Mob Lynching| ರಾಜಸ್ಥಾನ; ಹಸುವಿನ ಕಳ್ಳಸಾಗಾಣೆ ಅನುಮಾನ, ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ!

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

ಗಾಯಾಳು ಪಿಂಟು ಭಿಲ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಗು ಎಂಬ ಪಟ್ಟಣದ ಬಳಿ ಈ ದಾಳಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ.

  • Share this:

    ರಾಜಸ್ಥಾನ: ಗೋವುಗಳ ಕಳ್ಳ ಸಾಗಾಣೆ ಅನುಮಾನದಿಂದ ಅಮಾಯಕರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡುವ ಘಟನೆ ದೇಶದ ಮೂಲೆ ಮೂಲೆಗಳಲ್ಲಿ ಆಗಿಂದಾಗ್ಗೆ ಸುದ್ದಿಯಾಗು ತ್ತಲೇ ಇದೆ. ಆದರೂ, ಈ ಅನೈತಿಕ ಪೊಲೀಸ್​ ಗಿರಿ ಪ್ರಕರಣಗಳು ಅಂತ್ಯ ಕಾಣುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದೀಗ ಇಂತಹದ್ದೆ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಹಸುಗಳ ಕಳ್ಳಸಾಗಣೆ ಆರೋಪದ ಮೇಲೆ ಓರ್ವ ವ್ಯಕ್ತಿಯ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆಗೆ ರಾಜಸ್ಥಾನದ ಚಿತ್ತೋರ್‌ಗಢ ಸಾಕ್ಷಿಯಾಗಿದೆ. ಮತ್ತೊಬ್ಬ ವ್ಯಕ್ತಿಯ ಮೇಲೂ ತೀವ್ರ ಹಲ್ಲೆ ನಡೆಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.


    ಮೃತ ವ್ಯಕ್ತಿಯನ್ನು ಬಾಬು ಲಾಲ್ ಭಿಲ್ ಎಂದು ಗುರುತಿಸಲಾಗಿದ್ದು, ಮಧ್ಯಪ್ರದೇಶದ ಅಚಲ್‌ಪುರದ ನಿವಾಸಿ ಎನ್ನಲಾಗಿದೆ. ಮೃತ ಬಾಬು ಮತ್ತು ಇನ್ನೊಬ್ಬ ವ್ಯಕ್ತಿ ಗಾಯಾಳು ಪಿಂಟು ಭಿಲ್ ವಾಹನದಲ್ಲಿ ತೆರಳುತಿದ್ದಾಗ ಜನರ ಗುಂಪೊಂದು ವಾಹನ ನಿಲ್ಲಿಸುವಂತೆ ಒತ್ತಾಯಿಸಿ, ಇಬ್ಬರನ್ನು ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    ಗಾಯಾಳು ಪಿಂಟು ಭಿಲ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಗು ಎಂಬ ಪಟ್ಟಣದ ಬಳಿ ಈ ದಾಳಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ.


    "ಹಸುಗಳನ್ನು ಸಾಗಿಸುತ್ತಿದ್ದ ವಾಹನ ನಿಲ್ಲಿಸಿ ಕೆಲವರು ಹಲ್ಲೆ ನಡೆಸುತ್ತಿದ್ದಾರೆ ಎಂದು ಮಧ್ಯರಾತ್ರಿ ಠಾಣೆಗೆ ಮಾಹಿತಿ ದೊರೆಯಿತು. ನಮ್ಮ ಅಧಿಕಾರಿಗಳು ಸ್ಥಳಕ್ಕೆ ತಲುಪಿದಾಗ, ಹತ್ತಿರದ ರೈಟಿ ಗ್ರಾಮ ಮತ್ತು ಸುತ್ತಮುತ್ತಲಿನ ಜನರು, ಬಾಬು ಮತ್ತು ಪಿಂಟು ಎಂಬ ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ನಡೆಸುತ್ತಿದ್ದರು" ಎಂದು ಐಜಿ(ಉದಯಪುರ ಶ್ರೇಣಿ) ಸತ್ಯವೀರ್ ಸಿಂಗ್ ಹೇಳಿದ್ದಾರೆ.


    ಇದನ್ನೂ ಓದಿ: Arvind Kejriwal| 2022 ಗುಜರಾತ್ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ ಖಚಿತ; ಮೋದಿ ರಾಜ್ಯದಲ್ಲಿ ಪರಿಸ್ಥಿತಿ ಬದಲಾಗಲಿದೆ ಎಂದ ಕೇಜ್ರಿವಾಲ್!


    "ದಾಳಿಕೋರರು, ಹಲ್ಲೆಗೊಳಗಾದ ಇಬ್ಬರ ದಾಖಲೆಗಳು ಮತ್ತು ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಬಂದಾಗ ಹಲ್ಲೆ ನಡೆಸುತ್ತಿದ್ದವರು ಓಡಿಹೋದರು. ನಮ್ಮ ಅಧಿಕಾರಿಗಳು ಇಬ್ಬರನ್ನೂ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು, ಆದರೆ, ಆಸ್ಪತ್ರೆಯಲ್ಲಿ ಬಾಬು ನಿಧನರಾದರು. ಗಾಯಾಳು ಪಿಂಟು ಚೇತರಿಸಿಕೊಳ್ಳುತ್ತಿದ್ದಾರೆ.


    ಇದನ್ನೂ ಓದಿ: Priyanka Gandhi| ರಾಮ ಮಂದಿರ ಟ್ರಸ್ಟ್​ ಮೇಲೆ ಭ್ರಷ್ಟಾಚಾರದ ಆರೋಪ; ಇದು ದಾನ-ನಂಬಿಕೆಗೆ ಅವಮಾನ ಎಂದ ಪ್ರಿಯಾಂಕ ಗಾಂಧಿ


    "ನಾವು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ. ಯಾವುದೇ ಆರೋಪಿಗಳನ್ನು ಬಿಡುವುದಿಲ್ಲ. ಈಗಾಗಲೇ ನಾವು ಕೆಲವರನ್ನೂ ವಶಕ್ಕೆ ಪಡೆದಿದ್ದೇವೆ" ಎಂದು ಸತ್ಯವೀರ್ ಸಿಂಗ್ ಮಾಹಿತಿ ನೀಡಿದ್ದಾರೆ.



    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

    Published by:MAshok Kumar
    First published: