ರಾಂಚಿ (ಜ. 23): ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಹದಗೆಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ವಾಸಕೋಶದ ಸೋಂಕಿಗೆ ತುತ್ತಾಗಿರುವ ಅವರು ಪ್ರಸ್ತುತ ರಾಂಚಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಹಾರದ ಮೇವು ಹಗರಣ ಸಂಬಂಧ ಶಿಕ್ಷೆಗೆ ಗುರಿಯಾಗಿದ್ದಾರೆ. ಆರ್ಜೆಡಿ ನಾಯಕನ ಆರೋಗ್ಯ ಹದಗೆಡುತ್ತಿರುವ ಬಗ್ಗೆ ಅವರು ಚಿಕಿತ್ಸೆ ಪಡೆಯುತ್ತಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರ ಮಂಡಳಿ ಅವರನ್ನು ದೆಹಲಿ ಆಸ್ಪತ್ರೆಗೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಿದೆ. ಈ ಹಿನ್ನಲೆ ಜೈಲಾಧಿಕಾರಿಗಳಿಗೆ ಅವರು ಮಾಹಿತಿ ನೀಡಿದರು. ಈ ಹಿನ್ನಲೆ ಜೈಲಾಧಿಕಾರಿಗಳು ಅವರನ್ನು ದೆಹಲಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಿದ್ದಾರೆ.
ಗುರುವಾರ ಸಂಜೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ಶುಕ್ರವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆ ಅವರ ಮಗ ತೇಜಸ್ವಿ ಯಾದವ್ ಈ ಕುರಿತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಬಳಿಕ ಮಾತನಾಡಿದ ತೇಜಸ್ವಿ ಯಾದವ್, ಅವರಿಗೆ ನಾವು ಉತ್ತಮ ಚಿಕಿತ್ಸೆ ನೀಡಲು ಬಯಸುತ್ತಿದ್ದೇವೆ, ಆದರೆ, ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದನ್ನು ವೈದ್ಯರು ತಿಳಿಸಿಬೇಕಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳನ್ನು ಭೇಟಿ ಉಆಗಿ ಚರ್ಚೆ ನಡೆಸುತ್ತೇನೆ ಎಂದಿದ್ದರು.
ಲಾಲೂ ಆರೋಗ್ಯ ಬಿಗಾಡಾಯಿಸಿದ ಹಿನ್ನಲೆ ರಾಬ್ರಿ ದೇವಿ, ಮಗ ತೇಜ್ ಪ್ರತಾಪ್ ಶುಕ್ರವಾರ ರಾಂಚಿ ತಲುಪಿದ್ದಾರೆ. 70 ವರ್ಷ ಪೂರೈಸಿರುವ ಲಾಲೂ ಮಧುಮೇಹ, ಹೃದಯ ಕಾಯಿಲೆ, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದಾರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ