ಕಾಂಗ್ರೆಸ್ ಮಿಷನ್: ಉತ್ತರಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ; ಬೃಹತ್ ರ್ಯಾಲಿಗೆ ಕ್ಷಣಗಣನೆ
ಉತ್ತರಪ್ರದೇಶ ರಾಜ್ಯದಲ್ಲಿ ಮತ್ತೊಮ್ಮೆ ಚಿಗುರೊಡೆಯಲು ಹರಸಾಹಸ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಆಸೆಗೆ ಮತ್ತೊಮ್ಮೆ ತಣ್ಣೀರು ಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಇತರ ಜಾತ್ಯತೀತ ಪಕ್ಷಗಳು ನಿರ್ಧರಿಸಿವೆ. ಹೀಗಾಗಿ ಕಾಂಗ್ರೆಸ್ ಏಕಾಂಗಿಯಾಗಿಯೇ ಸ್ಪರ್ಧಿಸುವುದು ಅನಿವಾರ್ಯವಾಗಿದೆ.
Ganesh Nachikethu
Updated:February 11, 2019, 12:47 PM IST
Ganesh Nachikethu
Updated: February 11, 2019, 12:47 PM IST
ನವದೆಹಲಿ(ಫೆ.11): ಸಾರ್ವತ್ರಿಕ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸರ್ವ ಪಕ್ಷಗಳು ಯುದ್ದಕ್ಕೆ ಸನ್ನದ್ಧವಾಗಿವೆ. ಕೇಂದ್ರದ ಗದ್ದುಗೆ ಹಿಡಿಯಲು ಪ್ರಮುಖ ಪಾತ್ರವಹಿಸುವ ಉತ್ತರಪ್ರದೇಶದ ಮೇಲೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಸ್ಪಿ-ಬಿಎಸ್ಪಿ ಪಕ್ಷದ ಕಣ್ಣು ನೆಟ್ಟಿದೆ. ಈಗಾಗಲೇ ಮಾಜಿ ಸಿಎಂ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ ಜಂಟಿಯಾಗಿ ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ದಂಗುಬಡಿಸಿದಂತಾಗಿದೆ. ಈ ಮಧ್ಯೆ ಗಾಂಧಿ ಕುಟುಂಬದಿಂದ ಮತ್ತೊಂದು ಕುಡಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಮಾಡಿದ್ದು, ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ (ಉತ್ತರಪ್ರದೇಶ ಪೂರ್ವ) ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದು ಇತರೆ ಪಕ್ಷಗಳಿಗೆ ನಿದ್ದೆಗೆಡಿಸಿದೆ.
ಉತ್ತರಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಹೊರಗಿಡಲಾಗಿದೆ. ಹೀಗಾಗಿಯೇ ಇಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಘೋಷಿಸಿದೆ. ಅಲ್ಲದೇ ಚುನಾವಣೆ ಗೆಲ್ಲಲು ಸ್ಥಳೀಯ ಕಾಂಗ್ರೆಸ್ ಘಟಕ ಇಂದಿನಿಂದಲೇ ಸಾಲುಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರಿಯಾಂಕ ಗಾಂಧಿ ನಾಲ್ಕು ದಿನ ಪ್ರವಾಸ ಕೈಗೊಂಡಿದ್ದಾರೆ. ಸಕ್ರಿಯ ರಾಜಕೀಯದ ಇನ್ನಿಂಗ್ಸ್ ಶುರು ಮಾಡಿದ ಬಳಿಕ ಉತ್ತರಪ್ರದೇಶಕ್ಕೆ ಪ್ರಿಯಾಂಕರದ್ದು ಇದು ಮೊದಲ ಭೇಟಿ. ಈಗಾಗಲೇ ಲಖನೌದಲ್ಲಿ ಕಾಂಗ್ರೆಸ್ ಮೆಗಾ ರ್ಯಾಲಿಗೆ ಕ್ಷಣಗಣನೆ ಆರಂಭವಾಗಿದ್ದು, ಸಾರ್ವಜನಿಕರನ್ನುದ್ದೇಶಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾತನಾಡಲಿದ್ದಾರೆ. ಇದಕ್ಕು ಮುನ್ನವೇ ಹೊಸ ರಾಜಕಾರಣಕ್ಕೆ ಕೈಜೋಡಿಸಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿರುವ ಪ್ರಿಯಾಕ ಆ್ಯಪ್ ಮೂಲಕ ದನಿ ಸಂದೇಶವೊಂದನ್ನು ಹರಿಬಿಟ್ಟಿದ್ದಾರೆ.
ಈಗಾಗಲೇ ಪ್ರಿಯಾಂಕ ಗಾಂಧಿ ದನಿ ಸಂದೇಶ ಭಾರೀ ವೈರಲ್ ಆಗಿದೆ. ‘ಹಲೋ, ದಿಸ್ ಈಸ್ ಪ್ರಿಯಾಂಕಾ ಗಾಂಧೀ ಸ್ಪೀಕಿಂಗ್’ ಎಂಬ ಆಡಿಯೋ ತುಣುಕು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಅಪಾರ ಪ್ರಮಾಣದಲ್ಲಿ ಶೇರ್ ಆಗಿದೆಯಂತೇ! ಇನ್ನು ಪ್ರಿಯಾಂಕಾ ಗಾಂಧಿಯವರ ಮೆಗಾ ರ್ಯಾಲಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಂಸದ ಜ್ಯೋತಿರಾದಿತ್ಯ ಸಿಂದ್ಯಾ ಕೂಡ ಜೊತೆಗೂಡಿದ್ದಾರೆ.
ಇದನ್ನೂ ಓದಿ: ಆಕಾಶದಲ್ಲಿ ಹಾರಾಡುವಾಗಲೇ ವಿಮಾನದ ಬಾಗಿಲು ತೆರೆದುಕೊಂಡಿತು!ಎರಡು ವಾರದ ಹಿಂದೆಯೇ ಪ್ರಿಯಾಂಕಾ ಗಾಂಧಿ ಅಧಿಕೃತವಾಗಿ ರಾಜಕೀಯ ಅಖಾಡಾಕ್ಕೆ ಇಳಿದರು. ಪ್ರಿಯಾಂಕಾ ಗಾಂಧಿಯವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಇದೇ ಮೊದಲ ಬಾರಿ ಜವಾಬ್ದಾರಿ ನೀಡಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳ ಜವಾಬ್ದಾರಿಯನ್ನು ಪ್ರಿಯಾಂಕಾ ಅವರಿಗೆ ವಹಿಸಲಾಗಿದೆ.
ಲೋಕಸಭೆ ಚುನಾವಣೆಗಳು ಹತ್ತಿರುವಾಗುತ್ತಿರುವ ನಡುವೆಯೇ ಈ ನೇಮಕವಾಗಿದ್ದು ತೀವ್ರ ಕುತೂಹಲ ಕೆರಳಿಸಿತ್ತು. ಈ ಮೊದಲು ಸಹೋದರ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿಯವರ ಪ್ರಚಾರ ಸಭೆಗಳಲ್ಲಿ ಪ್ರಿಯಾಂಕಾ ಪಾಲ್ಗೊಳ್ಳುತ್ತಿದ್ದರಾದರೂ ಅಧಿಕೃತವಾಗಿ ಪಕ್ಷದಲ್ಲಿ ಯಾವುದೇ ಹುದ್ದೆಗಳನ್ನು ವಹಿಸಿಕೊಂಡಿರಲಿಲ್ಲ. ಕಳೆದ ವರ್ಷ ಎಐಸಿಸಿ ಅಧ್ಯಕ್ಷ ಗಾದಿಯಿಂದ ಕೆಳಗಿಳಿದಿದ್ದ ಸೋನಿಯಾ ಗಾಂಧಿ ಪುತ್ರ ರಾಹುಲ್ ಗಾಂಧಿಯನ್ನು ಆ ಹುದ್ದೆಗೆ ನೇಮಕ ಮಾಡಿದ್ದರು. ಇದೀಗ ಗಾಂಧಿ ಕುಟುಂಬದ ಮತ್ತೊಂದು ಕುಡಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ.
ಈ ಮೊದಲೇ ಉತ್ತರಪ್ರದೇಶ ರಾಜ್ಯದಲ್ಲಿ ಮತ್ತೊಮ್ಮೆ ಚಿಗುರೊಡೆಯಲು ಹರಸಾಹಸ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಆಸೆಗೆ ಮತ್ತೊಮ್ಮೆ ತಣ್ಣೀರು ಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಇತರ ಜಾತ್ಯತೀತ ಪಕ್ಷಗಳು ನಿರ್ಧರಿಸಿವೆ. ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಎರಡೂ ಮಹಾಮೈತ್ರಿಯ ನೇತೃತ್ವ ವಹಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ಸೇತರ ಪಕ್ಷಗಳನ್ನ ತನ್ನ ಕೂಟಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡಿದೆ. ಹೀಗಾಗಿ ಕಾಂಗ್ರೆಸ್ ಏಕಾಂಗಿಯಾಗಿಯೇ ಸ್ಪರ್ಧಿಸುವುದು ಅನಿವಾರ್ಯವಾಗಿದೆ.ಇದನ್ನೂ ಓದಿ: ಆಕೆಯ ತಲೆಯಲ್ಲಿ ಮೆದುಳೇ ಇಲ್ಲ; ಮಹಿಳಾ ಐಎಎಸ್ ಅಧಿಕಾರಿಯನ್ನು ಹೀಯಾಳಿಸಿ ವಿವಾದಕ್ಕೀಡಾದ ಕೇರಳ ಶಾಸಕ
ಎಸ್ಪಿ-ಬಿಎಸ್ಪಿ ಮಹಾಮೈತ್ರಿಯು ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಿರಲಿದೆ. ಈ ಎರಡು ಪಕ್ಷಗಳ ಜೊತೆಗೆ ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕ ದಳ್ ಕೂಡ ಇರಲಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರದಲ್ಲಿ ಸಚಿವರಾಗಿರುವ ಓಂ ಪ್ರಕಾಶ್ ರಾಜಭರ್ ಅವರ ನೇತೃತ್ವದ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ ಹಾಗೂ ಕೃಷ್ಣ ಪಟೇಲ್ ಬಣದ ಅಪ್ನಾ ದಳ್ ಪಕ್ಷಗಳನ್ನೂ ಮೈತ್ರಿ ತೆಕ್ಕೆಗೆ ತೆಗೆದುಕೊಳ್ಳಲು ಅಖಿಲೇಶ್ ಯಾದವ್ ಮತ್ತು ಮಾಯಾವತಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಸಣ್ಣಪುಟ್ಟ ಪಕ್ಷಗಳನ್ನ ಜೋಡಿಸಿಕೊಳ್ಳುತ್ತಿರುವ ಎಸ್ಪಿ-ಬಿಎಸ್ಪಿ ಪಕ್ಷಗಳಿಗೆ ಕಾಂಗ್ರೆಸ್ನಂತಹ ಸಂಪನ್ಮೂಲಭರಿತ ಪಕ್ಷ ಬೇಡವಾಗಿದ್ದು ಕುತೂಹಲದ ವಿಷಯವೇ.
-------------------------
ಯಡಿಯೂರಪ್ಪನವರ ಆಡಿಯೋದಿಂದ ರಾಜ್ಯದ ಜನರು ರೋಸಿಹೋಗಿದ್ದಾರೆ: ವಿಶ್ವನಾಥ್
ಉತ್ತರಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಯಿಂದ ಕಾಂಗ್ರೆಸ್ ಅನ್ನು ಹೊರಗಿಡಲಾಗಿದೆ. ಹೀಗಾಗಿಯೇ ಇಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಘೋಷಿಸಿದೆ. ಅಲ್ಲದೇ ಚುನಾವಣೆ ಗೆಲ್ಲಲು ಸ್ಥಳೀಯ ಕಾಂಗ್ರೆಸ್ ಘಟಕ ಇಂದಿನಿಂದಲೇ ಸಾಲುಸಾಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರಿಯಾಂಕ ಗಾಂಧಿ ನಾಲ್ಕು ದಿನ ಪ್ರವಾಸ ಕೈಗೊಂಡಿದ್ದಾರೆ. ಸಕ್ರಿಯ ರಾಜಕೀಯದ ಇನ್ನಿಂಗ್ಸ್ ಶುರು ಮಾಡಿದ ಬಳಿಕ ಉತ್ತರಪ್ರದೇಶಕ್ಕೆ ಪ್ರಿಯಾಂಕರದ್ದು ಇದು ಮೊದಲ ಭೇಟಿ. ಈಗಾಗಲೇ ಲಖನೌದಲ್ಲಿ ಕಾಂಗ್ರೆಸ್ ಮೆಗಾ ರ್ಯಾಲಿಗೆ ಕ್ಷಣಗಣನೆ ಆರಂಭವಾಗಿದ್ದು, ಸಾರ್ವಜನಿಕರನ್ನುದ್ದೇಶಿಸಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾತನಾಡಲಿದ್ದಾರೆ. ಇದಕ್ಕು ಮುನ್ನವೇ ಹೊಸ ರಾಜಕಾರಣಕ್ಕೆ ಕೈಜೋಡಿಸಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿರುವ ಪ್ರಿಯಾಕ ಆ್ಯಪ್ ಮೂಲಕ ದನಿ ಸಂದೇಶವೊಂದನ್ನು ಹರಿಬಿಟ್ಟಿದ್ದಾರೆ.
ಈಗಾಗಲೇ ಪ್ರಿಯಾಂಕ ಗಾಂಧಿ ದನಿ ಸಂದೇಶ ಭಾರೀ ವೈರಲ್ ಆಗಿದೆ. ‘ಹಲೋ, ದಿಸ್ ಈಸ್ ಪ್ರಿಯಾಂಕಾ ಗಾಂಧೀ ಸ್ಪೀಕಿಂಗ್’ ಎಂಬ ಆಡಿಯೋ ತುಣುಕು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಅಪಾರ ಪ್ರಮಾಣದಲ್ಲಿ ಶೇರ್ ಆಗಿದೆಯಂತೇ! ಇನ್ನು ಪ್ರಿಯಾಂಕಾ ಗಾಂಧಿಯವರ ಮೆಗಾ ರ್ಯಾಲಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಂಸದ ಜ್ಯೋತಿರಾದಿತ್ಯ ಸಿಂದ್ಯಾ ಕೂಡ ಜೊತೆಗೂಡಿದ್ದಾರೆ.
ಇದನ್ನೂ ಓದಿ: ಆಕಾಶದಲ್ಲಿ ಹಾರಾಡುವಾಗಲೇ ವಿಮಾನದ ಬಾಗಿಲು ತೆರೆದುಕೊಂಡಿತು!ಎರಡು ವಾರದ ಹಿಂದೆಯೇ ಪ್ರಿಯಾಂಕಾ ಗಾಂಧಿ ಅಧಿಕೃತವಾಗಿ ರಾಜಕೀಯ ಅಖಾಡಾಕ್ಕೆ ಇಳಿದರು. ಪ್ರಿಯಾಂಕಾ ಗಾಂಧಿಯವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಇದೇ ಮೊದಲ ಬಾರಿ ಜವಾಬ್ದಾರಿ ನೀಡಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳ ಜವಾಬ್ದಾರಿಯನ್ನು ಪ್ರಿಯಾಂಕಾ ಅವರಿಗೆ ವಹಿಸಲಾಗಿದೆ.
ಲೋಕಸಭೆ ಚುನಾವಣೆಗಳು ಹತ್ತಿರುವಾಗುತ್ತಿರುವ ನಡುವೆಯೇ ಈ ನೇಮಕವಾಗಿದ್ದು ತೀವ್ರ ಕುತೂಹಲ ಕೆರಳಿಸಿತ್ತು. ಈ ಮೊದಲು ಸಹೋದರ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿಯವರ ಪ್ರಚಾರ ಸಭೆಗಳಲ್ಲಿ ಪ್ರಿಯಾಂಕಾ ಪಾಲ್ಗೊಳ್ಳುತ್ತಿದ್ದರಾದರೂ ಅಧಿಕೃತವಾಗಿ ಪಕ್ಷದಲ್ಲಿ ಯಾವುದೇ ಹುದ್ದೆಗಳನ್ನು ವಹಿಸಿಕೊಂಡಿರಲಿಲ್ಲ. ಕಳೆದ ವರ್ಷ ಎಐಸಿಸಿ ಅಧ್ಯಕ್ಷ ಗಾದಿಯಿಂದ ಕೆಳಗಿಳಿದಿದ್ದ ಸೋನಿಯಾ ಗಾಂಧಿ ಪುತ್ರ ರಾಹುಲ್ ಗಾಂಧಿಯನ್ನು ಆ ಹುದ್ದೆಗೆ ನೇಮಕ ಮಾಡಿದ್ದರು. ಇದೀಗ ಗಾಂಧಿ ಕುಟುಂಬದ ಮತ್ತೊಂದು ಕುಡಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ.
ಈ ಮೊದಲೇ ಉತ್ತರಪ್ರದೇಶ ರಾಜ್ಯದಲ್ಲಿ ಮತ್ತೊಮ್ಮೆ ಚಿಗುರೊಡೆಯಲು ಹರಸಾಹಸ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಆಸೆಗೆ ಮತ್ತೊಮ್ಮೆ ತಣ್ಣೀರು ಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದಿರಲು ಇತರ ಜಾತ್ಯತೀತ ಪಕ್ಷಗಳು ನಿರ್ಧರಿಸಿವೆ. ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಎರಡೂ ಮಹಾಮೈತ್ರಿಯ ನೇತೃತ್ವ ವಹಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ಸೇತರ ಪಕ್ಷಗಳನ್ನ ತನ್ನ ಕೂಟಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡಿದೆ. ಹೀಗಾಗಿ ಕಾಂಗ್ರೆಸ್ ಏಕಾಂಗಿಯಾಗಿಯೇ ಸ್ಪರ್ಧಿಸುವುದು ಅನಿವಾರ್ಯವಾಗಿದೆ.
Loading...
ಎಸ್ಪಿ-ಬಿಎಸ್ಪಿ ಮಹಾಮೈತ್ರಿಯು ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವಿರಲಿದೆ. ಈ ಎರಡು ಪಕ್ಷಗಳ ಜೊತೆಗೆ ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕ ದಳ್ ಕೂಡ ಇರಲಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರದಲ್ಲಿ ಸಚಿವರಾಗಿರುವ ಓಂ ಪ್ರಕಾಶ್ ರಾಜಭರ್ ಅವರ ನೇತೃತ್ವದ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ ಹಾಗೂ ಕೃಷ್ಣ ಪಟೇಲ್ ಬಣದ ಅಪ್ನಾ ದಳ್ ಪಕ್ಷಗಳನ್ನೂ ಮೈತ್ರಿ ತೆಕ್ಕೆಗೆ ತೆಗೆದುಕೊಳ್ಳಲು ಅಖಿಲೇಶ್ ಯಾದವ್ ಮತ್ತು ಮಾಯಾವತಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಸಣ್ಣಪುಟ್ಟ ಪಕ್ಷಗಳನ್ನ ಜೋಡಿಸಿಕೊಳ್ಳುತ್ತಿರುವ ಎಸ್ಪಿ-ಬಿಎಸ್ಪಿ ಪಕ್ಷಗಳಿಗೆ ಕಾಂಗ್ರೆಸ್ನಂತಹ ಸಂಪನ್ಮೂಲಭರಿತ ಪಕ್ಷ ಬೇಡವಾಗಿದ್ದು ಕುತೂಹಲದ ವಿಷಯವೇ.
-------------------------
ಯಡಿಯೂರಪ್ಪನವರ ಆಡಿಯೋದಿಂದ ರಾಜ್ಯದ ಜನರು ರೋಸಿಹೋಗಿದ್ದಾರೆ: ವಿಶ್ವನಾಥ್
Loading...