ನ್ಯಾಷನಲ್ ಹೆರಾಲ್ಡ್ (National Herald) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿಗೆ ಸಂಕಷ್ಟ ಇನ್ನಿಲ್ಲದಂತೆ ಕಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ನಿನ್ನೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರನ್ನು ನಿನ್ನೆ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಇಂದು ಸಹ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಸೋನಿಯಾ ಗಾಂಧಿ ವಿಚಾರಣೆ ನಡೆಸಿದ್ದಾರೆ. ಇ.ಡಿ ಅಧಿಕಾರಿಗಳ ಮುಂದೆ ಸೋನಿಯಾ ಗಾಂಧಿ, ಎಲ್ಲಾ ಹಣಕಾಸು ನಿರ್ಧಾರಗಳನ್ನು ದಿವಂಗತ ಮೋತಿ ಲಾಲ್ ವೋರಾ (Moti Lal Vora) ತೆಗೆದುಕೊಂಡಿದ್ದರು ಎಂದು ಹೇಳಿದ್ದಾರೆ. ಹಣಕಾಸಿನ ಅಂಶಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ (Rahul Gandhi) ಅವರನ್ನು ಪ್ರಶ್ನಿಸಿದ್ದಾಗ, ಅವರು ಇದೇ ರೀತಿ ಹೇಳಿದ್ರಂತೆ. ಎಲ್ಲಾ ವಹಿವಾಟುಗಳನ್ನು ವೋರಾ ನಿರ್ವಹಿಸಿದ್ದಾರೆ ಅಂತ ತಿಳಿಸಿದ್ರಂತೆ.
ಒಂದೇ ಉತ್ತರ ನೀಡಿದ ಸೋನಿಯಾ, ರಾಹುಲ್!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನಡೆಸಿದ ವಿಚಾರಣೆ ವೇಳೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪುತ್ರ ಹಾಗೂ ಪಕ್ಷದ ನಾಯಕ ರಾಹುಲ್ ಗಾಂಧಿ ತನಿಖಾ ಸಂಸ್ಥೆ ಅಧಿಕಾರಿಗಳಿಗೆ ಹೇಳಿದಂತೆಯೇ ಉತ್ತರ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಎಲ್ಲಾ ಹಣಕಾಸು ನಿರ್ಧಾರಗಳನ್ನು ಮೋತಿ ಲಾಲ್ ವೋರಾ ತೆಗೆದುಕೊಂಡರು ಎಂದು ಸೋನಿಯಾ, ರಾಹುಲ್ ಗಾಂಧಿ ಒಂದೇ ತರನಾದ ಉತ್ತರ ಹೇಳಿದ್ದಾರೆ.
ಸೋನಿಯಾ ಗಾಂಧಿ ಹೇಳಿದ್ದೇನು?
ಸೋನಿಯಾ ಗಾಂಧಿಗೆ ವಿಚಾರಣೆಯ ಮೊದಲ ಎರಡು ದಿನಗಳಲ್ಲಿ, ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ಗೆ ಸಂಬಂಧಿಸಿದ ಹಣಕಾಸಿನ ವಹಿವಾಟಿನ ಬಗ್ಗೆ ಕೇಳಲಾಗಿದೆ. ಪಕ್ಷದ ಅಧ್ಯಕ್ಷರು ತಮ್ಮ ವಿಚಾರಣೆಯ ಸಮಯದಲ್ಲಿ, ಎಲ್ಲಾ ಹಣಕಾಸು ಸಂಬಂಧಿತ ವಿಷಯಗಳನ್ನು ದಿವಂಗತ ಮೋತಿ ಲಾಲ್ ವೋರಾ ನಿರ್ವಹಿಸಿದ್ದಾರೆ ಎಂದು ಇಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ವೋರಾ 2020 ರಲ್ಲಿ ನಿಧನರಾದರು ಮತ್ತು ಕಾಂಗ್ರೆಸ್ ಪಕ್ಷದ ದೀರ್ಘಾವಧಿಯ ಖಜಾಂಚಿಯಾಗಿದ್ದರು.
ರಾಹುಲ್ ಗಾಂಧಿ ಉತ್ತರಿಸಿದ್ದೇನು?
ಕುತೂಹಲಕಾರಿಯಾಗಿ, ಹಣಕಾಸಿನ ಅಂಶಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದಾಗ, ಎಲ್ಲಾ ವಹಿವಾಟುಗಳನ್ನು ವೋರಾ ನಿರ್ವಹಿಸಿದ್ದಾರೆ ಎಂದು ಇ.ಡಿ ಅಧಿಕಾರಿಗಳಿಗೆ ತಿಳಿಸಿದ್ದರು. ಜೂನ್ ತಿಂಗಳಲ್ಲಿ ರಾಹುಲ್ ತಮ್ಮ ವಿಚಾರಣೆಯ ಸಂದರ್ಭದಲ್ಲಿ, ಯಂಗ್ ಇಂಡಿಯನ್ ಕಂಪನಿಯು ಲಾಭರಹಿತ ಕಂಪನಿಯಾಗಿದ್ದು, ಕಂಪನಿಗಳ ಕಾಯಿದೆಯ ವಿಶೇಷ ನಿಬಂಧನೆಯ ಅಡಿಯಲ್ಲಿ ಸಂಘಟಿತವಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದರು. ಮೂಲಗಳ ಪ್ರಕಾರ ಅದರಲ್ಲಿ ಒಂದು ಪೈಸೆಯನ್ನೂ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಇದನ್ನೂ ಓದಿ: National Herald Case: ಇಂದು ಮತ್ತೆ ಸೋನಿಯಾ ಗಾಂಧಿ ವಿಚಾರಣೆ, ಇಂದಿಗೆ ಮುಗಿಯುತ್ತಾ?
ಕಾಂಗ್ರೆಸ್ ನಾಯಕರು ಹೇಳಿದ್ದೇನು?
ರಾಹುಲ್ ಮತ್ತು ಸೋನಿಯಾ ಹೊರತುಪಡಿಸಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಕುಮಾರ್ ಬನ್ಸಾಲ್ ಅವರು ಇ.ಡಿ ಮೊದಲು ದಿವಂಗತ ಮೋತಿ ಲಾಲ್ ವೋರಾ ಹೆಸರನ್ನು ತೆಗೆದುಕೊಂಡಿದ್ದರು.
ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
2016 ರಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿದ್ದ ಆದಾಯ ತೆರಿಗೆ ಇಲಾಖೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್ ಪ್ರವರ್ತಿತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ನಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಸೋನಿಯಾ ಗಾಂಧಿ ಮತ್ತು ಅವರ ಮಗ ಯಂಗ್ ಇಂಡಿಯನ್ನ ಪ್ರವರ್ತಕರು ಮತ್ತು ಬಹುಪಾಲು ಷೇರುದಾರರಲ್ಲಿ ಸೇರಿದ್ದಾರೆ ಮತ್ತು ಪ್ರತಿಯೊಬ್ಬರೂ ಕಂಪನಿಯಲ್ಲಿ 38 ಪ್ರತಿಶತ ಪಾಲನ್ನು ಹೊಂದಿದ್ದಾರೆ.
ಇದನ್ನೂ ಓದಿ: Congress Protest: ಕಾಂಗ್ರೆಸ್ ಮುಖಂಡನ ತಲೆಗೂದಲು ಹಿಡಿದೆಳೆದ ಪೊಲೀಸ್, ವಿಡಿಯೋ ವೈರಲ್
ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರು
2013 ರಲ್ಲಿ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ದೆಹಲಿಯ ವಿಚಾರಣಾ ನ್ಯಾಯಾಲಯವು ಯಂಗ್ ಇಂಡಿಯನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ಗಮನಕ್ಕೆ ತೆಗೆದುಕೊಂಡ ನಂತರ ಇಡಿ ಪಿಎಂಎಲ್ಎಯ ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿರುವುದರಿಂದ ಗಾಂಧಿ ಕುಟುಂಬವನ್ನು ತನಿಖೆ ಮಾಡಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ