• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Kerala Rains: ವಿಪರೀತ ಮಳೆಯಿಂದ ಕೇರಳದ 6 ಜಿಲ್ಲೆಗಳಲ್ಲಿಂದು ಹೈ ಅಲರ್ಟ್​; ಇಡುಕ್ಕಿ ಭೂಕುಸಿತದ ಸಾವಿನ ಸಂಖ್ಯೆ 43ಕ್ಕೆ ಏರಿಕೆ

Kerala Rains: ವಿಪರೀತ ಮಳೆಯಿಂದ ಕೇರಳದ 6 ಜಿಲ್ಲೆಗಳಲ್ಲಿಂದು ಹೈ ಅಲರ್ಟ್​; ಇಡುಕ್ಕಿ ಭೂಕುಸಿತದ ಸಾವಿನ ಸಂಖ್ಯೆ 43ಕ್ಕೆ ಏರಿಕೆ

ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಉಂಟಾದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ

ಕೇರಳದ ಇಡುಕ್ಕಿಯಲ್ಲಿ ಭೂಕುಸಿತ ಉಂಟಾದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ

Kerala Floods: ಕೇರಳದ ಇಡುಕ್ಕಿಯಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ 20 ಮನೆಗಳಲ್ಲಿ ವಾಸವಾಗಿದ್ದ 78 ಜನರು ಮಣ್ಣಿನಡಿ ಸಿಲುಕಿದ್ದರು. ಇದುವರೆಗೂ 43 ಜನರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ಕೇರಳದ 6 ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವುದರಿಂದ ಈ ಭಾಗಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಮುಂದೆ ಓದಿ ...
  • Share this:

ತಿರುವನಂತಪುರಂ (ಆ. 10): ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ಬಳಿ ಶನಿವಾರ ಭೂಕುಸಿತ ಉಂಟಾಗಿ 20 ಮನೆಗಳು ಕೊಚ್ಚಿಕೊಂಡು ಹೋಗಿದ್ದವು. 70ಕ್ಕೂ ಹೆಚ್ಚು ಜನರು ಮಣ್ಣಿನಡಿ ಸಿಲುಕಿದ್ದರು. ಈ ದುರಂತದಲ್ಲಿ ಇದುವರೆಗೂ 43 ಜನರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ಉಳಿದವರ ಶೋಧ ಕಾರ್ಯ ಮುಂದುವರೆದಿದೆ.


ಕೇರಳದ ಇಡುಕ್ಕಿಯಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ 20 ಮನೆಗಳಲ್ಲಿ ವಾಸವಾಗಿದ್ದ 78 ಜನರು ಮಣ್ಣಿನಡಿ ಸಿಲುಕಿದ್ದರು. ಶನಿವಾರ 26 ಜನರ ಶವಗಳನ್ನು ಪತ್ತೆಹಚ್ಚಲಾಗಿತ್ತು. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಮತ್ತೆ 17 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದುವರೆಗೂ 12 ಜನರನ್ನು ರಕ್ಷಿಸಲಾಗಿದೆ. ಉಳಿದವರ ಶವಗಳಿಗಾಗಿ ಎನ್​ಡಿಆರ್​ಎಫ್ ಸಿಬ್ಬಂದಿ ಇಂದು ಕೂಡ ಶೋಧ ಕಾರ್ಯ ನಡೆಸಲಿದ್ದಾರೆ.


ಇದನ್ನೂ ಓದಿ: Malgudi Museum: ಶಿವಮೊಗ್ಗದ ಅರಸಾಳು ರೈಲು ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ; ಶಂಕರ್​​ನಾಗ್ ಕಲ್ಪನೆಗೆ ಹೊಸ ರೂಪ


ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮುನ್ನಾರ್​ನ ರಾಜಮಲಾದಲ್ಲಿ ಶನಿವಾರ ಮುಂಜಾನೆ ಗುಡ್ಡ ಕುಸಿದಿತ್ತು. ಇದರ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದರು. ಇಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಟೀ ಎಸ್ಟೇಟ್​ಗಳಲ್ಲಿ ಕೆಲಸ ಮಾಡುತ್ತಿದ್ದವರು ಆ ಭಾಗದಲ್ಲಿ ವಾಸವಾಗಿದ್ದರು. 4 ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹಲವೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲು ಕೂಡ ಸಾಧ್ಯವಾಗದಂತಾಗಿದೆ. ರಸ್ತೆಗಳಲ್ಲಿ ಬಿದ್ದ ಮರ, ಮಣ್ಣನ್ನು ತೆರವುಗೊಳಿಸಿ, ಮಣ್ಣಿನಡಿ ಸಿಲುಕಿದವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿ ಸುಮಾರು 78 ಮಂದಿ ಸಿಕ್ಕಿಹಾಕಿಕೊಂಡಿರಬಹುದು ಎನ್ನಲಾಗಿದೆ. ಶನಿವಾರ ಬೆಳಗ್ಗೆಯೇ ಈ ದುರಂತ ಸಂಭವಿಸಿದ್ದರಿಂದ ನಿದ್ರೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಅಲ್ಲದೆ, ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ಸ್ಥಳಕ್ಕೆ ಬೇಗನೆ ತಲುಪಲು ಕೂಡ ಸಾಧ್ಯವಾಗಿಲ್ಲ. ನಿನ್ನೆ ಎನ್​ಡಿಆರ್​ಎಫ್​ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ 17 ಶವಗಳನ್ನು ಹೊರಗೆ ತೆಗೆದಿದ್ದಾರೆ.

ಕೇರಳದ ಕಾಸರಗೋಡು, ಕಣ್ಣೂರು, ವಯನಾಡು, ಕೋಯಿಕೋಡ್, ಮಲಪ್ಪುರಂ ಮತ್ತು ಅಲಪ್ಪುಯ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಈ ಭಾಗಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ 20 ಸೆ.ಮೀ. ಮಳೆಯಾಗುವ ಸಾಧ್ಯತೆಯಿದೆ.

Published by:Sushma Chakre
First published: