ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇಂಗ್ಲೀಷ್ ಸುದ್ದಿ ಮಾಧ್ಯಮವಾದ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಇಂದು ಬೆಳಗ್ಗೆ ಏಕಾಏಕಿ ಬಂಧಿಸಿದ್ದಾರೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್ ಗೋಸ್ವಾಮಿ ಮೇಲಿದೆ. ಅರ್ನಬ್ ಗೋಸ್ವಾಮಿ ಮತ್ತು ಇನ್ನಿಬ್ಬರು ತಮಗೆ 5.4 ಕೋಟಿ ರೂ. ಹಣ ನೀಡಬೇಕು. ಆ ಹಣ ನೀಡಲು ಅವರು ಒಪ್ಪುತ್ತಿಲ್ಲ. ಇದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗ ಸಾವನ್ನಪ್ಪಿರುವುದು ಗೊತ್ತಾಗುತ್ತಿದ್ದಂತೆ ಅನ್ವಯ್ ಅವರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.
ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿತ್ತು. 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಕೇಸನ್ನು 2019ರಲ್ಲಿ ರಾಯಘಡ ಪೊಲೀಸರು ಕ್ಲೋಸ್ ಮಾಡಿದ್ದರು. ಆದರೆ, ಅನ್ವಯ್ ನಾಯಕ್ ಅವರ ಪುತ್ರಿ ಅದ್ನಯ ನಾಯಕ್ ನೀಡಿದ್ದ ಹೊಸ ದೂರಿಗೆ ಸಂಬಂಧಪಟ್ಟಂತೆ ಪ್ರಕರಣದ ಮರು ತನಿಖೆ ಮಾಡಲಾಗುವುದು ಎಂದು ಕಳೆದ ಮೇ ತಿಂಗಳಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಘೋಷಿಸಿದ್ದರು.
ಇದೇ ದೂರಿನ ಅನ್ವಯ ಇಂದು ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಲಾಗಿದೆ. ಪೊಲೀಸರು ತಾವು ಕಾನೂನಿನಂತೆ ಕೆಲಸ ನಿರ್ವಹಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ, ಈ ವಿವಾದ ಇದೀಗ ಸಾಮಾಜಿಕ ಜಾಲತಾಣದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಟ್ವಿಟರ್ನಲ್ಲಂತು ಪರ-ವಿರೋಧ ಚರ್ಚೆಗಳು ಗರಿಗೆದರಿವೆ. ಕೆಲವರು ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿರುವುದು ಖಂಡನೀಯ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಸರಿ ಎಂದು ವಾದಿಸುತ್ತಿದ್ದಾರೆ.
The Editors Guild of India has issued a statement on the arrest of Arnab Goswami, editor-in-chief of Republic TV. pic.twitter.com/gL3MstVlla
— Editors Guild of India (@IndEditorsGuild) November 4, 2020
Congress and its allies have shamed democracy once again.
Blatant misuse of state power against Republic TV & Arnab Goswami is an attack on individual freedom and the 4th pillar of democracy.
It reminds us of the Emergency. This attack on free press must be and WILL BE OPPOSED.
— Amit Shah (@AmitShah) November 4, 2020
ಹೀಗೆ ನೂರಾರು ಜನ ಬಿಜೆಪಿ ನಾಯಕರೂ ಸೇರಿದಂತೆ ಸಾರ್ವಜನಿಕರೂ ಕೂಡ ಅರ್ನಾಬ್ ಬಂಧನವನ್ನು ಖಂಡಿಸಿ ಅವರ ಪರ ಟ್ವೀಟ್ ಮಾಡಿದ್ದು, #IndiaWithArnab ಎಂದು ಹಲವರು ಟ್ವೀಟ್ ಮಾಡಿದ್ದಾರೆ.
ಆದರೆ ಇದರ ಜೊತೆಯಲ್ಲೇ ಮತ್ತಷ್ಟು ಟ್ವಿಟ್ಟರ್ ಬಳಕೆದಾರರು ಅರ್ನಾಬ್ ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ.
Did @AmitShah speak up when a journalist from Kerala was arrested & slapped with the draconian UAPA for simply reporting on the Hathras case? #ArnabGoswami has been arrested for allegedly abetting a suicide, not for his journalism (or lack thereof) https://t.co/dX59dDZioc
— Shama Mohamed (@drshamamohd) November 4, 2020
#Anvaynaik claimed in his Suicide Note that #ArnabGoswami and two others owed him Rs 5.4 crore and had refused to pay it back, forcing him to end his life.
His wife pleading for Justice. #JusticeForAnvayNaik pic.twitter.com/01Sbxap3cZ
— Aarti (@aartic02) November 4, 2020
ಇದನ್ನೂ ಓದಿ : ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ; ಮುಂಬೈನಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನ
ಹೀಗೆ ನೂರಾರು ಜನರು ಅರ್ನಾಬ್ ಬಂಧನವನ್ನು ಸಮರ್ಥಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ