ಕೊಚ್ಚಿ (ಜು. 29): ಕೆಲವು ದಿನಗಳಿಂದ ಕೇರಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಕೇರಳ ಮಾತ್ರವಲ್ಲದೆ ದಕ್ಷಿಣ ಭಾರತದಾದ್ಯಂತ ಈ ವರ್ಷ ಮಳೆ ಭಾರೀ ಕಡಿಮೆಯಾಗಿದೆ. ಆದರೆ, ಮಂಗಳವಾರದಿಂದ ಕೇರಳದಲ್ಲಿ ಮಳೆ ಹೆಚ್ಚಾಗಿದೆ. ಇನ್ನೂ ಕೆಲವು ದಿನ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಬುಧವಾರ ಹವಾಮಾನ ಇಲಾಖೆ ಕೇರಳದ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳದ ದಕ್ಷಿಣ ಜಿಲ್ಲೆಗಳಾದ ತಿರುವನಂತಪುರಂ, ಕೊಲ್ಲಂ, ಪತನಾಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳದ ರಾಜಧಾನಿಯ ಸುತ್ತಮುತ್ತ ಕೆಲವು ದಿನಗಳಿಂದ ಮಳೆ ಹೆಚ್ಚಾಗಿದೆ. ಕೊಚ್ಚಿಯ ರಸ್ತೆಗಳೆಲ್ಲ ತುಂಬಿ, ಕೆರೆಯಂತಾಗಿದೆ. ಇದರಿಂದ ಜನಸಂಚಾರಕ್ಕೆ ತೊಂದರೆ ಉಂಟಾಗಿದೆ.
ಇದನ್ನೂ ಓದಿ: ಫಾರಿನ್ ಹುಡುಗನ ಜೊತೆ ಆಂಧ್ರದ ಹುಡುಗಿ ಮದುವೆ; ಮೊದಲ ರಾತ್ರಿಯೇ ವಧುವಿಗೆ ಗೊತ್ತಾಯ್ತು ಕಟು ಸತ್ಯ!
Kerala: India Meteorological Department issues Orange alert (very heavy rain) for Thiruvananthapuram, Kollam, Pathanamthitta and Idukki districts today.
— ANI (@ANI) July 29, 2020
"Heavy rainfall in #Ernakulam. Waterlogging reported from several places#KeralaMonsoons #Keralarains pic.twitter.com/OEsYfkfcKb"
— Mahir Haneef (@mahirhaneefTOI) July 29, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ