ಬಿಹಾರದಲ್ಲಿ ನಿತೀಶ್ ಸಹವಾಸ ಬೇಡ; ಬಿಜೆಪಿ ಜೊತೆ ಮಾತ್ರ ಮೈತ್ರಿ: ಎಲ್​ಜೆಪಿ ಹಠ

ಚಿರಾಗ್ ಪಾಸ್ವಾನ್

ಚಿರಾಗ್ ಪಾಸ್ವಾನ್

ಬಿಹಾರದಲ್ಲಿ ನಿತೀಶ್ ಕುಮಾರ್ ನಾಯಕತ್ವದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಹಾಗೂ ಬಿಜೆಪಿ ಜೊತೆ ಮಾತ್ರ ಮೈತ್ರಿ ಮಾಡಿಕೊಳ್ಳಲು ಲೋಕ ಜನಶಕ್ತಿ ಪಕ್ಷ ನಿರ್ಧರಿಸಿರುವುದು ತಿಳಿದುಬಂದಿದೆ.

  • News18
  • 2-MIN READ
  • Last Updated :
  • Share this:

ಪಾಟ್ನಾ(ಅ. 04): ಬಿಹಾರದಲ್ಲಿ ವಿಪಕ್ಷಗಳು ಒಗ್ಗಟ್ಟು ತೋರಿ ಸರ್ವಸಮ್ಮತ ರೀತಿಯಲ್ಲಿ ಸೀಟು ಹಂಚಿಕೆ ಮಾಡಿಕೊಂಡಿರುವಂತೆಯೇ ಆಡಳಿತಾರೂಢ ಎನ್​ಡಿಎ ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿರುವುದು ಸ್ಪಷ್ಟಗೊಂಡಿದೆ. ಜೆಡಿಯು ಮತ್ತು ಎಲ್​ಜೆಪಿ ನಡುವಿನ ಜಗಳ ಎನ್​ಡಿಎ ಪಾಲಿಗೆ ಮುಳುವಾಗುವಂತೆ ತೋರುತ್ತಿದೆ. ಬಿಹಾರದಲ್ಲಿ ಎನ್​ಡಿಎ ಮೈತ್ರಿಕೂಟದಿಂದ ಎಲ್​ಜೆಪಿ ಹೊರಬರುವುದು ಬಹುತೇಕ ನಿಶ್ಚಿತವೆನಿಸಿದೆ. ಚುನಾವಣೆಯಲ್ಲಿ ಜೆಡಿಯು ಜೊತೆ ತಾನು ಸೇರುವುದಿಲ್ಲ ಎಂದು ಲೋಕ ಜನಶಕ್ತಿ ಪಕ್ಷ ಹೇಳಿದೆ. ನಿತೀಶ್ ಕುಮಾರ್ ನಾಯಕತ್ವದಲ್ಲಿ ಸ್ಪರ್ಧಿಸಲು ಲೋಕಜನಶಕ್ತಿ ಪಕ್ಷಕ್ಕೆ ಇಚ್ಛೆ ಇಲ್ಲ ಎಂದು ಆ ಪಕ್ಷದ ಮೂಲಗಳು ಹೇಳುತ್ತಿವೆ.


ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಎನ್​ಡಿಎ ಮೈತ್ರಿಕೂಟಕ್ಕೆ ನಾವು ಬದ್ಧವಾಗಿರುತ್ತೇವೆ. ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಎಲ್​ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ನೇತೃತ್ವದಲ್ಲಿ ನಡೆದ ಎಲ್​ಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಆದರೆ, ಸಿಎಂ ಹಾಗೂ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ನಾಯಕತ್ವದಲ್ಲಿ ಚುನಾವಣೆ ಸ್ಪರ್ಧಿಸಲಾಗುವುದು ಎಂದು ಬಿಜೆಪಿ ವರಿಷ್ಠರು ಘೋಷಿಸಿ ಆಗಿದೆ. ಈ ಹಂತದಲ್ಲಿ ಎಲ್​ಜೆಪಿ ಬೇರೆಯೇ ದಿಕ್ಕು ಹಿಡಿದಿರುವುದು ಕುತೂಹಲ ಮೂಡಿಸಿದೆ.


ಇದನ್ನೂ ಓದಿ: ಹೈದರಾಬಾದ್ ಏರ್​ಪೋರ್ಟ್​ನಲ್ಲಿ 25 ಕೋಟಿ ರೂ ಮೌಲ್ಯದ ಅಕ್ರಮ ಚಿನ್ನ ವಶಕ್ಕೆ


ಮೂರು ದಿನಗಳ ಹಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎಲ್​ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರನ್ನ ಭೇಟಿ ಮಾಡಿ ಸೀಟು ಹಂಚಿಕೆ ವಿಚಾರ ಚರ್ಚಿಸಿದ್ದರು. ಆ ಸಂದರ್ಭದಲ್ಲಿ ಚಿರಾಗ್ ಪಾಸ್ವಾನ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಬಗ್ಗೆ ಇರುವ ಮುನಿಸನ್ನ ಹೊರಹಾಕಿದ್ದಾರೆ. ಅಲ್ಲದೇ, 143 ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕೆಂಬ ಒತ್ತಡ ಪಕ್ಷದೊಳಗೆ ಏಳುತ್ತಿದೆ ಎಂಬ ಸಂಗತಿಯನ್ನೂ ಪಾಸ್ವಾನ್ ತಿಳಿಸಿದ್ದರೆನ್ನಲಾಗಿದೆ.


ಕಳೆದ ಬಾರಿ, 2015ರಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಎನ್​ಡಿಎಗೆ ವಿರುದ್ಧವಾಗಿ ಸ್ಪರ್ಧಿಸಿ ಜಯಭೇರಿ ಭಾರಿಸಿತ್ತು. ಬಿಜೆಪಿ ಜೊತೆ ಇದ್ದ ಎಲ್​ಜೆಪಿ 42 ಸ್ಥಾನಗಳ ಪೈಕಿ ಎರಡರಲ್ಲಿ ಮಾತ್ರ ಗೆಲ್ಲಲು ಶಕ್ಯವಾಗಿತ್ತು. ಆಗಿನಿಂದಲೂ ಜೆಡಿಯು ಜೊತೆ ಎಲ್​ಜೆಪಿ ಸಂಬಂಧ ಅಲುಗಾಟದಲ್ಲಿಯೇ ಇದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ವಿಪಕ್ಷಗಳ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮ; ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ


ಈಗ ಬಿಹಾರದದಲ್ಲಿ ತಮ್ಮ ಎನ್​ಡಿಎ ಮಿತ್ರಪಕ್ಷಗಳ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನ ಶಮನಗೊಳಿಸಲು ಜೆ.ಪಿ. ನಡ್ಡಾ ಜೊತೆ ಅಮಿತ್ ಶಾ ಕೂಡ ಅಂಗಳಕ್ಕೆ ಇಳಿದಿರುವುದನ್ನು ನೋಡಿದರೆ ಈ ಬೆಳವಣಿಗೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಂತೆ ಇದೆ. ಇಂದು ಬಿಹಾರ ವಿಧಾನಸಭಾ ಚುನಾವಣೆಗೆ ಎನ್​ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ.


ಅತ್ತ, ಬಿಹಾರದ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿವೆ. ಆರ್​ಜೆಡಿ ನೇತೃತ್ವದಲ್ಲಿ ಕಾಂಗ್ರೆಸ್, ಎಡಪಕ್ಷಗಳು ಮಹಾಮೈತ್ರಿ ಮಾಡಿಕೊಂಡಿವೆ. ಆರ್​ಜೆಡಿಯ ತೇಜಸ್ವಿ ಯಾದವ್ ಅವರನ್ನ ಸಿಎಂ ಅಭ್ಯರ್ಥಿಯನ್ನಾಗಿ ಬಿಂಬಿಸಲಾಗಿದೆ.

First published: