ನವ ದೆಹಲಿ (ಜೂನ್. 14); ಶತಮಾನಗಳಿಂದ ಇತ್ಯರ್ಥವಾದಗ ರಾಮ ಜನ್ಮಭೂಮಿ ವಿವಾದಕ್ಕೆ ಸುಪ್ರೀಂ ಕೋರ್ಟ್ ಪೂರ್ಣ ವಿರಾಮ ಇಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಕಳೆದ ವರ್ಷ ಭೂಮಿ ಪೂಜೆ ನೆರವೇರಿಸಿ ದ್ದರು. ಅಲ್ಲದೆ, ದೇವಾಲಯ ನಿರ್ಮಾಣಕ್ಕೆ ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಅನ್ನು ನಿರ್ಮಿಸಿ, ದೇಶದಾದ್ಯಂತ ದೇಣಿಗೆ ಸಂಗ್ರಹಿಸಲಾಗಿತ್ತು. ರಾಮ ಜನ್ಮಭೂಮಿ ಹೆಸರಿನಲ್ಲಿ ಅಯೋಧ್ಯೆ ಯಲ್ಲಿ ಅಪಾರ ಭೂಮಿಯನ್ನೂ ಖರೀದಿ ಮಾಡಲು ಟ್ರಸ್ಟ್ ಮುಂದಾಗಿತ್ತು. ಆದರೆ, ಹೀಗೆ ಖರೀದಿ ಮಾಡಲಾದ ಭೂಮಿ ಹೆಸರಿನಲ್ಲಿ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಲೇ ಇದೆ. ಈ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, "ಭಕ್ತರ ದೇಣಿಗೆ ದುರುಪಯೋಗಪಡಿಸಿ ಕೊಳ್ಳುವುದು ಅಧರ್ಮ ಮತ್ತು ಪಾಪವಾಗಿದ್ದು, ಇದು ಭಕ್ತರ ನಂಬಿಕೆಗೆ ಮಾಡಿದ ಅಪಮಾನವಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
करोड़ों लोगों ने आस्था और भक्ति के चलते भगवान के चरणों में चढ़ावा चढ़ाया। उस चंदे का दुरुपयोग अधर्म है, पाप है, उनकी आस्था का अपमान है।
— Priyanka Gandhi Vadra (@priyankagandhi) June 14, 2021
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್ ಭೂ ದಂಧೆ ನಡೆಸುತ್ತಿದೆ ಎಂದು ಆರೋಪ ಮಾಡಿದ್ದರು.
2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ಚಂಪತ್ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್ಸಿಂಗ್ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ. ತದನಂತರ ಈ ವಿವಾದ ದೇಶದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಮತ್ತು ಅಸಮಾಧಾನಕ್ಕೆ ಕಾರಣವಾಗಿತ್ತು.
ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.
ಇದನ್ನೂ ಓದಿ: ಕುಟುಂಬದಲ್ಲಿ ಕೊರೊನಾದಿಂದ ಮೃತಪಟ್ಟ ಒಬ್ಬರಿಗೆ ₹1 ಲಕ್ಷ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ
ಈ ಹಿಂದೆ ಕೆಲ ಅನಾಮಧೇಯ ವ್ಯಕ್ತಿಗಳು ನಕಲಿ ಚೆಕ್ ಬಳಕೆ ಮಾಡಿ ರಾಮ ಮಂದಿರ ಟ್ರಸ್ಟ್ನಿಂದ ದೊಡ್ಡ ಮೊತ್ತದ ಹಣ ವಿತ್ಡ್ರಾ ಮಾಡಿದ್ದರು. ನಂತರ ಪೊಲೀಸರ ವಶವಾಗಿದ್ದರು. ಆದರೆ, ಇದೀಗ ರಾಮ ಜನ್ಮಭೂಮಿ ಟ್ರಸ್ಟ್ನಲ್ಲಿರುವವರೇ ಹಣದ ದುರ್ಬಳಕೆಗೆ ಮುಂದಾಗಿರುವುದು ದೇಶದಾದ್ಯಂತ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ