• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಟೂಲ್​ಕಿಟ್​ ಹಗರಣ; ದಿಶಾ ರವಿ ಬೆನ್ನಿಗೆ ಬಾಂಬೆ ಹೈಕೋರ್ಟ್​ ವಕೀಲೆ ನಿಕಿತಾ ಜಾಕೋಬ್​ ಬಂಧನಕ್ಕೆ ವಾರೆಂಟ್!

ಟೂಲ್​ಕಿಟ್​ ಹಗರಣ; ದಿಶಾ ರವಿ ಬೆನ್ನಿಗೆ ಬಾಂಬೆ ಹೈಕೋರ್ಟ್​ ವಕೀಲೆ ನಿಕಿತಾ ಜಾಕೋಬ್​ ಬಂಧನಕ್ಕೆ ವಾರೆಂಟ್!

ವಕೀಲೆ ನಿಕಿತಾ ಜಾಕೋಬ್​.

ವಕೀಲೆ ನಿಕಿತಾ ಜಾಕೋಬ್​.

ಇತ್ತೀಚೆಗೆ ಗಣರಾಜ್ಯೋತ್ಸವದ ದಿನ ನಡೆದ ಗಲಭೆಯ ಸಂದರ್ಭದಲ್ಲಿ ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ, ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್​ ರೈತರ ಪ್ರತಿಭಟನೆಯಲ್ಲಿ ಜನರು ಭಾಗವಹಿಸಬಹುದಾದ ವಿಭಿನ್ನ ಮಾರ್ಗಗಳನ್ನು ತಿಳಿಸುವ ಟೂಲ್​ಕಿಟ್​ ಅನ್ನು ಶೇರ್​ ಮಾಡಿದ್ದರು.

ಮುಂದೆ ಓದಿ ...
  • Share this:

ದೆಹಲಿ (ಫೆಬ್ರವರಿ 15); ಗಣರಾಜ್ಯೋತ್ಸವ ಗಲಭೆಗೆ ಟೂಲ್​​ಕಿಟ್​ ಬಳಸಿದ ಆರೋಪಕ್ಕೆ ಸಂಬಧಿಸಿದಂತೆ ಇತ್ತೀಚೆಗೆ ಬೆಂಗಳೂರಿನ ಮೌಂಟ್​ ಕಾರ್ಮೆಲ್​ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಪರಿಸರ ಕಾರ್ಯಕರ್ತೆ 21 ವರ್ಷದ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಇದರ ಬೆನ್ನಿಗೆ ಇದೀಗ ಟೂಲ್​​ಕಿಟ್​ ರಚಿಸುವಲ್ಲಿ ಭಾಗವಹಿಸಿದ್ದರು ಮತ್ತು ಪ್ರಮುಖ ಪಾತ್ರವಹಿಸಿದ್ದರು ಎಂಬ ಆರೋಪದ ಮೇಲೆ ಬಾಂಬೆ ಹೈಕೋರ್ಟ್ ವಕೀಲೆ ನಿಕಿತಾ ಜಾಕೋಬ್ ವಿರುದ್ಧವೂ ಇದೀಗ ದೆಹಲಿ ಪೊಲೀಸರು ವಾರಂಟ್ ಹೊರಡಿಸಿದ್ದಾರೆ. ಅಲ್ಲದೆ, ಅವರನ್ನು ಶೀಘ್ರದಲ್ಲಿ ದೆಹಲಿ ಪೊಲೀಸರು ಬಂಧಿಸಲಿದ್ದು, ಮತ್ತೋರ್ವ ಹೋರಾಟಗಾರ ಶಾಂತನೂ ಅವರನ್ನು ಪೊಲೀಸರು ಬಂಧಿಸುವುದಕ್ಕಾಗಿ ಹುಡುಕುತ್ತಿದ್ದಾರೆ ಎನ್ನಲಾಗುತ್ತಿದೆ.


ದೆಹಲಿ ಪೊಲೀಸರು ವಾರಂಟ್ ಹೊರಡಿಸುತ್ತಿದ್ದಂತೆ ನಿಕಿತಾ ಜಾಕೋಬ್​ ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್​ ಮೊರೆ ಹೋಗಿದ್ಧಾರೆ. ನಿಕಿತಾ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್​ ಮಂಗಳವಾರ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.​


ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ 80 ದಿನಗಳಿಂದ ದೇಶದ ರೈತರು ದೆಹಲಿ ಹೊರ ವಲಯದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಗಣರಾಜ್ಯೋತ್ಸವದ ದಿನ ನಡೆದ ಗಲಭೆಯ ಸಂದರ್ಭದಲ್ಲಿ ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ, ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್​ ರೈತರ ಪ್ರತಿಭಟನೆಯಲ್ಲಿ ಜನರು ಭಾಗವಹಿಸಬಹುದಾದ ವಿಭಿನ್ನ ಮಾರ್ಗಗಳನ್ನು ತಿಳಿಸುವ ಟೂಲ್​ಕಿಟ್​ ಅನ್ನು ಶೇರ್​ ಮಾಡಿದ್ದರು.


ಗಣರಾಜ್ಯೋತ್ಸವ ಗಲಭೆ ಸಂದರ್ಭದಲ್ಲಿ ಈ ಟೂಲ್​​ಕಿಟ್​ ಪರಿಣಾಮಕಾರಿ ಪಾತ್ರ ನಿರ್ವಹಿಸಿದೆ ಎಂದು ಈಗಾಗಲೇ ಗ್ರೇಟಾ ಥನ್ಬರ್ಗ್​ ವಿರುದ್ಧ ದೆಹಲಿಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಅಲ್ಲದೆ, ಗಣರಾಜ್ಯೋತ್ಸವದಂದು ಟ್ವೀಟ್​ ಮೂಲಕ ಬಿರುಗಾಳಿ ಎಬ್ಬಿಸುವ ಉದ್ದೇಶದಿಂದ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ. ಧಲಿವಾಲ್ ತನ್ನ ಸಹೋದ್ಯೋಗಿ ಪುನೀತ್ ಮೂಲಕ ಜಾಕೋಬ್ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ನ್ಯೂಸ್ 18 ಗೆ ತಿಳಿಸಿವೆ.


ಇದನ್ನೂ ಓದಿ: FASTag: ಇಂದು ಮಧ್ಯರಾತ್ರಿಯಿಂದ ಫಾಸ್ಟ್‌ಟ್ಯಾಗ್ ಕಡ್ಡಾಯ; ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..!


"ಜನವರಿ 26 ರ ಮೊದಲು ಜೂಮ್ ಸಭೆ ನಡೆದಿತ್ತು, ಇದರಲ್ಲಿ ಧಲಿವಾಲ್, ಜಾಕೋಬ್ ಮತ್ತು ದಿಶಾ ರವಿ ಇತರರು ಭಾಗವಹಿಸಿದ್ದರು. ಅವರು ಒಬ್ಬ ರೈತನ ಸಾವಿನ ಬಗ್ಗೆಯೂ ಮಾತನಾಡಿದರು. ದಿಶಾ ರವಿ ಅವರಿಗೆ ಥನ್‌ಬರ್ಗ್‌ ಬಗ್ಗೆ ತಿಳಿದಿದ್ದರಿಂದ ಅವರನ್ನು ವಿಮಾನದಲ್ಲಿ ಕರೆದೊಯ್ಯಲಾಯಿತು" ಎಂದು ಮೂಲಗಳು ತಿಳಿಸಿವೆ.


ನಾಲ್ಕು ದಿನಗಳ ಹಿಂದೆ ವಿಶೇಷ ಸೆಲ್ ಜಾಕೋಬ್ ಮನೆಯನ್ನು ಪರಿಶೀಲಿಸಿದ್ದು, ಆಕೆಯ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಪರೀಕ್ಷಿಸಿದೆ. ಹೀಗಾಗಿ ಆಕೆಯನ್ನು ವಿಚಾರಣೆಗೆ ಒಳಪಡಿಸುವ ಸಲುವಾಗಿ ದೆಹಲಿ ಪೊಲೀಸರು ಆಕೆಯನ್ನು ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ, ನಿಕಿತಾ ಜಾಕೋಬ್​ ಪರಾರಿಯಾಗಿದ್ದಾರೆ. ಹೀಗಾಗಿ ಇಂದು ಅವರ ವಿರುದ್ಧ ಬಂಧನದ ವಾರೆಂಟ್​ ಹೊರಡಿಸಿದೆ.

First published: