್ನಲ್ಲಿ ತನ್ನ ಅಭಿಪ್ರಾಯವನ್ನು ಹಂಚಿಕೊಂಡಿರುವ ಅಭಯ್ ಸಿಂಗ್ ಚೌಟಾಲ, "ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು! ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕಾನೂನುಗಳ ವಿರುದ್ಧ ನಾನು ರಾಜೀನಾಮೆ ನೀಡಿದ್ದೇನೆ. ಪ್ರತಿಪಕ್ಷದಲ್ಲಿ ಕುಳಿತಿರುವ ಇತರ ಎಲ್ಲ ನಾಯಕರು ಮತ್ತು ರೈತರ ಮಕ್ಕಳು ಎನಿಸಿಕೊಂಡವರು ರೈತನೊಂದಿಗೆ ನಿಲ್ಲಬೇಕೆಂದು ನಾನು ವಿನಂತಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.
मुझे कुर्सी नहीं मेरे देश का किसान खुशहाल चाहिए! सरकार द्वारा लागू इन काले कानूनों के खिलाफ मेने अपना इस्तीफा दे दिया है।
मैं विपक्ष में बैठे अन्य सभी नेताओं ओर किसान पुत्रों से निवेदन करता हूँ कि वो इस संघर्ष की लड़ाई में किसान के साथ खड़े हों ||#FarmerProtests #किसान_आंदोलन pic.twitter.com/cBKUC4LKp7
— Abhay Singh Chautala (@AbhaySChautala) January 27, 2021
ಇದೀಗ ಸ್ವಾತಂತ್ರ್ಯ ಶಾಸಕರ ಬೆನ್ನಿಗೆ ಭಾರತೀಯ ರಾಷ್ಟ್ರೀಯ ಲೋಕ್ ದಳ ಪಕ್ಷದ ಶಾಸಕ ತನ್ನ ಶಾಸಕ ಸ್ಥಾನವನ್ನೇ ತ್ಯಜಿಸಿರುವುದು ಇದೀಗ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಜನವರಿ 26 ರಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯ ಕೆಂಪುಕೋಟೆ ಭಾಗದಲ್ಲಿ ಘರ್ಷಣೆ ಕಾಣಿಸಿಕೊಂಡಿತ್ತು. ಇದರ ಬೆನ್ನಿಗೆ ರೈತ ಹೋರಾಟ ದಿಕ್ಕು ತಪ್ಪುತ್ತಿದೆಯೇ? ಎಂಬ ಪ್ರಶ್ನೆಗಳೂ ಉದ್ಭವವಾಗಿದ್ದವು. ಆದರೆ, ಇದೀಗ ಶಾಸಕನೋರ್ವ ಈ ಹೋರಾಟವನ್ನು ಬೆಂಬಲಿಸಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಮತ್ತಷ್ಟು ಶಾಸಕರ ರಾಜೀನಾಮೆಗೆ ವೇದಿಕೆಯಾಗಲಿದೆ. ಅಲ್ಲದೆ, ಈ ಹೋರಾಟಕ್ಕೆ ಮತ್ತಷ್ಟು ಬಲ ತುಂಬಲಿದೆ ಎನ್ನಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ