• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Bharat Bandh| ರೈತರು ಕರೆ ನೀಡಿರುವ ಭಾರತ್ ಬಂದ್; ಪಂಜಾಬ್-ಹರಿಯಾಣ-ಬಂಗಾಳ ಸ್ತಬ್ಧ, ಚೆನ್ನೈನಲ್ಲಿ ರೈಲ್ ರೋಖೋ!

Bharat Bandh| ರೈತರು ಕರೆ ನೀಡಿರುವ ಭಾರತ್ ಬಂದ್; ಪಂಜಾಬ್-ಹರಿಯಾಣ-ಬಂಗಾಳ ಸ್ತಬ್ಧ, ಚೆನ್ನೈನಲ್ಲಿ ರೈಲ್ ರೋಖೋ!

ತಮಿಳುನಾಡಿನಲ್ಲಿ ರೈಲು ತಡೆದು ಪ್ರತಿಭಟಿಸಿರುವ ರೈತ ಹೋರಾಟಗಾರರು.

ತಮಿಳುನಾಡಿನಲ್ಲಿ ರೈಲು ತಡೆದು ಪ್ರತಿಭಟಿಸಿರುವ ರೈತ ಹೋರಾಟಗಾರರು.

ಭಾರತ್​ ಬಂದ್​ಗೆ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಬಿಹಾರ, ಹರಿಯಾಣ ಮತ್ತು ಪಂಜಾಬ್ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಇನ್ನೂ ಬಂದ್​ನಿಂದಾಗಿ ಉತ್ತರಪ್ರದೇಶ-ದೆಹಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಟ್ರಾಫಿಕ್ ಜಾಮ್​ಗೆ ಸಿಲುಕಿದೆ.

  • Share this:

ನವ ದೆಹಲಿ (ಸಪ್ಟೆಂಬರ್​ 27); ಕೇಂದ್ರ ಸರ್ಕಾರದ (Central Government) ರೈತ ವಿರೋಧಿ ಕೃಷಿ ನೀತಿಯ (Agriculture Bill) ವಿರುದ್ಧ ಇಂದು ಘೋಷಿಸಲಾಗಿರುವ ಭಾರತ್ ಬಂದ್ (Bharat Bhand) ಬಹುತೇಕ ಯಶಸ್ವಿಯಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕರ್ನಾಟಕ (Karnataka) ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ರೈತರು ರಸ್ತೆಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇನ್ನೂ ಭಾರತ್​ ಬಂದ್​ಗೆ ತಮಿಳುನಾಡು (Tamilnadu), ಕೇರಳ (Kerala), ಪಶ್ಚಿಮ ಬಂಗಾಳ (West Bengal), ಬಿಹಾರ (Bihar), ಹರಿಯಾಣ (Hariyana) ಮತ್ತು ಪಂಜಾಬ್ (Punjab) ಸಂಪೂರ್ಣವಾಗಿ ಸ್ತಬ್ಧವಾಗಿದೆ. ಇನ್ನೂ ಭಾರತದ ಬಂದ್​ನಿಂದಾಗಿ ಉತ್ತರಪ್ರದೇಶ-ದೆಹಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಟ್ರಾಫಿಕ್ ಜಾಮ್​ಗೆ ಸಿಲುಕಿದೆ ಎಂಬ ಮಾಹಿತಿಗಳು ದೊರಕುತ್ತಿವೆ. ಪರಿಣಾಮ ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.


ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು "ಭಾರತ್ ಬಂದ್" ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಗೆ ಬಂದ್ ಆರಂಭವಾಗಿದ್ದು, ಇಂದು ಸಂಜೆ 4 ಗಂಟೆಯವರೆಗೂ ಮುಂದುವರಿಯಲಿದೆ.



ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು, ಸಂಪರ್ಕ ರಸ್ತೆ ಮತ್ತು ರೈಲ್ವೆ ಹಳಿಗಳನ್ನು ಬಂದ್ ಮಾಡಲಾಗಿದೆ. ರಸ್ತೆ ಮತ್ತು ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪಂಜಾಬ್ ನಲ್ಲಿ ರೈತರು 350 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.


ಪಂಜಾಬ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಜಿಡಿಪಿ) ಪ್ರತಿಭಟನಾ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯದ ಪೊಲೀಸ್ ಪಡೆಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲ ಪ್ರತಿಭಟನಾ ಸ್ಥಳಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಹರಿಯಾಣದಲ್ಲೂ ಜಿಂದ್ ಜಿಲ್ಲೆಯಲ್ಲಿ 25 ಸ್ಥಳಗಳಲ್ಲಿ ಹೆದ್ದಾರಿಗಳನ್ನು ನಿರ್ಬಂಧಿಸಲಾಗಿದೆ.

  • ಭಾರತ್ ಬಂದ್ ಹಿನ್ನೆಲೆಯಲ್ಲಿ ದೆಹಲಿ-ಗುರ್ಗಾಂವ್ ಗಡಿ (ರಾಜೋಕ್ರಿ) ಗಡಿಯಲ್ಲಿ ಸಂಚಾರ ದಟ್ಟಣೆಯಾಗಿದೆ.

  • ಬಂದ್ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕೆಲವು ಮಾರ್ಗಗಳನ್ನು ತಡೆದಿದ್ದಾರೆ. ದೆಹಲಿಗೆ ಪ್ರವೇಶಿಸುವ ವಾಹನಗಳ ತೀವ್ರ ತಪಾಸಣೆ ನಡೆಸಿದ್ದಾರೆ.

  • ಪೊಲೀಸರ ತಪಾಸಣೆಯಿಂದಾಗಿ ದೆಹಲಿ-ಉತ್ತರಪ್ರದೇಶ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ  ಟ್ರಾಫಿಕ್ ಜಾಮ್ ಆಗಿದೆ.

  • ತಮಿಳುನಾಡಿನಲ್ಲಿ ರೈಲ್​ ರೋಖೋ ಚಳುವಳಿ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತ ಹೋರಾಟಗಾರರು.

  • ಆಂಧ್ರಪ್ರದೇಶ-ಪಶ್ಚಿಮ ಬಂಗಾಳದಲ್ಲೂ ಯಶಸ್ವಿಯಾಯ್ತು ಭಾರತ ಬಂದ್.


ರಾಜಸ್ಥಾನ, ಹರಿಯಾಣ, ಬಿಹಾರ್‌, ತಮಿಳುನಾಡು, ಜಾರ್ಖಾಂಡ್, ಚಂಡಿಗಢ, ಕೇರಳ, ಆಂಧ್ರ ಪ್ರದೇಶ, ಕರ್ನಾಟಕ, ಉತ್ತರಾಖಂಡ , ಮಧ್ಯಪ್ರದೇಶ, ಪಂಜಾಬ್, ಉತ್ತರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳಗಳಲ್ಲಿ ರೈತರು ಮತ್ತು ರೈತ ಪರ ಸಂಘಟನೆಗಳು ಬಂದ್‌ ನಡೆಸುತ್ತಿವೆ. ಅಮೃತಸರದ ಗುರುನಾನಕ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವಿವಿ ಗೇಟ್ ಬಳಿ ಪ್ರತಿಭಟನೆ ನಡೆಸಿದ್ದಾರೆ.


ತಮಿಳುನಾಡು ಮತ್ತು ಕೇರಳದಲ್ಲಿ ರೈತ ಹೋರಾಟಗಾರರು ರೈಲ್ ರೋಖೋ ಚಳುವಳಿಯನ್ನು ಮುನ್ನಡೆಸಿದ್ದಾರೆ. ರೈಲು ನಿಲ್ದಾಣಗಳಿಗೆ ತೆರಳಿ ರೈಲುಗಳನ್ನು ತಡೆದಿರುವ ರೈತ ಹೋರಾಟಗಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.


ಇದನ್ನೂ ಓದಿ: Bharat Bandh: ಭಾರತ್ ಬಂದ್ ಹಿನ್ನೆಲೆ, ಬೆಂಗಳೂರಿನಲ್ಲಿ ಖಾಕಿ ಕಣ್ಗಾವಲು, ರಾಜ್ಯದಲ್ಲಿ ಬಂದ್​​ಗೆ ಬೆಂಬಲ ಇದ್ಯಾ?


ಸರ್ಕಾರಿ ಮತ್ತು ಖಾಸಗಿ ಕಚೇರಿಗಳು, ಶೈಕ್ಷಣಿಕ ಮತ್ತು ಇತರ ಸಂಸ್ಥೆಗಳು, ಅಂಗಡಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತೆ ಸಂಯುಕ್ತ ಕಿಸಾನ್ ಮೋರ್ಚಾ (SKM) ಕರೆ ನೀಡಿದೆ. ಆದರೆ, ಆಸ್ಪತ್ರೆಗಳು, ಮೆಡಿಕಲ್‌ಗಳು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು, ಎಲ್ಲಾ ತುರ್ತು ಸಂಸ್ಥೆಗಳು ಮತ್ತು ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುತ್ತದೆ. ಜೊತೆಗೆ ಬಂದ್ ಅನ್ನು ಸ್ವಯಂಪ್ರೇರಿತ ಮತ್ತು ಶಾಂತಿಯುತವಾಗಿ ಜಾರಿಗೊಳಿಸಲಾಗುವುದು ಎಂದು ರೈತ ಸಂಘಟನೆ ಭರವಸೆ ನೀಡಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

top videos
    First published: