• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಚುನಾವಣೆಗಾಗಿ ಬಿಜೆಪಿಯಿಂದ ಆಧಾರ್​ ಮಾಹಿತಿ ಕಳವು; ತನಿಖೆ ನಡೆಸುವಂತೆ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್​

ಚುನಾವಣೆಗಾಗಿ ಬಿಜೆಪಿಯಿಂದ ಆಧಾರ್​ ಮಾಹಿತಿ ಕಳವು; ತನಿಖೆ ನಡೆಸುವಂತೆ ಪ್ರಾಧಿಕಾರಕ್ಕೆ ಆದೇಶಿಸಿದ ಹೈಕೋರ್ಟ್​

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

ನಾಗರಿಕರು ವಿಶ್ವಾಸದಿಂದ ಒದಗಿಸಿದ ವಿವರಗಳನ್ನು ರಕ್ಷಿಸುವಲ್ಲಿ ಪ್ರಾಧಿಕಾರ ಹೇಗೆ ವಿಫಲವಾಯಿತು ಎಂದು ಉತ್ತರಿಸಲು ನ್ಯಾಯಾಲಯವು UIDAI ಗೆ ನಿರ್ದೇಶನ ನೀಡಿದೆ. UIDAI ಅಧಿಕಾರಿಗಳು ಪ್ರತಿಕ್ರಿಯಿಸಲು ಆರು ವಾರಗಳ ಸಮಯವನ್ನು ನ್ಯಾಯಾಲಯವು ನೀಡಿದೆ.

  • Share this:

    ಪುದುಚೇರಿ (ಏಪ್ರಿಲ್ 02); ಪ್ರಸ್ತುತ ದೇಶದಲ್ಲಿ ಪಂಚರಾಜ್ಯಗಳ ಚುನಾವಣೆ ಎಲ್ಲರ ಗಮನ ಸೆಳೆದಿದೆ. ಬಿಜೆಪಿ ಪಕ್ಷ ಎಲ್ಲಾ ರಾಜ್ಯದಲ್ಲೂ ಅಧಿಕಾರ ಹಿಡಿಯಲು ಸಾಕಷ್ಟು ಕಸರತ್ತು ನಡೆಸುತ್ತಿದೆ. ಆದರೆ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಬಿಜೆಪಿ ಪಕ್ಷ ಬೂತ್ ಮಟ್ಟದಿಂದ ಬಲವಾಗಿಲ್ಲ. ಹೀಗಾಗಿ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಅಷ್ಟು ಸುಲಭದ ಮಾತಲ್ಲ. ಇದೇ ಕಾರಣಕ್ಕೆ ಬಿಜೆಪಿಯ ಪುದುಚೇರಿ ಘಟಕವು ಆಧಾರ್ ಮಾಹಿತಿಯನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿದೆ ಎಂಬ ಆರೋಪ ಇದೀಗ ಬಲವಾಗಿ ಕೇಳಿ ಬಂದಿದೆ. ಈ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದ್ದಂತೆ ಈ ಬಗ್ಗೆ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಗುರುವಾರ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮತ್ತು ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.


    "ಚುನಾವಣಾ ಪ್ರಚಾರಕ್ಕೆ ಆಧಾರ್​ ಮಾಹಿತಿಗಳನ್ನು ಬಳಸಿಕೊಳ್ಳುವುದು ಅಕ್ಷಮ್ಯ. ಹೀಗಾಗಿ ಈ ಸಂಬಂಧ ಸೂಕ್ತ ತನಿಖೆಯಾಗಿ ಸತ್ಯಾಸತ್ಯತೆಗಳು ಬಯಲಿಗೆ ಬರಬೇಕು" ಎಂದು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ರಾಮಮೂರ್ತಿ ಈ ಮಧ್ಯಂತರ ಆದೇಶ ನೀಡಿದ್ದಾರೆ.


    ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಬಿಜೆಪಿಯ ಪ ಸ್ಥಳೀಯ ಘಟಕವು, "ಈ ಮಾಹಿತಿಯನ್ನು ತಾವು ಮನೆ ಬಾಗಿಲಿಗೆ ತೆರಳಿ ಅಭಿಯಾನದ ಮೂಲಕ ಪಡೆದುಕೊಂಡಿದ್ದೇವೆ" ಎಂದು ಹೇಳಿಕೊಂಡಿತ್ತಾದರೂ ಹೈಕೋರ್ಟ್ ಅದನ್ನು ಒಪ್ಪಿಕೊಳ್ಳಲು ನಿರಾಕರಿಸಿತು.


    ಇದನ್ನೂ ಓದಿ: TamilNadu Assembly: ಸುಳ್ಳುಗಳ ಮೇಲೆ ನಿಯಂತ್ರಣ ಸಾಧಿಸಿ; ಡಿಎಂಕೆ- ಕಾಂಗ್ರೆಸ್​ ವಿರುದ್ಧ ಪ್ರಧಾನಿ ವಾಗ್ದಾಳಿ


    ಈ ವಿಷಯದ ಬಗ್ಗೆ ಚುನಾವಣಾ ಆಯೋಗವು ನೀತಿ ಸಂಹಿತೆಯ ಉಲ್ಲಂಘನೆ ಎಂದೇ ವ್ಯವಹರಿಸಬೇಕು ಮತ್ತು ಪಕ್ಷದ ವಿರುದ್ಧ ಪ್ರತ್ಯೇಕ ತನಿಖೆ ಪ್ರಾರಂಭಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರಕರಣವನ್ನು ನ್ಯಾಯಾಲಯವು, “ನಾಗರಿಕರ ಗೌಪ್ಯತೆಯ ಉಲ್ಲಂಘನೆಯ ಗಂಭೀರ ವಿಷಯ” ಎಂದು ಉಲ್ಲೇಖಿಸಿದೆ.


    ನಾಗರಿಕರು ವಿಶ್ವಾಸದಿಂದ ಒದಗಿಸಿದ ವಿವರಗಳನ್ನು ರಕ್ಷಿಸುವಲ್ಲಿ ಪ್ರಾಧಿಕಾರ ಹೇಗೆ ವಿಫಲವಾಯಿತು ಎಂದು ಉತ್ತರಿಸಲು ನ್ಯಾಯಾಲಯವು UIDAI ಗೆ ನಿರ್ದೇಶನ ನೀಡಿದೆ. UIDAI ಅಧಿಕಾರಿಗಳು ಪ್ರತಿಕ್ರಿಯಿಸಲು ಆರು ವಾರಗಳ ಸಮಯವನ್ನು ನ್ಯಾಯಾಲಯವು ನೀಡಿದೆ.

    Published by:MAshok Kumar
    First published: