• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • National Herald Case: ನಾಳಿನ ವಿಚಾರಣೆಯಿಂದ ವಿನಾಯಿತಿ ನೀಡಿ ಅಂತ ರಾಹುಲ್ ಗಾಂಧಿ ಮನವಿ, ಅಸ್ತು ಎಂದ್ರಾ ಇಡಿ ಅಧಿಕಾರಿಗಳು?

National Herald Case: ನಾಳಿನ ವಿಚಾರಣೆಯಿಂದ ವಿನಾಯಿತಿ ನೀಡಿ ಅಂತ ರಾಹುಲ್ ಗಾಂಧಿ ಮನವಿ, ಅಸ್ತು ಎಂದ್ರಾ ಇಡಿ ಅಧಿಕಾರಿಗಳು?

ರಾಹುಲ್ ಗಾಂಧಿ ಸಂಗ್ರಹ ಚಿತ್ರ

ರಾಹುಲ್ ಗಾಂಧಿ ಸಂಗ್ರಹ ಚಿತ್ರ

ಸೋನಿಯಾ ಗಾಂಧಿ ಅವರ ಅನಾರೋಗ್ಯ ‌ಹಾಗೂ ತಮ್ಮ ಹುಟ್ಟುಹಬ್ಬದ ಆಚರಣೆ ಹಿನ್ನೆಲೆಯಲ್ಲಿ ನಾಳಿನ ವಿಚಾರಣೆಯಿಂದ ವಿನಾಯಿತಿ ನೀಡಿ, ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ರಾಹುಲ್ ಗಾಂಧಿ ಅವರು ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಆದರೆ ಇಡಿ ಅಧಿಕಾರಿಗಳು ಹೇಳಿದ್ದೇನು?

  • Share this:

ನವದೆಹಲಿ, ಜೂ. 16: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಹಾಗೂ ಅವರ ಪುತ್ರ, ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಫೆಡರಲ್ ಏಜೆನ್ಸಿ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಕೊವಿಡ್ ಪಾಸಿಟಿವ್ (Covid Positive) ಆದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಯಿಂದ ವಿನಾಯಿತಿ ಪಡೆದಿದ್ದಾರೆ. ಆದರೆ ರಾಹುಲ್ ಗಾಂಧಿ ಅವರು ಜೂನ್ 13ರಿಂದ ನಿರಂತರವಾಗಿ 3 ದಿನ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ. 3 ದಿನದ ಬಳಿಕ ಇಂದು ಒಂದು ದಿನದ ವಿನಾಯಿತಿ ಸಿಕ್ಕಿದ್ದು ನಾಳೆ ಅಂದರೆ, ಜೂನ್ 17ರಂದು ಮತ್ತೆ ವಿಚಾರಣೆಗೆ ಬರುವಂತೆ ಅವರಿಗೆ ಸೂಚನೆ ನೀಡಲಾಗಿದೆ‌. ಆದರೆ ರಾಹುಲ್ ಗಾಂಧಿ ಅವರು ನಾಳೆಯ ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


ಇಡಿಗೆ ಪತ್ರ ಬರೆದ ರಾಹುಲ್ ಗಾಂಧಿ


ಇಡಿ ಅಧಿಕಾರಿಗಳಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. “ತಮ್ಮ ತಾಯಿ, ಎಐಸಿಸಿ ಅಧ್ಯಕ್ಷೆ‌ ಸೋನಿಯಾ ಗಾಂಧಿ ಅವರು ದೆಹಲಿಯ ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ,  ಅವರನ್ನು ನೋಡಬೇಕಿದೆ. ಅದಲ್ಲದೆ ಜೂನ್ ‌19ರಂದು ತಮ್ಮ ಹುಟ್ಟುಹಬ್ಬದ ಆಚರಣೆ ಇದೆ.‌ ಈ‌ ಹಿನ್ನೆಲೆಯಲ್ಲಿ ನಾಳಿನ ವಿಚಾರಣೆಯಿಂದ ವಿನಾಯಿತಿ ನೀಡಿ. ಸೋಮವಾರ ಅಂದರೆ ಜೂನ್ 20ರಂದು ವಿಚಾರಣೆಗೆ ಹಾಜರಾಗುತ್ತೇನೆ” ಅಂತ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.


ಆದರೆ ಈವರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಗೊತ್ತಾಗಿದೆ.


“ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ”



ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವೈಫಲ್ಯಗಳನ್ನು, ಅದರಲ್ಲೂ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳುತ್ತಿರುವ ಬಗ್ಗೆ, ಮೋದಿ ಸರ್ಕಾರದ ಕೆಟ್ಟ ಆರ್ಥಿಕ ನೀತಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಆರ್‌ಎಸ್‌ಎಸ್ ನಿಲುವಿನ ಬಗ್ಗೆ ಗಟ್ಟಿ ದನಿಯಲ್ಲಿ ಮಾತನಾಡುತ್ತಾರೆ. ಅದೇ ಕಾರಣಕ್ಕೆ ಅವರ ವಿರುದ್ಧ ದ್ವೇಷ ಸಾಧಿಸುತ್ತಿರುವ ಕೇಂದ್ರ ಸರ್ಕಾರ ಈಗ ಅನಾವಶ್ಯಕವಾಗಿ ಕಿರುಕುಳ ನೀಡಲೆಂದೇ ಇಡಿ ವಿಚಾರಣೆ ನಡೆಸುತ್ತಿದೆ ಅಂತ ಕಾಂಗ್ರೆಸ್ ಆರೋಪಿಸಿದೆ.


ಪ್ರತಿ ದಿನ 10 ಗಂಟೆಗೂ ಹೆಚ್ಚು ಕಾಲ  3 ದಿನ ವಿಚಾರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ (CBI), ಆದಾಯ ತೆರಿಗೆ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: National Herald Case: ಕೈ ಸುಡುತ್ತಿರುವುದೇಕೆ ನ್ಯಾಷನಲ್ ಹೆರಾಲ್ಡ್ ಕೇಸ್? ಅಷ್ಟಕ್ಕೂ ನೆಹರೂ ಕುಟುಂಬದ ವಿರುದ್ಧ ಏನಿದು ಆರೋಪ?


 ಕೇಂದ್ರ ಸರ್ಕಾರದ ನಡೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ


ರಾಜಕೀಯ ದ್ವೇಷಕ್ಕಾಗಿ ತನಿಖಾ ಸಂಸ್ಥೆಗಳನ್ನು ವ ಕೇಂದ್ರ ಸರ್ಕಾ ದುರುಪಯೋಗ ಮಾಡಿಕೊಳ್ಳುತ್ತಿದೆ ಅಂತ ಆರೋಪಿಸಿ ಇಂದೂ ಕೂಡ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.


ದೂರು ನೀಡಿದ ಕಾಂಗ್ರೆಸ್ ಸಂಸದರು


ಕಾಂಗ್ರೆಸ್ ಸಂಸದರಿಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುತ್ತಿಲ್ಲ. ಪ್ರತಿಭಟನೆ ಮಾಡಲು ಮುಂದಾಗುವವರನ್ನು ಬಂಧಿಸಲಾಗುತ್ತಿದೆ. ಸಂಸದರ ಮೇಲೆ‌ ಮ್ಯಾನ್ ಹ್ಯಾಂಡಲ್ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಲೋಕಸಭಾ ಸದಸ್ಯರು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ‌ ದೂರು‌ ನೀಡಿದರು.‌


ಇದನ್ನೂ ಓದಿ: National Herald Case: ಇಂದು ಇಡಿ ವಿಚಾರಣೆ ಇಲ್ಲ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ


ಇನ್ನೊಂದೆಡೆ ಪಿ. ಚಿದಂಬರಂ ನೇತೃತ್ವದಲ್ಲಿ ರಾಜ್ಯಸಭಾ ಸದಸ್ಯರು ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ದೂರು ನೀಡಿದರು.

top videos
    First published: