Rajasthan: ರಾಜಸ್ಥಾನ ಜಿಲ್ಲಾ ಪರಿಷತ್, ಪಂಚಾಯತ್ ಚುನಾವಣೆ: ಇಂದು ಮತ ಎಣಿಕೆ ಆರಂಭ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

199 ಜಿಲ್ಲಾ ಪರಿಷತ್ ಮತ್ತು 1,537 ಪಂಚಾಯಿತಿ ಸಮಿತಿ ಸದಸ್ಯರ ಫಲಿತಾಂಶಗಳನ್ನು ಶನಿವಾರ ಪ್ರಕಟಿಸಲಾಗುವುದು, ಮತಗಳ ಎಣಿಕೆಯು ಆಯಾ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

  • Share this:

Rajasthan: ರಾಜಸ್ಥಾನದ ಆರು ಜಿಲ್ಲೆಗಳಲ್ಲಿ ಜಿಲ್ಲಾ ಪರಿಷತ್ (zila parishad) ಮತ್ತು ಪಂಚಾಯತ್ ಸಮಿತಿ ಚುನಾವಣೆಗಳ ಮತ ಎಣಿಕೆ ಶನಿವಾರ ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಆರು ಜಿಲ್ಲೆಗಳಲ್ಲಿ 200 ಜಿಲ್ಲಾ ಪರಿಷತ್ ಸದಸ್ಯರು, 1,564 ಪಂಚಾಯತ್ ಸಮಿತಿ ಸದಸ್ಯರು, 6 ಜಿಲ್ಲಾ ಪ್ರಮುಖರು ಮತ್ತು ಅವರ ನಿಯೋಗಿಗಳು ಮತ್ತು 78 ಪ್ರಧಾನ್ ಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಸಲಾಗಿದೆ ಎಂದು ಚುನಾವಣಾ ಆಯುಕ್ತ ಪಿ ಎಸ್ ಮೆಹ್ರಾ ಹೇಳಿದ್ದಾರೆ.


ಈ ಪೈಕಿ ಒಬ್ಬ ಜಿಲ್ಲಾ ಪರಿಷತ್ ಸದಸ್ಯರು ಮತ್ತು 26 ಪಂಚಾಯಿತಿ ಸಮಿತಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅವರು ಹೇಳಿದರು.


199 ಜಿಲ್ಲಾ ಪರಿಷತ್ ಮತ್ತು 1,537 ಪಂಚಾಯಿತಿ ಸಮಿತಿ ಸದಸ್ಯರ ಫಲಿತಾಂಶಗಳನ್ನು ಶನಿವಾರ ಪ್ರಕಟಿಸಲಾಗುವುದು, ಮತಗಳ ಎಣಿಕೆಯು ಆಯಾ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.


ಮೆಹ್ರಾ ಪ್ರಕಾರ, ಎಲ್ಲಾ ಮೂರು ಹಂತಗಳಲ್ಲಿ, ಶೇಕಡಾ 64.40 ರಷ್ಟು ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಮಾತ್ರ ಎಣಿಕೆ ಕೇಂದ್ರಗಳಲ್ಲಿ ನಿಯೋಜಿಸಲಾಗುವುದು ಎಂದು ಅವರು ಹೇಳಿದರು.


ಕರ್ನಾಟಕದಲ್ಲಿಯೂ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆದಿದ್ದು ಇದು ಸಹ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.


ಬೆಳಗಾವಿ ಮಹಾನಗರ ಪಾಲಿಕೆ ಮತದಾನ ಪ್ರಕ್ರಿಯೆ (Belgaum Municipal Corporation Election voting) ಶುಕ್ರವಾರ ಮುಕ್ತಾಯಗೊಂಡಿದ್ದು, ಬೆಳಗಾವಿ ಪಾಲಿಕೆಗೆ ಇದೇ ಮೊದಲ ಸಲ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆದಿದೆ.


ಶುಕ್ರವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆದಿದೆ. ಬಹುತೇಕ ಶಾಂತ ರೀತಿಯಲ್ಲಿ ಮತದಾನ ನಡೆದಿದ್ದು, ಸಣ್ಣಪುಟ್ಟ ಗೊಂದಲಗಳು ಸೃಷ್ಠಿಯಾಗಿದ್ದವು. ಬೆಳಗಾವಿ ನಗರದಲ್ಲಿ ಇಂದು ಚುನಾವಣೆಯಲ್ಲಿ ಶೇ. 50.41ರಷ್ಟು ಮತದಾನ ನಡೆದಿದೆ. ಕಡಿಮೆ ಮತದಾನ ಆಗಿರುವ ಹಿನ್ನಲೆ ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬ ಲೆಕ್ಕಚಾರಗಳು ಆರಂಭವಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಎಂಇಎಸ್ ಗೆ ಈ ಚುನಾವಣೆ ಅತ್ಯಂತ ಪ್ರತಿಷ್ಠೆಯ ಪ್ರಶ್ನೆಯಾಗಿದೆ.


ಇದನ್ನೂ ಓದಿ: Madhya Pradesh: ಸರ್ಕಾರಿ ನೇಮಕಾತಿಗಳಲ್ಲಿ OBCಗಳಿಗೆ ಶೇ 27 ಮೀಸಲಾತಿ ಘೋಷಿಸಿದ ಮಧ್ಯಪ್ರದೇಶ ಸರ್ಕಾರ


ಬೆಳಗಾವಿಯಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಶೇ 50.41ರಷ್ಟು ಮತದಾನ ಆಗಿದ್ದು, ಇದೇ ತಿಂಗಳ 6ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.   385 ಜನ ಅಭ್ಯರ್ಥಿಗಳ ಭವಿಷ್ಯ ಶೀಘ್ರ ನಿರ್ಧಾರವಾಗಲಿದೆ. ಕಾಂಗ್ರೆಸ್, ಬಿಜೆಪಿಗೆ ಎಂಎಇಸ್ ಈ ಸಲದ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.

First published: