National Herald Case: ಮತ್ತೆ ಜುಲೈ 25ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿಗೆ ಇಡಿ ಸೂಚನೆ

ಸೋನಿಯಾ ಗಾಂಧಿ

ಸೋನಿಯಾ ಗಾಂಧಿ

ಇಂದು ವಿಚಾರಣೆಗೆ ಹೋಗುವಾಗ ಅನಾರೋಗ್ಯದ ಕಾರಣಕ್ಕಾಗಿ ಮಗಳು ಪ್ರಿಯಾಂಕಾ ಗಾಂಧಿಯನ್ನು ಜೊತೆಯಲ್ಲಿ ಕರೆತರುವುದಾಗಿ ತಿಳಿಸಿದ್ದರು. ಇಡಿ ಅಧಿಕಾರಿಗಳು ಸಮ್ಮತಿ ನೀಡಿದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆ ವೇಳೆ ಪ್ರಿಯಾಂಕಾ ಗಾಂಧಿ ಕೂಡ ಉಪಸ್ಥಿತರಿದ್ದರು. 

  • Share this:

ನವದೆಹಲಿ, ಜು. 21: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Money Laundering Case) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Congress Present Sonia Gandhi) ಅವರನ್ನು ಗುರುವಾರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಜುಲೈ 25ರಂದು ಮತ್ತೆ  ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಿದೆ. ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ಬರುವಂತೆ ಜೂನ್ ತಿಂಗಳಲ್ಲೇ ತಿಳಿಸಲಾಗಿತ್ತು. ಆದರೆ ಅವರಿಗೆ ಕೋವಿಡ್ ಪಾಸಿಟಿವ್ (Covid Positive) ಬಂದ ಕಾರಣದಿಂದ ವಿಳಂಬವಾಗಿದ್ದು ಇಂದು ವಿಚಾರಣೆ ನಡೆಸಲಾಯಿತು.


ತಾಯಿ ಸೋನಿಯಾಗೆ ಪುತ್ರಿ ಪ್ರಿಯಾಂಕಾ ಸಾಥ್


75 ವರ್ಷದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು "ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾದ ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಕಟ್ಟುನಿಟ್ಟಾಗಿ ಸಲಹೆ ನೀಡಿದ್ದರು. ಜೂನ್ 2 ರಂದು ಸೋನಿಯಾ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ ಹೆಚ್ಚಿನ ಸಮಯವನ್ನು ಕೋರಿದ್ದರು. ಇಂದು ವಿಚಾರಣೆಗೆ ಹೋಗುವಾಗ ಅನಾರೋಗ್ಯದ ಕಾರಣಕ್ಕಾಗಿ ಮಗಳು ಪ್ರಿಯಾಂಕಾ ಗಾಂಧಿಯನ್ನು ಜೊತೆಯಲ್ಲಿ ಕರೆತರುವುದಾಗಿ ತಿಳಿಸಿದ್ದರು. ಇಡಿ ಅಧಿಕಾರಿಗಳು ಸಮ್ಮತಿ ನೀಡಿದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆ ವೇಳೆ ಪ್ರಿಯಾಂಕಾ ಗಾಂಧಿ ಕೂಡ ಉಪಸ್ಥಿತರಿದ್ದರು.


ಇದನ್ನೂ ಓದಿ: B S Yediyurappa: ಕೂಸು ಹುಟ್ಟುವ ಮುನ್ನವೇ ಕುಲಾವಿ; HDK, ಡಿಕೆಶಿ ಕಿತ್ತಾಟಕ್ಕೆ ಯಡಿಯೂರಪ್ಪ ಟಾಂಗ್


ಇಡಿ ಕಚೇರಿಗೆ ಬಿಟ್ಟು ಬಂದ ರಾಹುಲ್ ಗಾಂಧಿ


ಇದೇ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರ ಪುತ್ರ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಕಳೆದ ತಿಂಗಳು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ರಾಹುಲ್ ಗಾಂಧಿ ಅವರು ಒಟ್ಟು 54 ಗಂಟೆ ವಿಚಾರಣೆ ಎದುರಿಸಿದ್ದಾರೆ. ರಾಹುಲ್ ಗಾಂಧಿ ಇಂದು‌ ತಮ್ಮ ತಾಯಿ ಸೋನಿಯಾ ಗಾಂಧಿ ಅವರನ್ನು ಇಡಿ ಕಚೇರಿಗೆ ಕರೆದೊಯ್ದ ಬಿಟ್ಟು ಬಂದರು.


3 ಗಂಟೆ ವಿಚಾರಣೆ


ಸೋನಿಯಾ ಗಾಂಧಿ ಅವರನ್ನು ಸುಮಾರು 3 ಗಂಟೆಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಬಳಿಕ ಜುಲೈ 25ರಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಖಜಾಂಚಿ ಪವನ್ ಕುಮಾರ್ ಬನ್ಸಾಲ್ ಅವರನ್ನೂ ಇಡಿ ಅಧಿಕಾರಿಗಳು ವಿಚಾರಣೆಗರ ಒಳಪಡಿಸಿದ್ದಾರೆ. ಇಂದು ಸೋನಿಯಾ ಗಾಂಧಿ ಅವರ ಸರದಿಯಾಗಿತ್ತು.


ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?


2016 ರಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿದ್ದ ಆದಾಯ ತೆರಿಗೆ ಇಲಾಖೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್ ಪ್ರವರ್ತಿತ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಸೋನಿಯಾ ಗಾಂಧಿ ಮತ್ತು ಅವರ ಮಗ ಯಂಗ್ ಇಂಡಿಯನ್‌ನ ಪ್ರವರ್ತಕರು ಮತ್ತು ಬಹುಪಾಲು ಷೇರುದಾರರಲ್ಲಿ ಸೇರಿದ್ದಾರೆ ಮತ್ತು ಪ್ರತಿಯೊಬ್ಬರೂ ಕಂಪನಿಯಲ್ಲಿ 38 ಪ್ರತಿಶತ ಪಾಲನ್ನು ಹೊಂದಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರು


ಇದನ್ನೂ ಓದಿ: Karnataka Politics: ಸಿಎಂ ಕುರ್ಚಿಗೆ ಡಿಕೆಶಿ-ಹೆಚ್​ಡಿಕೆ ಫೈಟ್, ರಾಮನಗರದಲ್ಲೇ ಸವಾಲಿಗೆ ಸವಾಲ್


2013 ರಲ್ಲಿ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ದೆಹಲಿಯ ವಿಚಾರಣಾ ನ್ಯಾಯಾಲಯವು ಯಂಗ್ ಇಂಡಿಯನ್ ವಿರುದ್ಧ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ಗಮನಕ್ಕೆ ತೆಗೆದುಕೊಂಡ ನಂತರ ಇಡಿ ಪಿಎಂಎಲ್‌ಎಯ ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿರುವುದರಿಂದ ಗಾಂಧಿ ಕುಟುಂಬವನ್ನು ತನಿಖೆ ಮಾಡಲಾಗುತ್ತಿದೆ.

Published by:Pavana HS
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು