ಕೋಲ್ಕತ್ತ: ಮಮತಾ ಬ್ಯಾನರ್ಜಿ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದು ಬಹುತೇಕ ಪಕ್ಕಾ ಆಗಿದೆ. 292 ಕ್ಷೇತ್ರಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲವಾಗಿದೆ. ಆದರೆ, ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಮತಾ ಅವರು ತಾವು ಸ್ಪರ್ಧಿಸಿದ್ದ ನಂದಿಗ್ರಾಮ ಕ್ಷೇತ್ರದಲ್ಲಿ ಮಾತ್ರ ಸೋತಿದ್ದಾರೆ.
ಇಂದು ಬೆಳಗ್ಗೆಯಿಂದ ಆರಂಭವಾದ ಮತ ಎಣಿಕೆಯಲ್ಲಿ ಟಿಎಂಸಿ ನಾಗಾಲೋಟದಲ್ಲಿ ಮುನ್ನಡೆಯುತ್ತಿದ್ದರೆ, ಮಮತಾ ಬ್ಯಾನರ್ಜಿ ಅವರು ಮಾತ್ರ ತೀವ್ರ ಹಿನ್ನಡೆ ಅನುಭವಿಸಿದ್ದರು. ಒಂದು ಕಾಲದ ತಮ್ಮ ಆಪ್ತ ಸಹಾಯಕ ಸುವೇಂದು ಅಧಿಕಾರಿ ಟಿಎಂಸಿಗೆ ಗುಡ್ಬೈ ಹೇಳಿ, ಬಿಜೆಪಿಯಿಂದ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಅಧಿಕಾರಿಗೆ ಪಾಠ ಕಲಿಸುವ ಸಲುವಾಗಿ ಮಮತಾ ಬ್ಯಾನಿರ್ಜಿ ಅವರು ತಾವು ಸ್ಪರ್ಧೆ ಮಾಡುತ್ತಿದ್ದ ಕ್ಷೇತ್ರವನ್ನು ಬಿಟ್ಟು ನಂದಿಗ್ರಾಮದಲ್ಲಿ ಸ್ಪರ್ಧೆ ಮಾಡಿದ್ದರು. ಆದರೆ, ಅವರು ಅಂದುಕೊಂಡಂತೆ ಗೆಲುವು ಅಷ್ಟು ಸುಲಭವಾಗಿರಲಿಲ್ಲ. ಮೊದಲ ಸುತ್ತಿನ ಮತ ಎಣಿಕೆ ಆರಂಭದಿಂದಲೂ ಮಧ್ಯಾಹ್ನದವರೆಗೂ ಸುವೇಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದರು. ಒಂದು ಹಂತದಲ್ಲಿ 30 ಸಾವಿರಕ್ಕೂ ಅಧಿಕ ಮತಗಳಿಂದ ಅಧಿಕಾರಿ ಮುಂದಿದ್ದರು. ಕೊನೆಗೆ 1622 ಮತಗಳ ಅಂತರದಿಂದ ಸೋಲೊಪ್ಪಿಕೊಂಡರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ