ಶ್ರೀನಗರ (ಮೇ 6): ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ನಿನ್ನೆ ಸಂಜೆಯಿಂದ ನಡೆಯುತ್ತಿರುವ ಗುಂಡಿನ ದಾಳಿಯಲ್ಲಿ ಭಾರತೀಯ ಭದ್ರತಾ ಪಡೆಯ ಸಿಬ್ಬಂದಿ ಮೂವರು ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ. ಈ ವೇಳೆ, ಇತ್ತೀಚೆಗಷ್ಟೆ ಉಗ್ರ ಸಂಘಟನೆಗೆ ಸೇರಿದ್ದ ತೌಷಿಫ್ ಅಹಮದ್ ಎಂಬ ಉಗ್ರ ಭಾರತೀಯ ಸೇನೆಗೆ ಶರಣಾಗಿದ್ದಾನೆ.
ಶೋಪಿಯಾನ್ನಲ್ಲಿ ಉಗ್ರರು ಮತ್ತು ಬಿಎಸ್ಎಫ್ ಯೋಧರ ನಡುವಿನ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಶೋಪಿಯಾನ್ನಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಶೋಪಿಯಾನ್ನ ಕನಿಗಮ್ ಪ್ರದೇಶದಲ್ಲಿ ಅಲ್-ಬಾದರ್ ಸಂಘಟನೆಯ ನಾಲ್ವರು ಸ್ಥಳೀಯ ಉಗ್ರರನ್ನು ಸುತ್ತುವರೆಯಲಾಗಿದೆ. ಇವರೆಲ್ಲರೂ ಇತ್ತೀಚೆಗಷ್ಟೆ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದರು. ಈ ನಾಲ್ವರನ್ನು ಶರಣಾಗುವಂತೆ ಮನವೊಲಿಸಲು ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಭದ್ರತಾ ಪಡೆಯ ಯೋಧರು ಪ್ರಯತ್ನಿಸುತ್ತಿದ್ದಾರೆ.
— Kashmir Zone Police (@KashmirPolice) May 6, 2021
ದಕ್ಷಿಣ ಕಾಶ್ಮೀರದ ಕನಿಗಮ್ ಪ್ರದೇಶದಲ್ಲಿ ನಿನ್ನೆ ಭದ್ರತಾ ಪಡೆಯ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಸಿಕ್ಕಿ ಹಿನ್ನೆಲೆಯಲ್ಲಿ ಯೋಧರು ಮತ್ತು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದರು.
4 newly recruited local terrorists of Al-Badr terror outfit trapped in Kanigam area of Shopian. Exercising maximum restraint, Police and security forces are trying their best to persuade them to surrender: JK Police
ಈ ವೇಳೆ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು, ಮೂವರು ಉಗ್ರರು ಹತರಾಗಿದ್ದಾರೆ. ಇನ್ನೂ ಸಾಕಷ್ಟು ಉಗ್ರರು ಅಡಗಿಕೊಂಡಿದ್ದು, ಅವರಿಗೆ ಶರಣಾಗುವಂತೆ ಸೂಚಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ