ರಾಜಸ್ಥಾನದ ಸರ್ಕಾರವನ್ನು ಉರುಳಿಸಲು ಬಿಜೆಪಿ ಷಡ್ಯಂತ್ರ ಸ್ಪಷ್ಟವಾಗಿದೆ; ರಾಹುಲ್ ಗಾಂಧಿ

ರಾಹುಲ್​ ಗಾಂಧಿ

ರಾಹುಲ್​ ಗಾಂಧಿ

ರಾಜ್ಯಪಾಲ ಕಲ್ರಾಜ್ ಮಿಶ್ರಾ ಈವರೆಗೆ ಅಧಿವೇಶನ ಕರೆಯಲು ಮುಂದಾಗಿಲ್ಲ. ಅಲ್ಲದೆ, ಕೇಂದ್ರ ಸರ್ಕಾರದ ನಾಯಕರು ಅಧಿವೇಶನ ಕರೆಯದಂತೆ ರಾಜ್ಯಪಾಲರನ್ನು ತಾಕೀತು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇದರ ಬೆನ್ನಿಗೆ ರಾಹುಲ್ ಗಾಂಧಿ ಶೀಘ್ರದಲ್ಲೇ ರಾಜಸ್ಥಾನದ ಅಧಿವೇಶ ಕರೆಯಬೇಕು ಎಂದು ಒತ್ತಾಯಿಸಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಮುಂದೆ ಓದಿ ...
  • Share this:

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸಲು "ಬಿಜೆಪಿ ಪಿತೂರಿ" ಸ್ಪಷ್ಟವಾಗಿದೆ. ಹೀಗಾಗಿ ರಾಜ್ಯಪಾಲ ಕಲ್ರಾಜ್ ಮಿಶ್ರಾ ಶೀಘ್ರದಲ್ಲೇ ರಾಜ್ಯ ವಿಧಾನಸಭೆ ಸಭೆ ಅಧಿವೇಶನ ಕರೆಯಬೇಕು. ದೇಶದ ಜನರ ಎದುರು ಸತ್ಯವನ್ನು ಬಟಾಬಯಲು ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್‌ ಮೂಲಕ ಒತ್ತಾಯಿಸಿದ್ದಾರೆ.


ರಾಜಸ್ತಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಹಾಗೂ ಬಂಡಾಯ ನಾಯಕ ಸಚಿನ್ ಪೈಲಟ್ ತೆರೆಯ ಮರೆಯಲ್ಲೇ ಸಾಕಷ್ಟು ಕೆಲಸ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಸಚಿನ್‌ ಪೈಲಟ್‌ ಬಣದ 18 ಶಾಸಕರು ನಾಪತ್ತೆಯಾಗಿದ್ದಾರೆ.  ಹೀಗಾಗಿ ಪೈಲಟ್‌ ಬಣದ ಶಾಸಕರನ್ನು ಹೊರತುಪಡಿಸಿ ಶಾಸಕರ ಸಭೆ ಕರೆದು ತಮಗೆ 102 ಶಾಸಕರ ಬೆಂಬಲ ಇದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಸಾಬೀತುಪಡಿಸಿದ್ದರು. ಇದೇ ಕಾರಣಕ್ಕೆ ಅಧಿವೇಶನ ಕರೆದು ತಮಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರ ಬಳಿ ಮನವಿ ಮಾಡಿದ್ದರು.


ಆದರೆ, ರಾಜ್ಯಪಾಲ ಕಲ್ರಾಜ್ ಮಿಶ್ರಾ ಈವರೆಗೆ ಅಧಿವೇಶನ ಕರೆಯಲು ಮುಂದಾಗಿಲ್ಲ. ಅಲ್ಲದೆ, ಕೇಂದ್ರ ಸರ್ಕಾರದ ನಾಯಕರು ಅಧಿವೇಶನ ಕರೆಯದಂತೆ ರಾಜ್ಯಪಾಲರನ್ನು ತಾಕೀತು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇದರ ಬೆನ್ನಿಗೆ ರಾಹುಲ್ ಗಾಂಧಿ ಶೀಘ್ರದಲ್ಲೇ ರಾಜಸ್ಥಾನದ ಅಧಿವೇಶ ಕರೆಯಬೇಕು ಎಂದು ಒತ್ತಾಯಿಸಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.



ಈ ಕುರಿತು “ಸೊಕ್ಕಿನ ಬಿಜೆಪಿ” ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ದೇಶವನ್ನು ಸಂವಿಧಾನ ಮತ್ತು ಕಾನೂನಿನಿಂದ ಆಳಲಾಗುತ್ತದೆ. ಸರ್ಕಾರಗಳನ್ನು ಜನರ ಆದೇಶದ ಮೇರೆಗೆ ನಡೆಸಲಾಗುತ್ತದೆ. ಜನರ ಆದೇಶ ಕಾಂಗ್ರೆಸ್ ಪರವಾಗಿದೆ. ಆದರೆ, ಸರ್ಕಾರವನ್ನು ಉರುಳಿಸಲು ಬಿಜೆಪಿ ನಡೆಸುತ್ತಿರುವ ಷಡ್ಯಂತ್ರ ಸ್ಪಷ್ಟವಾಗಿದೆ. ಇದು ರಾಜಸ್ಥಾನದ 8 ಕೋಟಿ ಜನರಿಗೆ ಅವಮಾನ. ಹೀಗಾಗಿ ರಾಜ್ಯಪಾಲ ಕಲ್ರಾಜ್ ಮಿಶ್ರಾ ಶೀಘ್ರದಲ್ಲೇ ವಿಧಾನಸಭೆ ಅಧಿವೇಶನ ಕರೆಯಬೇಕು. ಇದರಿಂದ ದೇಶದ ಎದುರು ಸತ್ಯ ಬಟಾಬಯಲಾಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ : ದಿಲ್ಲಿ ಪೋಸ್ಟ್ | ಹಳ್ಳಿಹಕ್ಕಿ ಗುಟುರಿಗೆ ನಡುಗಿದ ಯಡಿಯೂರಪ್ಪ, ಸಾಹಿತಿಗಳಿಗೂ ರಾಜ್ಯಪಾಲರಾಗುವ ಆಸೆ!



ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಸಹ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, “ಮಣಿಪುರದಲ್ಲಿರುವ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಈ ಸಂದರ್ಭದಲ್ಲೂ ಅಧಿವೇಶನ ಕರೆದಿದೆ. ಆದರೆ, ಈ ಅವಕಾಶ ರಾಜಸ್ಥಾನದ ಕಾಂಗ್ರೆಸ್ ಸರ್ಕಾರಕ್ಕೆ ಏಕಿಲ್ಲ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

top videos
    First published: