• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Rahul Gandhi: ನನಗೆ ಒಳ್ಳೆಯ ಪ್ರಶ್ನೆಗಳನ್ನು ಕೇಳಿ, ಪತ್ರಕರ್ತನನ್ನು ಹಂಗಿಸಿ ಟೀಕೆಗೆ ಗುರಿಯಾದ ರಾಹುಲ್ ಗಾಂಧಿ

Rahul Gandhi: ನನಗೆ ಒಳ್ಳೆಯ ಪ್ರಶ್ನೆಗಳನ್ನು ಕೇಳಿ, ಪತ್ರಕರ್ತನನ್ನು ಹಂಗಿಸಿ ಟೀಕೆಗೆ ಗುರಿಯಾದ ರಾಹುಲ್ ಗಾಂಧಿ

ರಾಹುಲ್ ಗಾಂಧಿ

ರಾಹುಲ್ ಗಾಂಧಿ

ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ, ಪತ್ರಕರ್ತರೊಬ್ಬರನ್ನು ನಡೆಸಿಕೊಂಡ ಬಗ್ಗೆ ಭಾರೀ ಟೀಕೆಗೆ ಗುರಿಯಾಗುತ್ತಿದ್ದಾರೆ.

  • News18 Kannada
  • 5-MIN READ
  • Last Updated :
  • Delhi, India
  • Share this:

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಆಡಿದ ಇನ್ನೊಂದು ಮಾತಿನಿಂದ ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ, ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ, (Former Wayanad MP Rahul Gandhi) ಪತ್ರಕರ್ತರೊಬ್ಬರನ್ನು ನಡೆಸಿಕೊಂಡ ಬಗ್ಗೆ ಭಾರೀ ಟೀಕೆಗೆ ಗುರಿಯಾಗುತ್ತಿದ್ದಾರೆ. ರಾಹುಲ್ ಗಾಂಧಿ (Rahul Gandhi) ತಮ್ಮ ಬಳಿ ಪ್ರಶ್ನೆ ಕೇಳಿದ ಪತ್ರಕರ್ತರ ಬಳಿ, “ನೀವು ಪತ್ರಕರ್ತನಂತೆ ನಟಿಸಬೇಡಿ. ನೀವು ನನಗೆ ಉತ್ತಮ ಪ್ರಶ್ನೆಗಳನ್ನು ಏಕೆ ಕೇಳಬಾರದು? ನೀವು ಬಿಜೆಪಿಗಾಗಿ ಕೆಲಸ ಮಾಡುತ್ತೀರಿ ಎಂಬುದು ಸ್ಪಷ್ಟವಾಗಿದೆ ಎಂದು ವ್ಯಂಗ್ಯ ಮಾಡಿದ್ದಾರೆ.



ಅನರ್ಹತೆಯ ನಂತರ ರಾಹುಲ್ ಗಾಂಧಿಯವರ ಮೊದಲ ಮಾಧ್ಯಮ ಸಂವಾದ ಇದಾಗಿತ್ತು. ಜೈರಾಮ್ ರಮೇಶ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಅಭಿಷೇಕ್ ಸಿಂಘ್ವಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಅವರ ಈ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಿದ್ದರು.




ನನ್ನ ಹೆಸರು ಗಾಂಧಿ, ಸಾವರ್ಕರ್ ಅಲ್ಲ
ರಾಹುಲ್ ಗಾಂಧಿ ಈಗಾದರೂ ಮೋದಿ ಸರ್​ನೇಮ್ ಬಗ್ಗೆ ಹೇಳಿದ ಆಕ್ಷೇಪಾರ್ಹ ಮಾತುಗಳಿಗೆ ಕ್ಷಮೆ ಯಾಚಿಸಬೇಕು ಎಂಬ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, “ನನ್ನ ಹೆಸರು ಗಾಂಧಿ, ಸಾವರ್ಕರ್ ಅಲ್ಲ. ಗಾಂಧಿ ಯಾವತ್ತೂ ಕ್ಷಮೆ ಯಾಚಿಸುವುದಿಲ್ಲ' ಎಂದು ಅವರು ತಿರುಗೇಟು ನೀಡಿದರು.


ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಸದಸ್ಯತ್ವ ಅನರ್ಹಗೊಂಡಿದ್ದೇಕೆ? ಯಾವ ಕಾನೂನಿನಡಿ ಇದಕ್ಕೆ ಅವಕಾಶವಿದೆ?


"ನಿಮ್ಮ ಎದೆಯಲ್ಲಿ ಬಿಜೆಪಿಯ ಒಂದು ಬ್ಯಾಡ್ಜ್ ಕೂಡಾ ಹಾಕಿಕೊಳ್ಳಿ. ಆಮೇಲೆ ನಾನು ಅವರಿಗೆ ಹೇಗೆ ಉತ್ತರಿಸುತ್ತೇನೋ, ಅದೇ ರೀತಿ ನಿಮಗೂ ಉತ್ತರಿಸುತ್ತೇನೆ, ಸುಮ್ಮನೆ ಪತ್ರಕರ್ತ ಎಂದು ಪೋಸ್ ಕೊಡಬೇಡಿ" ಎಂದಿದ್ದಾರೆ ರಾಹುಲ್ ಗಾಂಧಿ.


"ದೇಶದ ಬಡ ಜನರ ಧ್ವನಿಯನ್ನು ರಕ್ಷಿಸುವುದು ನನ್ನ ಕರ್ತವ್ಯ"
"ದೇಶದ ಸಂಸ್ಥೆಗಳನ್ನು ರಕ್ಷಿಸುವುದು, ದೇಶದ ಬಡ ಜನರ ಧ್ವನಿಯನ್ನು ರಕ್ಷಿಸುವುದು ಮತ್ತು ಪ್ರಧಾನಿಯೊಂದಿಗಿನ ಸಂಬಂಧವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅದಾನಿಯಂತಹ ಜನರ ಬಗ್ಗೆ ಜನರಿಗೆ ಸತ್ಯವನ್ನು ಹೇಳುವುದು ನನ್ನ ಕರ್ತವ್ಯ" ಎಂದು ಅದಾನಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡರು.


ಇದನ್ನೂ ಓದಿ: Rahul Gandhi: ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆಯಡಿ ರಾಹುಲ್ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ!


ಜೈಲಿಗೆ ಹೋಗಲು ನನಗೆ ಭಯವಿಲ್ಲ
ಅಲ್ಲದೇ,  ತಮಗೆ ಜೈಲಿಗೆ ಹೋಗಲು ಭಯವಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, ಅನರ್ಹತೆ ಅಥವಾ ಬಂಧನಕ್ಕೊಳಗಾದರೂ ಸತ್ಯಕ್ಕಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದರು.

top videos


    ಮಾನನಷ್ಟ ಮೊಕದ್ದಮೆಯೇ ಕಾರಣ
    ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಮೇಲಿನ ಆರೋಪ ಸಾಬೀತಾಗಿದೆ. ಈ ಶಿಕ್ಷೆಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಜಾಮೀನು ನೀಡಿರುವುದರಿಂದ ರಾಹುಲ್ ಗಾಂಧಿ ತಕ್ಷಣ ಜೈಲಿಗೆ ಹೋಗುವುದಿಲ್ಲ. ಶಿಕ್ಷೆಯ ದಿನಾಂಕದಿಂದ ಜಾರಿಗೆ ಬರುವಂತೆ ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ.

    First published: