• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • National Herald Case: ಇಂದು ಮತ್ತೆ ED ಅಧಿಕಾರಿಗಳಿಂದ ರಾಹುಲ್ ಗಾಂಧಿ ವಿಚಾರಣೆ; ಭುಗಿಲೇಳಲಿದೆಯಾ ಕಾಂಗ್ರೆಸ್ಸಿಗರ ಕೋಪ?

National Herald Case: ಇಂದು ಮತ್ತೆ ED ಅಧಿಕಾರಿಗಳಿಂದ ರಾಹುಲ್ ಗಾಂಧಿ ವಿಚಾರಣೆ; ಭುಗಿಲೇಳಲಿದೆಯಾ ಕಾಂಗ್ರೆಸ್ಸಿಗರ ಕೋಪ?

ಸೋದರಿ ಪ್ರಿಯಾಂಕ ಗಾಂಧಿ ಜೊತೆ ರಾಹುಲ್​ ಗಾಂಧಿ

ಸೋದರಿ ಪ್ರಿಯಾಂಕ ಗಾಂಧಿ ಜೊತೆ ರಾಹುಲ್​ ಗಾಂಧಿ

ನಿನ್ನೆ ಸುಮಾರು 11 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿ ಹೆಚ್ಚಿನ ವಿಚಾರಣೆಗಾಗಿ  ಇಂದು ಮತ್ತೆ ಬರುವಂತೆ ರಾಹುಲ್ ಗಾಂಧಿ ಅವರಿಗೆ ಸೂಚನೆ ನೀಡಲಾಗಿದೆ.

  • Share this:

ನವದೆಹಲಿ, ಜೂ. 14: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ಸಂಸದ ರಾಹುಲ್ ಗಾಂಧಿ (Rahul Gandhi) ಅವರಿಗೆ ಫೆಡರಲ್ ಏಜೆನ್ಸಿ ಮುಂದೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.‌ ಕೊವಿಡ್ ಪಾಸಿಟಿವ್ (Covid Positive) ಆದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ವಿಚಾರಣೆಯಿಂದ ವಿನಾಯಿತಿ ಪಡೆದಿದ್ದಾರೆ. ರಾಹುಲ್ ಗಾಂಧಿ ಅವರನ್ನು ನಿನ್ನೆ (ಜೂನ್ 13) ತಡರಾತ್ರಿವರೆಗೂ ಇಡಿ ವಿಚಾರಣೆ ನಡೆಸಲಾಗಿದೆ.  ಇಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ‌.


ನಿನ್ನೆ ಏನೇನಾಯ್ತ?
ರಾಹುಲ್ ಗಾಂಧಿ ಬೆಳಿಗ್ಗೆ 11.15ಕ್ಕೆ ಎಐಸಿಸಿ ಕಚೇರಿಯಿಂದ ಇಡಿ ಕಚೇರಿಗೆ ಆಗಮಿಸಿದರು. ಅವರ ಜೊತೆ ಇಡಿ ಅಧಿಕಾರಿಗಳು ಔಪಚಾರಿಕ ವಿಚಾರಣೆ ನಡೆಸಿದರು. ಮಧ್ಯಾಹ್ನ 2.15ಕ್ಕೆ ಭೋಜನ‌ ವಿರಾಮ ನೀಡಲಾಯಿತು. ಭೋಜನ ವಿರಾಮದ ವೇಳೆ ರಾಹುಲ್ ಗಾಂಧಿ ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು. ಆ ಸಂದರ್ಭದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಇದ್ದರು‌. ನಂತರ 3.30ಕ್ಕೆ ಮತ್ತೆ ಇಡಿ ಕಚೇರಿಗೆ ಬಂದ ರಾಹುಲ್ ಗಾಂಧಿ ಅವರ ವಿಚಾರಣೆ ತಡರಾತ್ರಿ 11.15ರವರೆಗೂ ನಡೆಯಿತು. ನಿನ್ನೆ ಸುಮಾರು 11 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿ ಹೆಚ್ಚಿನ ವಿಚಾರಣೆಗಾಗಿ  ಇಂದು ಮತ್ತೆ ಬರುವಂತೆ ಸೂಚನೆ ನೀಡಲಾಗಿದೆ.


ಇದನ್ನೂ ಓದಿ: P Chidambaram: ಕೈ ಪ್ರೊಟೆಸ್ಟ್‌ನಲ್ಲಿ ಚಿದಂಬರಂ ಮೂಳೆ ಮುರಿತ! ಪೊಲೀಸರ ವಿರುದ್ಧ ಮಾಜಿ ಸಚಿವರ ಆರೋಪ


ವಿಚಾರಣೆಗೂ ಮುನ್ನ ಪಾದಯಾತ್ರೆ
ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ ಮತ್ತಿತರ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ತಮ್ಮ ಪಕ್ಷದ ಎಲ್ಲಾ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ನಾಯಕರಿಗೆ ಸೂಚನೆ ನೀಡಿತ್ತು. ಆದರೆ ನಾಯಕರು ಎಐಸಿಸಿ ಕಚೇರಿಗೆ ಬರುವ ಮುನ್ನವೇ ಪೊಲೀಸರು ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದರು. ಆದರೂ ರಾಹುಲ್ ಗಾಂಧಿ ಪಾದಯಾತ್ರೆ ಮೂಲಕವೇ ಇಡಿ ಕಚೇರಿಗೆ ತೆರಳಿದರು.


ಲಿಖಿತ ಹೇಳಿಕೆ ನೀಡಿರುವ ರಾಹುಲ್ ಗಾಂಧಿ
ಅಸೋಸಿಯೇಟ್ ಜನರಲ್ ನಿಂದ ಯಂಗ್ ಇಂಡಿಯನ್ ಸಂಸ್ಥೆಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾರಾಟ ಮಾಡಿದ ಬಗ್ಗೆ ನಿನ್ನೆ ರಾಹುಲ್ ಗಾಂಧಿಯಿಂದ ಲಿಖಿತ ಹೇಳಿಕೆ ನೀಡಿದ್ದಾರೆ. PMLA ಕಾಯಿದೆಯ ಸೆಕ್ಷನ್ 50ರ ಪ್ರಕಾರ ಇಡಿ ಅಧಿಕಾರಿಗಳು   ರಾಹುಲ್ ಗಾಂಧಿ ಅವರಿಂದ ಲಿಖಿತ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.


ವಿಚಾರಣೆಯ ಮುಖ್ಯಾಂಶಗಳೇನು?
ನ್ಯಾಷನಲ್ ಹೆರಾಲ್ಡ್ ನಡೆಸುತ್ತಿದ್ದ ಅಸೋಸಿಯೇಟ್ ಜನರಲ್ (AJL) ಸಂಸ್ಥೆಯನ್ನು ಯಂಗ್ ಇಂಡಿಯಾ ಖರೀದಿ ಮಾಡಿದ್ದು ಹೇಗೆ? ಖರೀದಿ ಪ್ರಕ್ರಿಯೆ ಯಾವ ರೀತಿಯಲ್ಲಿ ಇತ್ತು ಅಸೋಸಿಯೇಟ್ ಜನರಲ್ ಸಂಸ್ಥೆಗೆ ಎಷ್ಟು ಸಾಲ ನೀಡಲಾಗಿದೆ? ಅಸೋಸಿಯೇಟ್ ಜನರಲ್ ಅನ್ನು ಮಾರಾಟ ಮಾಡಲು ಇದ್ದ ಕಾರಣವೇನು? ನ್ಯಾಷನಲ್ ಹೆರಾಲ್ಡ್ ಆಸ್ತಿ ಮೌಲ್ಯ ಎಷ್ಟು? ಅಸೋಸಿಯೇಟ್ ಜನರಲ್ ಸಂಸ್ಥೆಯನ್ನು ಯಂಗ್ ಇಂಡಿಯಾ ಸಂಸ್ಥೆ ಖರೀದಿ ಮಾಡಿದ ಹಿನ್ನೆಲೆಯಲ್ಲಿ ನಿಮ್ಮ ಮೇಲಿರುವ ಆರೋಪದ ಬಗ್ಗೆ ನಿಮ್ಮ ಸ್ಪಷ್ಟೀಕರಣ ಏನು? ಎಂಬಿತ್ಯಾದಿ ಅಂಶಗಳ ಮೇಲೆ ರಾಹುಲ್ ಗಾಂಧಿ ಅವರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.


ಸುಬ್ರಮಣಿಯನ್ ಸ್ವಾಮಿ ದಾಖಲಿದ್ದ ಪ್ರಕರಣ
2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಕಾಂಗ್ರೆಸ್‌ಗೆ ನೀಡಬೇಕಿದ್ದ 90.25 ಕೋಟಿ ರೂ.ಗಳನ್ನು ವಸೂಲಿ ಮಾಡುವ ಹಕ್ಕನ್ನು ಪಡೆಯಲು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಕೇವಲ 50 ಲಕ್ಷ ರೂಪಾಯಿಗಳನ್ನು ಪಾವತಿಸಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ವಂಚನೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸಂಚು ರೂಪಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಆರೋಪಿಸಿದ್ದರು.

top videos
    First published: