• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Rajasthan Political Crisis: ರಾಜಸ್ಥಾನದಲ್ಲಿ ರೆಸಾರ್ಟ್​ ರಾಜಕೀಯ; ಸಿಎಲ್​ಪಿ ಸಭೆ ಬೆನ್ನಲ್ಲೇ ಕಾಂಗ್ರೆಸ್​ ಶಾಸಕರು ಹೋಟೆಲ್​ಗೆ ಶಿಫ್ಟ್​

Rajasthan Political Crisis: ರಾಜಸ್ಥಾನದಲ್ಲಿ ರೆಸಾರ್ಟ್​ ರಾಜಕೀಯ; ಸಿಎಲ್​ಪಿ ಸಭೆ ಬೆನ್ನಲ್ಲೇ ಕಾಂಗ್ರೆಸ್​ ಶಾಸಕರು ಹೋಟೆಲ್​ಗೆ ಶಿಫ್ಟ್​

ಅಶೋಕ್ ಗೆಹ್ಲೋಟ್

ಅಶೋಕ್ ಗೆಹ್ಲೋಟ್

Rajasthan Political Updates: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನೆಯಲ್ಲಿ ನಡೆದ ಸಿಎಲ್​ಪಿ ಸಭೆಯ ಬಳಿಕ ಎಲ್ಲ ಕಾಂಗ್ರೆಸ್ ಶಾಸಕರನ್ನೂ ಜೈಪುರದ ಫೇರ್​ಮೌಂಟ್ ಹೋಟೆಲ್​ಗೆ ಶಿಫ್ಟ್​ ಮಾಡಲಾಗಿದೆ. ಈ ಮೂಲಕ ರಾಜಸ್ಥಾನದಲ್ಲಿ ರೆಸಾರ್ಟ್​ ರಾಜಕಾರಣ ಶುರುವಾಗಿದೆ.

  • Share this:

ಜೈಪುರ (ಜು, 13): ರಾಜಸ್ಥಾನದ ಸರ್ಕಾರದ ರಾಜಕೀಯ ಹೈಡ್ರಾಮ ಇನ್ನೂ ಅಂತಿಮ ಹಂತಕ್ಕೆ ಬಂದಿಲ್ಲ. ತನ್ನ ಬಣದಲ್ಲಿ 30 ಕಾಂಗ್ರೆಸ್ ಶಾಸಕರಿದ್ದಾರೆ ಎಂದು ಡಿಸಿಎಂ ಸಚಿನ್ ಪೈಲಟ್ ಘೋಷಿಸಿದ್ದರು. ಆದರೆ, ಸಿಎಂ ಅಶೋಕ್ ಗೆಹ್ಲೋಟ್ ಮನೆಯಲ್ಲಿ ನಡೆದ ಸಿಎಲ್​ಪಿ ಸಭೆಯಲ್ಲಿ 102 ಕಾಂಗ್ರೆಸ್ ಶಾಸಕರು ಪಾಲ್ಗೊಳ್ಳುವ ಮೂಲಕ ಸರ್ಕಾರಕ್ಕೆ ತಮ್ಮ ಬೆಂಬಲ ನೀಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್​ನ 102 ಶಾಸಕರನ್ನು ಹೋಟೆಲ್​ಗೆ ಶಿಫ್ಟ್​ ಮಾಡಲಾಗಿದೆ.


ಇಂದು ಸಿಎಲ್​ಪಿ ಸಭೆಯಲ್ಲಿ ಬಂಡಾಯಗಾರ ಸಚಿನ್ ಪೈಲಟ್​ಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ. ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಇಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಮಾಡುವ ಮೂಲಕ ಸಚಿನ್ ಪೈಲಟ್​ಗೆ ಪರೋಕ್ಷ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ ರಾಜಸ್ಥಾನದ ಸಚಿವ ರಮೇಶ್ ಮೀನಾ ತಾವು ಸಚಿನ್ ಪೈಲಟ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: Rajasthan Political Crisis: ರಾಜಸ್ಥಾನದಲ್ಲಿ102 ಕೈ ಶಾಸಕರು ಸಿಎಂ ಅಶೋಕ್ ಗೆಹ್ಲೋಟ್​ಗೆ ಬೆಂಬಲ; ಸಚಿನ್ ಪೈಲಟ್ ಬಲಾಬಲ ಇಳಿಕೆ


ಸಿಎಲ್​ಪಿ ಸಭೆಯ ಬಳಿಕ ತಮಗೆ ಬೆಂಬಲ ನೀಡಿರುವ ಕಾಂಗ್ರೆಸ್ ಶಾಸಕರು ಸಚಿನ್ ಪೈಲಟ್ ಬಣ ಸೇರಿದರೆ ಕಷ್ಟವೆಂದು ಎಲ್ಲ ಶಾಸಕರನ್ನೂ ಜೈಪುರದ ಫೇರ್​ಮೌಂಟ್ ಹೋಟೆಲ್​ಗೆ ಶಿಫ್ಟ್​ ಮಾಡಲಾಗಿದೆ. ಈ ಮೂಲಕ ರಾಜಸ್ಥಾನದಲ್ಲಿ ರೆಸಾರ್ಟ್​ ರಾಜಕಾರಣ ಶುರುವಾಗಿದೆ.



ರಾಜಸ್ಥಾನದ ಕಾಂಗ್ರೆಸ್ ನಾಯಕರ ವಿರುದ್ಧ ಬಂಡಾಯವೆದ್ದಿದ್ದ ಸಚಿನ್ ಪೈಲಟ್ ಪಕ್ಷ ತೊರೆಯಲು ನಿರ್ಧರಿಸಿದ್ದರು. ಅಲ್ಲದೆ ತಮಗೆ 30ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬೆಂಬಲವೂ ಇದೆ ಎಂದು ಘೋಷಿಸಿದ್ದರು. ಕೆಲವು ತಿಂಗಳಿನಿಂದ ಸಚಿನ್ ಪೈಲಟ್ ಬಿಜೆಪಿಯ ಸಂಪರ್ಕದಲ್ಲಿದ್ದಾರೆ, ಕಾಂಗ್ರೆಸ್ ತೊರೆದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ಅದೆಲ್ಲದಕ್ಕೂ ಸ್ಪಷ್ಟನೆ ನೀಡಿದ್ದ ಸಚಿನ್ ಪೈಲಟ್ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಸೇರುವುದಿಲ್ಲ. ಸಿಎಂ ಅಶೋಕ್ ಗೆಹ್ಲೋಟ್​ ಹಾಗೂ ರಾಜ್ಯದ ಕೆಲವು ಕಾಂಗ್ರೆಸ್ ನಾಯಕರ ರಾಜಕೀಯ ನಿಲುವುಗಳಿಂದ ಅಸಮಾಧಾನಗೊಂಡು ಪಕ್ಷ ಬಿಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದರು.

ಮೂಲಗಳ ಪ್ರಕಾರ ದೇಶದಲ್ಲಿ ಅಧಿಕಾರಕ್ಕಾಗಿ ಹೆಣಗಾಡುತ್ತಿರುವ ಕಾಂಗ್ರೆಸ್ ಪಕ್ಷ ತನ್ನ ಕೈಯಲ್ಲಿರುವ ಮತ್ತೊಂದು ರಾಜ್ಯವನ್ನು ಕಳೆದುಕೊಳ್ಳಲು ಸಿದ್ಧವಿಲ್ಲ. ಈ ಹಿಂದೆ ಕರ್ನಾಟಕ ರಾಜ್ಯದಲ್ಲೂ ಇದೇ ರೀತಿಯ ಬಂಡಾಯದಿಂದಾಗಿ ಪಕ್ಷ ಅಧಿಕಾರದಿಂದ ಕೆಳಗಿಳಿಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಇದೀಗ ರಾಜಸ್ಥಾನದಲ್ಲೂ ಅದೇ ರೀತಿಯ ಪರಿಸ್ಥಿತಿ ಉಂಟಾಗದಂತೆ ಕಾಂಗ್ರೆಸ್ ಹೈಕಮಾಂಡ್ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಹೀಗಾಗಿ, ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರ ಮನವೊಲಿಕೆಗೆ ಇನ್ನಿಲ್ಲದ ಪ್ರಯತ್ನ ಮಾಡಲಾಗುತ್ತಿದೆ.

Published by:Sushma Chakre
First published: