• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Supreme Court: ಪ್ರತಿಭಟಿಸುವ ಹಕ್ಕಿದೆ ಎಂದು ಎಲ್ಲಿ ಯಾವಾಗ ಬೇಕಾದರೂ ಪ್ರತಿಭಟಿಸುವಂತಿಲ್ಲ; ಸುಪ್ರೀಂ ಕೋರ್ಟ್​

Supreme Court: ಪ್ರತಿಭಟಿಸುವ ಹಕ್ಕಿದೆ ಎಂದು ಎಲ್ಲಿ ಯಾವಾಗ ಬೇಕಾದರೂ ಪ್ರತಿಭಟಿಸುವಂತಿಲ್ಲ; ಸುಪ್ರೀಂ ಕೋರ್ಟ್​

ಸುಪ್ರೀಂಕೋರ್ಟ್​.

ಸುಪ್ರೀಂಕೋರ್ಟ್​.

ಪ್ರತಿಭಟನೆಗಾಗಿ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಳ್ಳುವಂತಿಲ್ಲ ಮತ್ತು ಸಾರ್ವಜನಿಕ ಪ್ರತಿಭಟನೆಗಳು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ನಡೆಯಬೇಕು ಎಂದು ನ್ಯಾಯಪೀಠವು ಪುನರುಚ್ಚರಿಸಿದೆ.

  • Share this:

    ನವ ದೆಹಲಿ (ಫೆಬ್ರವರಿ 13); ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ವರ್ಷ ದೊಡ್ಡ ಮಟ್ಟದ ಜನ ಹೋರಾಟ ನಡೆದಿತ್ತು. ಶಾಹೀನ್​ ಭಾಗ್​ ಹೋರಾಟ ಈ ವೇಳೆ ವಿಶ್ವದ ಗಮನವನ್ನು ಸೆಳೆದಿತ್ತು. ಈ ವೇಳೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, "ಸಿಎಎ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆಗಳು ಕಾನೂನು ಬಾಹೀರ" ಎಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್​ಮ ಈ ತೀರ್ಪನ್ನು ವಿರೋಧಿಸಿ 12 ಕಾರ್ಯಕರ್ತರು ತೀರ್ಪು ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ, "ಪ್ರತಿಭಟನೆಯ ಹಕ್ಕು ಕೆಲವು ಕರ್ತವ್ಯಗಳನ್ನು ಒಳಗೊಂಡಿರುತ್ತದೆ. ಹಾಗಾಗಿ ಪ್ರತಿಭಟನೆಯನ್ನು ಎಲ್ಲಿಬೇಕಾದರೂ-ಯಾವಾಗಬೇಕಾದರೂ ನಡೆಸಲು ಸಾಧ್ಯವಿಲ್ಲ" ಎಂದು ಅಭಿಪ್ರಾಯಪಟ್ಟಿದೆ.


    "2019 ರಲ್ಲಿ ದೆಹಲಿಯ ಶಾಹೀನ್‌ಬಾಗ್‌ನಲ್ಲಿ ನಡೆದ ಪೌರತ್ವ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಪ್ರತಿಭಟನೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದನ್ನು ಮನಸೋ ಇಚ್ಛೆ ಬಳಸುವಂತಿಲ್ಲ" ಎಂದು ಆದೇಶ ಹೊರಡಿಸಿದೆ.


    "ಪ್ರತಿಭಟನೆಯನ್ನು ಎಲ್ಲಿಬೇಕಾದರೂ-ಯಾವಾಗಬೇಕಾದರೂ ನಡೆಸಲು ಸಾಧ್ಯವಿಲ್ಲ. ಅದು ಕೆಲವು ಸ್ವಯಂಪ್ರೇರಿತ ಪ್ರತಿಭಟನೆಗಳೂ ಕೂಡ ಆಗಿರಬಹುದು. ಆದರೆ ದೀರ್ಘಕಾಲದ ಪ್ರತಿಭಟನೆಯ ಸಂದರ್ಭದಲ್ಲಿ, ಇತರರ ಹಕ್ಕುಗಳ ಮೇಲೆ ಪರಿಣಾಮ ಬೀರುವ ಸಾರ್ವಜನಿಕ ಸ್ಥಳವನ್ನು ನಿರಂತರವಾಗಿ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್, ಅನಿರುದ್ ಬೋಸ್ ಮತ್ತು ಕೃಷ್ಣ ಮುರಾರಿ ಇದ್ದ ಮೂವರ ನ್ಯಾಯಾಧೀಶರ ಪೀಠವು ಹೇಳಿದೆ.


    "ಪ್ರತಿಭಟನೆಗಾಗಿ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಳ್ಳುವಂತಿಲ್ಲ ಮತ್ತು ಸಾರ್ವಜನಿಕ ಪ್ರತಿಭಟನೆಗಳು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ನಡೆಯಬೇಕು" ಎಂದು ನ್ಯಾಯಪೀಠವು ಪುನರುಚ್ಚರಿಸಿದೆ.


    ಇದನ್ನೂ ಓದಿ: ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ; ಇನ್ಮುಂದೆ ಟಿಕೆಟ್​ ಜೊತೆ ಐಷಾರಾಮಿ ಹೋಟೆಲ್​​ ಕೂಡ ಬುಕ್ ಮಾಡಬಹುದು...!


    "ಭಿನ್ನಾಭಿಪ್ರಾಯ ಮತ್ತು ಪ್ರಜಾಪ್ರಭುತ್ವವು ಯಾವಾಗಲೂ ಒಟ್ಟಿಗೆ ಇರುತ್ತದೆ" ಎಂದು ಸುಪ್ರೀಂ ಕೋರ್ಟ್ ಅಕ್ಟೋಬರ್ 2020 ರಲ್ಲಿ ಹೇಳಿತ್ತು. ಇದನ್ನು ಉಲ್ಲೇಖಿಸಿದ ನ್ಯಾಯಪೀಠವು, “ಈ ರೀತಿಯ ಪ್ರತಿಭಟನೆಗಳು ಸ್ವೀಕಾರಾರ್ಹವಲ್ಲ" ಎಂದು ಒತ್ತಿ ಹೇಳಿದೆ.


    ದೆಹಲಿಯ ಶಾಹೀನ್‌ಬಾಗ್‌ 2019 ರಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು. ಸುಮಾರು 3 ತಿಂಗಳ ಕಾಲ ಮಹಿಳೆಯರು-ಮಕ್ಕಳು ಸೇರಿದಂತೆ ಸಾವಿರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಈ ಪ್ರತಿಭಟನೆಯ ಮೂಲಕ ಈಶಾನ್ಯ ದೆಹಲಿಯಲ್ಲಿ ದೊಡ್ಡ ಮಟ್ಟದ ಕೋಮು ಗಲಭೆಯೇ ಉಂಟಾಗಿತ್ತು. ನಂತರ ಕೊರೋನಾ ಅಟ್ಟಹಾಸದಿಂದಾಗಿ ಈ ಹೋರಾಟ ಕೊನೆಕೊಂಡಿತ್ತು. ಆದರೂ, ತೆರೆ ಮರೆಯಲ್ಲಿ ಸಿಎಎ ವಿರೋಧಿ ಹೋರಾಟ ನಡೆಯುತ್ತಲೇ ಇದೆ

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು