• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Rajasthan Political Crisis: ರಾಜಸ್ಥಾನದಲ್ಲಿ102 ಕೈ ಶಾಸಕರು ಸಿಎಂ ಅಶೋಕ್ ಗೆಹ್ಲೋಟ್​ಗೆ ಬೆಂಬಲ; ಸಚಿನ್ ಪೈಲಟ್ ಬಲಾಬಲ ಇಳಿಕೆ

Rajasthan Political Crisis: ರಾಜಸ್ಥಾನದಲ್ಲಿ102 ಕೈ ಶಾಸಕರು ಸಿಎಂ ಅಶೋಕ್ ಗೆಹ್ಲೋಟ್​ಗೆ ಬೆಂಬಲ; ಸಚಿನ್ ಪೈಲಟ್ ಬಲಾಬಲ ಇಳಿಕೆ

ಜೈಪುರದ ಅಶೋಕ್ ಗೆಹ್ಲೋಟ್ ನಿವಾಸದಲ್ಲಿ ಕಾಂಗ್ರೆಸ್ ಶಾಸಕರು ಬೆಂಬಲ ಸೂಚಿಸಿದ ಸಂದರ್ಭ

ಜೈಪುರದ ಅಶೋಕ್ ಗೆಹ್ಲೋಟ್ ನಿವಾಸದಲ್ಲಿ ಕಾಂಗ್ರೆಸ್ ಶಾಸಕರು ಬೆಂಬಲ ಸೂಚಿಸಿದ ಸಂದರ್ಭ

Rajasthan Political Updates: ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ರಾಜಸ್ಥಾನದ 30 ಕೈ ಶಾಸಕರು ನನಗೆ ಬೆಂಬಲ ನೀಡಿದ್ದಾರೆ ಎಂದು ಡಿಸಿಎಂ ಸಚಿನ್ ಪೈಲಟ್ ಹೇಳಿದ್ದರು. ಆದರೆ, ಆ 30 ಶಾಸಕರ ಪೈಕಿ 25 ಶಾಸಕರು ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನೆಯಲ್ಲಿ ನಡೆದಿರುವ ಸಿಎಲ್​ಪಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಮುಂದೆ ಓದಿ ...
  • Share this:

ನವದೆಹಲಿ (ಜು. 13): ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಕ್ಷಣಕ್ಷಣಕ್ಕೂ ಬಿರುಸುಪಡೆದುಕೊಳ್ಳುತ್ತಿವೆ. ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡು ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಜೊತೆ ಕೈ ಜೋಡಿಸಿದ್ದ ಕೆಲವು ಕಾಂಗ್ರೆಸ್ ಶಾಸಕರು ಪಕ್ಷ ತೊರೆಯಲು ನಿರ್ಧರಿಸಿದ್ದರು. ಇದರಿಂದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗುವ ಭೀತಿಯನ್ನು ಎದುರಿಸುತ್ತಿದೆ. ಇದರ ನಡುವೆ ಇಂದು ಸಿಎಂ ಅಶೋಕ್ ಗೆಹ್ಲೋಟ್​ ಅವರ ನಿವಾಸದಲ್ಲಿ ನಡೆದಿರುವ ಸಭೆಯಲ್ಲಿ ಕಾಂಗ್ರೆಸ್​ನ 102 ಶಾಸಕರು ಪಾಲ್ಗೊಳ್ಳುವ ಮೂಲಕ ತಮ್ಮ ಸರ್ಕಾರಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಶಾಸಕರ ಪೈಕಿ ಸಚಿನ್ ಪೈಲಟ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದ ಶಾಸಕರೂ ಇರುವುದರಿಂದ ಸಚಿನ್ ಪೈಲಟ್ ಬೆಂಬಲಿಗ ಶಾಸಕರ ಸಂಖ್ಯೆ ಕಡಿಮೆಯಾದಂತಾಗಿದೆ.


ರಾಜಸ್ಥಾನದ ಕಾಂಗ್ರೆಸ್ ನಾಯಕರ ವಿರುದ್ಧ ಬಂಡಾಯವೆದ್ದಿದ್ದ ಸಚಿನ್ ಪೈಲಟ್ ಪಕ್ಷ ತೊರೆಯಲು ನಿರ್ಧರಿಸಿದ್ದರು. ಅಲ್ಲದೆ ತಮಗೆ 30ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಬೆಂಬಲವೂ ಇದೆ ಎಂದು ಘೋಷಿಸಿದ್ದರು. ಕೆಲವು ತಿಂಗಳಿನಿಂದ ಸಚಿನ್ ಪೈಲಟ್ ಬಿಜೆಪಿಯ ಸಂಪರ್ಕದಲ್ಲಿದ್ದಾರೆ, ಕಾಂಗ್ರೆಸ್ ತೊರೆದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ಅದೆಲ್ಲದಕ್ಕೂ ಸ್ಪಷ್ಟನೆ ನೀಡಿದ್ದ ಸಚಿನ್ ಪೈಲಟ್ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಸೇರುವುದಿಲ್ಲ. ಸಿಎಂ ಅಶೋಕ್ ಗೆಹ್ಲೋಟ್​ ಹಾಗೂ ರಾಜ್ಯದ ಕೆಲವು ಕಾಂಗ್ರೆಸ್ ನಾಯಕರ ರಾಜಕೀಯ ನಿಲುವುಗಳಿಂದ ಅಸಮಾಧಾನಗೊಂಡು ಪಕ್ಷ ಬಿಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದರು.


ಇದನ್ನೂ ಓದಿ: Rajasthan Political Crisis: ನಮ್ಮ ಅಶ್ವಶಾಲೆಯಿಂದ ಕುದುರೆಗಳು ತಪ್ಪಿಸಿಕೊಂಡ ನಂತರವೇ ನಾವು ಎಚ್ಚರಗೊಳುತ್ತಿದ್ದೇವೆ; ಕಪಿಲ್ ಸಿಬಲ್ ಆತಂಕ


ನನ್ನ ರೀತಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ 30 ಶಾಸಕರು ನನಗೆ ಬೆಂಬಲ ನೀಡಿದ್ದಾರೆ ಎಂದು ಸಚಿನ್ ಪೈಲಟ್ ಹೇಳಿದ್ದರು. ಆದರೆ, ಆ 30 ಶಾಸಕರ ಪೈಕಿ ಕೆಲವರು ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನೆಯಲ್ಲಿ ನಡೆದಿರುವ ಸಿಎಲ್​ಪಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಹೀಗಾಗಿ, ಸಚಿನ್ ಪೈಲಟ್ ಬಣದ ಸಂಖ್ಯೆ ಕ್ಷೀಣಿಸಿದಂತಾಗಿದೆ. ಗೆಹ್ಲೋಟ್​ ಸರ್ಕಾರಕ್ಕಿರುವ 107 ಕಾಂಗ್ರೆಸ್​ ಶಾಸಕರ ಬೆಂಬಲದಲ್ಲಿ ಇಂದು ಸಿಎಲ್​ಪಿ ಸಭೆಯಲ್ಲಿ 102 ಶಾಸಕರು ಪಾಲ್ಗೊಂಡಿರುವುದರಿಂದ ಬಂಡಾಯ ಶಾಸಕರ ಬಣದಲ್ಲಿ ಸಚಿನ್ ಪೈಲಟ್ ಸೇರಿ ಕೇವಲ ಐವರು ಕೈ ಶಾಸಕರು ಉಳಿದಂತಾಗಿದೆ.



ಮೂಲಗಳ ಪ್ರಕಾರ ದೇಶದಲ್ಲಿ ಅಧಿಕಾರಕ್ಕಾಗಿ ಹೆಣಗಾಡುತ್ತಿರುವ ಕಾಂಗ್ರೆಸ್ ಪಕ್ಷ ತನ್ನ ಕೈಯಲ್ಲಿರುವ ಮತ್ತೊಂದು ರಾಜ್ಯವನ್ನು ಕಳೆದುಕೊಳ್ಳಲು ಸಿದ್ಧವಿಲ್ಲ. ಈ ಹಿಂದೆ ಕರ್ನಾಟಕ ರಾಜ್ಯದಲ್ಲೂ ಇದೇ ರೀತಿಯ ಬಂಡಾಯದಿಂದಾಗಿ ಪಕ್ಷ ಅಧಿಕಾರದಿಂದ ಕೆಳಗಿಳಿಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಇದೀಗ ರಾಜಸ್ಥಾನದಲ್ಲೂ ಅದೇ ರೀತಿಯ ಪರಿಸ್ಥಿತಿ ಉಂಟಾಗದಂತೆ ಕಾಂಗ್ರೆಸ್ ಹೈಕಮಾಂಡ್ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಹೀಗಾಗಿ, ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರ ಮನವೊಲಿಕೆಗೆ ಇನ್ನಿಲ್ಲದ ಪ್ರಯತ್ನ ಮಾಡಲಾಗುತ್ತಿದೆ.


ಇದನ್ನೂ ಓದಿ: Rajasthan Political Crisis: ’ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ’; ರಾಜಸ್ಥಾನದ ಡಿಸಿಎಂ ಸಚಿನ್‌ ಪೈಲಟ್‌ ಸ್ಪಷ್ಟನೆ


ಕಾಂಗ್ರೆಸ್ ಪಕ್ಷದ ಬಾಗಿಲು ತೆರೆದೇ ಇರಲಿದೆ: 

top videos


    ಸಿಎಲ್​ಪಿ ಸಭೆಯಲ್ಲಿ ಪಾಲ್ಗೊಳ್ಳದವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದ ಕಾಂಗ್ರೆಸ್ ನಾಯಕರು ಇದೀಗ ಬಂಡಾಯ ಶಾಸಕರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಕಾಂಗ್ರೆಸ್ ಜೊತೆಗೆ ಮತ್ತೆ ಕೈಜೋಡಿಸಲು ಮನಸಿರುವ ಶಾಸಕರು ನನಗೆ ಕರೆ ಮಾಡಬಹುದು, ಪಕ್ಷದ ಬಾಗಿಲು ನಿಮಗೆ ಸದಾ ತೆರೆದಿರುತ್ತದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ಆಹ್ವಾನ ನೀಡಿದ್ದಾರೆ.


    ಇದರ ಬೆನ್ನಲ್ಲೇ ರಾಜಸ್ಥಾನದಲ್ಲಿ ಎದ್ದಿರುವ ಬಂಡಾಯದ ಪರಿಣಾಮ ಇತರೆ ಶಾಸಕರು ಮೇಲೂ ಉಂಟಾಗದಿರಲಿ ಎಂಬ ಉದ್ದೇಶದಿಂದ ಕಾಂಗ್ರೆಸ್ ತನ್ನ ಶಾಸಕರನ್ನು ರೆಸಾರ್ಟ್​ಗೆ ಶಿಫ್ಟ್​ ಮಾಡಲು ಚಿಂತೆ ನಡೆಸಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಸಿಎಂ ಅಶೋಕ್ ಗೆಹ್ಲೋಟ್​ ಜೊತೆಗೆ ರಾಹುಲ್ ಗಾಂಧಿ ಫೋನ್​ನಲ್ಲಿ ರಾಜಕೀಯ ಸ್ಥಿತಿಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಇಂದು ರಾಜಸ್ಥಾನದ ಜೈಪುದಲ್ಲಿರುವ ಸಿಎಂ ಅಶೋಕ್ ಗೆಹ್ಲೋಟ್​ ನಿವಾಸದಲ್ಲಿ ನಡೆದ ಸಿಎಲ್​ಪಿ ಸಭೆಯಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಸರ್ಕಾರ ಸುಭದ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    First published: