• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಕೋಲ್ಕತ್ತಾ| ತಲೆ ಬೋಳಿಸಿ ಗಂಗಾ ಜಲದಿಂದ ಪ್ರಾಯಶ್ಚಿತ್ತ ಮಾಡಿ ಬಿಜೆಪಿಯಿಂದ ಟಿಎಂಸಿಗೆ ಮರಳಿದ 200 ಕಾರ್ಯಕರ್ತರು!

ಕೋಲ್ಕತ್ತಾ| ತಲೆ ಬೋಳಿಸಿ ಗಂಗಾ ಜಲದಿಂದ ಪ್ರಾಯಶ್ಚಿತ್ತ ಮಾಡಿ ಬಿಜೆಪಿಯಿಂದ ಟಿಎಂಸಿಗೆ ಮರಳಿದ 200 ಕಾರ್ಯಕರ್ತರು!

ತಲೆ ಬೋಳಿಸಿ ಗಂಗಾಜಲ ಸ್ನಾನ ಮಾಡಿ ಬಿಜೆಪಿಯಿಂದ ಟಿಎಂಸಿ ಸೇರಿದ ಕಾರ್ಯಕರ್ತ.

ತಲೆ ಬೋಳಿಸಿ ಗಂಗಾಜಲ ಸ್ನಾನ ಮಾಡಿ ಬಿಜೆಪಿಯಿಂದ ಟಿಎಂಸಿ ಸೇರಿದ ಕಾರ್ಯಕರ್ತ.

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಮಾರು 200 ಬಿಜೆಪಿ ಕಾರ್ಯಕರ್ತರು ತಲೆ ಬೋಳಿಸಿ ಗಂಗಾ ಜಲದಿಂದ ತಮ್ಮನ್ನು ಶುದ್ದೀಕರಿಸಿ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಘಟನೆ ಕುತೂಹಲಕ್ಕೆ ಕಾರಣವಾಗಿದೆ.

  • Share this:

    ಕೋಲ್ಕತ್ತಾ (ಜೂನ್ 23); ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಆರಂಭವಾಗು ವುದಕ್ಕೆ ಒಂದು ವರ್ಷದ ಮುಂಚೆಯೇ ಬಿಜೆಪಿ ನಾಯಕರು ಬಂಗಾಳದಲ್ಲಿ ಪಕ್ಷಾಂತರ ಪರ್ವ ಆರಂಭಿಸಿದ್ದರು. ಈ ವೇಳೆ ನೂರಾರು ಟಿಎಂಸಿ ಕಾರ್ಯಕರ್ತರು ಮತ್ತು ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೂ, ಆ ಚುನಾವಣೆ ಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಸಾಧ್ಯವಾಗಿಲ್ಲ. ಪರಿಣಾಮ ಇದೀಗ ದಂಡು ದಂಡಾಗಿ ಎಲ್ಲಾ ಕಾರ್ಯಕರ್ತರು ಬಿಜೆಪಿಯಿಂದ ಟಿಎಂಸಿಗೆ ಮರಳುತ್ತಿದ್ದಾರೆ. ಅದರಲ್ಲೂ ಟಿಎಂಸಿಗೆ ಮರಳುವ ಮುನ್ನ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಮಾರು 200 ಬಿಜೆಪಿ ಕಾರ್ಯಕರ್ತರು ತಲೆ ಬೋಳಿಸಿ ಗಂಗಾ ಜಲದಿಂದ ತಮ್ಮನ್ನು ಶುದ್ದೀಕರಿಸಿ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಘಟನೆ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಟಿಎಂಸಿಯಲ್ಲೇ ಇದ್ದ ಅವರು ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಸೇರಿದ್ದರು. ಇದೀಗ ಅವರು ತಾವು ಬಿಜೆಪಿಗೆ ಸೇರಿರುವುದು ತಪ್ಪು ಎಂದು ಪ್ರತಿಪಾದಿಸಿ ಟಿಎಂಸಿಗೆ ಮರಳಿದ್ದಾರೆ ಎನ್ನಲಾಗಿದೆ.


    ಬಿಜೆಪಿಗೆ ಸೇರಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಅವರು ತಲೆ ಬೋಳಿಸಿಕೊಂಡು, ಗಂಗಾಜಲವನ್ನು ಸಿಂಪಡಿಸಿ ತಮ್ಮನ್ನು ತಾವು ಶುದ್ದೀಕರಿಸಿ, ಅರಂಬಾಗ್ ಸಂಸದ ಅಪರೂಪಾ ಪೋದ್ದಾರ್ ಅವರ ಸಮ್ಮುಖದಲ್ಲಿ ಟಿಎಂಸಿ ಧ್ವಜವನ್ನು ಹಿಡಿದು ಪಕ್ಷಕ್ಕೆ ಮರಳಿದ್ದಾರೆ. ಈ ಸಂಬಂಧ ಬಿಡುಗಡೆಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


    ಅರಂಬಾಗ್‌ನಲ್ಲಿರುವ ಬಡವರಿಗೆ ಉಚಿತ ಆಹಾರವನ್ನು ನೀಡುವ ನಿಟ್ಟಿನಲ್ಲಿ ಪಕ್ಷವು ಮಂಗಳವಾರ ಕಾರ್ಯಕ್ರಮವನ್ನು ಆಯೋಜಿಸಿತ್ತು ಎಂದು ಟಿಎಂಸಿ ಸಂಸದ ಅಪರೂಪಾ ಪೋದ್ದಾರ್ ತಿಳಿಸಿದ್ದಾರೆ.


    ಈ ಕಾರ್ಯಕ್ರಮದ ಸಂದರ್ಭದಲ್ಲಿ ದಲಿತ ಸಮುದಾಯದ ಕೆಲವರು ಬಂದು ಬಿಜೆಪಿಗೆ ಸೇರುವ ಮೂಲಕ ತಪ್ಪು ಮಾಡಿದ್ದೇವೆ ಎಂದು ಹೇಳಿದ್ದಾರೆ. ಅವರು ಮಾಡಿದ ತಪ್ಪಿಗೆ ಪ್ರಾಯಶ್ಚಿತ ಮಾಡಿ ನಂತರ ಮತ್ತೆ ಟಿಎಂಸಿಗೆ ಸೇರಲು ಅವರು ಬಯಸಿದ್ದರು ಎಂದು ಅಪರೂಪಾ ಪೋದ್ದಾರ್ ಹೇಳಿದ್ದಾರೆ.


    ಇದನ್ನೂ ಓದಿ: ಚುನಾವಣೆಗೂ ಮುನ್ನವೇ ಸಿಎಂ ಸೀಟ್​ಗೆ ಟವೆಲ್ ಹಾಕುತ್ತಿರುವ ಕೈ ನಾಯಕರು; ಶಾಸಕ ಅಖಂಡ ಶ್ರೀನಿವಾಸ್ ಹೇಳಿದ್ದೇನು?


    ಟಿಎಂಸಿ ಸೇರುತ್ತಿರುವ ಹಲವು ಬಿಜೆಪಿ ಕಾರ್ಯಕರ್ತರು


    ಇತ್ತೀಚೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಜಯಗಳಿಸಿದಾಗಿನಿಂದ, ಪಶ್ಚಿಮ ಬಂಗಾಳದ ಹಲವಾರು ಜಿಲ್ಲೆಗಳಲ್ಲಿ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಮರಳುತ್ತಿದ್ದಾರೆ.


    ಈ ತಿಂಗಳ ಆರಂಭದಲ್ಲಿ, ಪಶ್ಚಿಮ ಬಂಗಾಳದ ಬಿರ್ಭಂನಲ್ಲಿ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ತಮ್ಮನ್ನು ಟಿಎಂಸಿಗೆ ಸೇರಿಸಿಕೊಳ್ಳಬೇಕು ಎಂದು ಪಕ್ಷದ ಕಚೇರಿಯ ಹೊರಗೆ ಧರಣಿ ನಡೆಸಿದ್ದರು. ನಂತರ ಅವರನ್ನು ಟಿಎಂಸಿಗೆ ಸೇರಿಸಿಕೊಳ್ಳಲಾಯಿತು. ಈ ಕಾರ್ಯಕರ್ತರು ತಾವು ಪಕ್ಷ ಬದಲಾಯಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದರು.


    ಇದನ್ನೂ ಓದಿ: Delta Plus Variant in India| ಮೈಸೂರಿನಲ್ಲೊಂದು ಡೆಲ್ಟಾ ಪ್ಲಸ್​ ಕೊರೋನಾ ಕೇಸ್​ ಪತ್ತೆ; ಸಚಿವ ಸುಧಾಕರ್ ಮಾಹಿತಿ


    ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಭುಗಿಲೆದ್ದ ಹಿಂಸಾಚಾರದ ಪರಿಣಾಮವಾಗಿ ಪಕ್ಷದ ಕಾರ್ಯಕರ್ತರು ಟಿಎಂಸಿಗೆ ವಲಸೆ ಹೋಗುತ್ತಿದ್ದಾರೆ ಎಂದು ಬಿಜೆಪಿ ಬಣ್ಣಿಸಿದೆ. ಈ ಕಾರ್ಯಕರ್ತರು ತಮ್ಮ ಮತ್ತು ತಮ್ಮ ಕುಟುಂಬದ ಭಯಕ್ಕಾಗಿ ಮತ್ತೆ ಆಡಳಿತ ಪಕ್ಷಕ್ಕೆ ಸೇರಲು ಬಯಸುತ್ತಿದ್ದಾರೆ ಎಂದು ಅದು ಹೇಳಿದೆ.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:MAshok Kumar
    First published: