ನವ ದೆಹಲಿ (ಡಿಸೆಂಬರ್ 08); ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಯ ವಿರುದ್ಧ ದೇಶದ ರೈತರು ಕಳೆದ 13 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ದೆಹಲಿಯ ಎಎಪಿ ಸರ್ಕಾರ ಮತ್ತು ಸಿಎಂ ಅರವಿಂದ ಕೇಜ್ರಿವಾಲ್ ಈ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಅಲ್ಲದೆ, ಸ್ವತಃ ಕೇಜ್ರಿವಾಲ್ ದೆಹಲಿ ಗಡಿಯಲ್ಲಿದ್ದ ಪ್ರತಿಭಟನಾ ನಿರತ ರೈತರನ್ನು ನಿನ್ನೆ ಭೇಟಿಯಾಗಿ ನೈತಿಕ ಬಲ ತುಂಬಿದ್ದರು, ಬೆಂಬಲದ ವಾಗ್ದಾನ ನೀಡಿದ್ದರು. ಆದರೆ, ರೈತರಿಗೆ ಬೆಂಬಲ ಸೂಚಿಸಿದ ಏಕೈಕ ಕಾರಣಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನೇ ಗೃಹಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಇಂದು ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಆಮ್ ಆದ್ಮಿ ಪಕ್ಷ, "ನಿನ್ನೆ ದೆಹಲಿಯ ಸಿಂಗು ಗಡಿಯಲ್ಲಿ ಪ್ರತಿಭಟನಾನಿರತ ರೈತರನ್ನು ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಏಕೈಕ ಕಾರಣಕ್ಕೆ ದೆಹಲಿಯ ಪೊಲೀಸರು ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿರಿಸಿದ್ದಾರೆ. ಅವರನ್ನು ನಿವಾಸದಿಂದ ಹೊರಗೆ ಬಿಡುತ್ತಿಲ್ಲ, ನಿವಾಸದೊಳಗೆ ಪ್ರವೇಶಿಸಲು ನಮಗೂ ಅವಕಾಶ ನೀಡುತ್ತಿಲ್ಲ" ಎಂದು ಕಿಡಿಕಾರಲಾಗಿದೆ.
Delhi Chief Minister @ArvindKejriwal has been put under house arrest ever since he went to show solidarity with the farmers at Singhu border!
Scared that @ArvindKejriwal will come out to support the Bharat Bandh, BJP is using the mayor’s protest to keep him under house arrest!
— Atishi (@AtishiAAP) December 8, 2020
ಆದರೆ, ನಾನು ಈ ಮನವಿಯನ್ನು ನಾನು ಸಾರಾಸಗಟಾಗಿ ತಳ್ಳಿ ಹಾಕಿದ್ದೆ. ಅಲ್ಲದೆ, ರೈತರಿಗೆ ಅಗತ್ಯವಾದ ಎಲ್ಲಾ ಅನುಕೂಲಗಳನ್ನೂ ನಾವು ಮಾಡಿದ್ದೇವೆ. ನಾವು ಎಂದಿಗೂ ರೈತರ ಸೇವಕರು. ಅಲ್ಲದೆ, ರೈತರನ್ನು ಬೆಂಬಲಿಸುವುದು ನಮ್ಮ ಜವಾಬ್ದಾರಿಯಾಗಿದೆ" ಎಂದು ತಿಳಿಸಿದ್ದರು.
ಭಾರತ್ ಬಂದ್ ಕುರಿತು ಮಾತನಾಡಿದ್ದ ಅರವಿಂದ ಕೇಜ್ರಿವಾಲ್, "ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಎಎಪಿ ಭಾಗವಹಿಸಲಿದೆ. ಇಡೀ ದೇಶವು ಈ ಹೋರಾಟದಲ್ಲಿ ಶಾಂತಿಯುತವಾಗಿ ಭಾಗವಹಿಸುತ್ತದೆ ಎಂದು ನಾನು ಭಾವಿಸುತ್ತೇನೆ ಮತ್ತು ರೈತರನ್ನು ಬೆಂಬಲಿಸುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ" ಎಂದಿದ್ದರು. ಇದೇ ಕಾರಣಕ್ಕೆ ಅರವಿಂದ ಕೇಜ್ರಿವಾಲ್ ಇಂದೂ ಸಹ ರೈತ ಹೋರಾಟದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಎಎಪಿ ಕಾರ್ಯಕರ್ತರು ಟೀಕಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ