ನವದೆಹಲಿ: ಮಾರಕ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದೆ ದಿನದಿಂದ ದಿನಕ್ಕೆ ತನ್ನ ಕರಾಳ ನರ್ತನ ತೋರುತ್ತಿದೆ. ಮಾರಕ ಸೋಂಕು ತಡೆಗೆ ಈಗಾಗಲೇ ಉದ್ಯಮಿಗಳು, ಸಿನಿಮಾ ನಟರು ತಮ್ಮ ಕೈಲಾದ ಆರ್ಥಿಕ ನೆರವು ನೀಡುತ್ತಿದ್ದಾರೆ. ಅದರಂತೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನಿಂದ ಪ್ರಧಾನಮಂತ್ರಿ ಪರಿಹಾರ ನಿಧಿಗೆ 500 ಕೋಟಿ ರೂಪಾಯಿ ದೇಣಿಗೆ ನೀಡಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಪ್ರಧಾನಮಂತ್ರಿ ಕೊರೋನಾ ನಿಧಿಗೆ 500 ಕೋಟಿ ಜೊತೆಗೆ ಇತರೆ ರಾಜ್ಯಗಳಿಗೂ ಪ್ರತ್ಯೇಕವಾಗಿ ದೇಣಿಗೆ ನೀಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಮಾತನಾಡಿ, ಕೊರೋನಾ ವೈರಸ್ ಬಿಕ್ಕಟ್ಟಿನಿಂದ ದೇಶದ ಶೀಘ್ರದಲ್ಲಿ ಹೊರಬರಲಿದೆ ಎಂಬ ವಿಶ್ವಾಸವಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಇಡೀ ಕುಟುಂಬ ರಾಷ್ಟ್ರದ ಜೊತೆಗೆ ಇದೆ ಕೋವಿಡ್-19 ವಿರುದ್ಧದ ಯುದ್ಧದಲ್ಲಿ ಗೆಲವಿಗಾಗಿ ಮಾಡಬೇಕಾದ ಎಲ್ಲ ಕೆಲಸವನ್ನು ಮಾಡಲಾಗುವುದು ಎಂದು ಹೇಳಿದರು.
![]()
ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಪತ್ರಿಕಾ ಪ್ರಕಟಣೆ.
![]()
ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಪತ್ರಿಕಾ ಪ್ರಕಟಣೆ.
ರಿಲಯನ್ಸ್ ಇಂಡಿಸ್ಟ್ರೀಸ್ ಕೊಡುಗೆಗಳು
- ಪ್ರಧಾನಮಂತ್ರಿ ಪರಿಹಾರ ನಿಧಿಗೆ 500 ಕೋಟಿ ರೂಪಾಯಿ
- ಮಹಾರಾಷ್ಟ್ರ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರೂ.
- ಗುಜರಾತ್ ಪರಿಹಾರ ನಿಧಿಗೆ 5 ಕೋಟಿ ರೂ.
- ಕೋವಿಡ್-19 ಚಿಕಿತ್ಸೆಗಾಗಿ ಎರಡು ವಾರದಲ್ಲಿ ನೂರು ಬೆಡ್ಗಳ ಸೌಕರ್ಯವುಳ್ಳ ವಿಶೇಷ ಆಸ್ಪತ್ರೆ ನಿರ್ಮಾಣ
- ದೇಶಾದ್ಯಂತ ಮುಂದಿನ ಹತ್ತು ದಿನಗಳ ಕಾಲ ಬಡವರಿಗೆ ಊಟ ನೀಡಲು 50 ಲಕ್ಷ ರೂಪಾಯಿ.
- ಆರೋಗ್ಯ ಕಾರ್ಯಕರ್ತರು ಮತ್ತು ಇತರ ರಕ್ಷಣಾ ಸಿಬ್ಬಂದಿಗೆ ದಿನಕ್ಕೆ ಒಂದು ಲಕ್ಷ ಮಾಸ್ಕ್ ವಿತರಣೆ
- ತುರ್ತು ವಾಹನಗಳಿಗೆ ದೇಶಾದ್ಯಂತ ಇಂಧನ ಉಚಿತ
- ರಿಲಾಯನ್ಸ್ ರಿಟೈಲ್ಸ್ ಸ್ಟೋರ್ಗಳ ಮೂಲಕ ಜನರಿಗೆ ಬೇಕಾದ ಅಗತ್ಯ ವಸ್ತುಗಳ ಪೂರೈಕೆ ಮತ್ತು ಹೋಂ ಡೆಲಿವರಿ ವ್ಯವಸ್ಥೆ
ಇದನ್ನು ಓದಿ: ಕೇರಳದಲ್ಲಿ ಮತ್ತೆ 32 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 213ಕ್ಕೇರಿಕೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ