Encounter: ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರ ಎನ್​ಕೌಂಟರ್​ಗೆ ಬಲಿ

ಉಗ್ರ

ಉಗ್ರ

2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ನಡೆದ ದಾಳಿಯ ಪ್ರಮುಖ ರೂವಾರಿ ಕೂಡ ಆಗಿದ್ದ

  • Share this:

2019ರಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಅಬು ಸೈಫುಲ್ಲಾ ಆಲಿಯಾಸ್ ಲಂಬೂ ಎನ್​ಕೌಂಟರ್​ಗೆ ಬಲಿಯಾಗಿದ್ದಾನೆ​. ಜೈಶ್​ ಎ ಮೊಹಮ್ಮದ್​ ಸಂಘಟನೆಯ ಭಯೋತ್ಪಾದಕನಾದ ಈತ ಪಂಜಾಬ್ ಪ್ರಾಂತ್ಯದಲ್ಲಿ ನೆಲಸಿದ್ದ ಎಂದು ಕೂಡ ತಿಳಿದು ಬಂದಿದೆ, ಅದ್ನಾನ್ ಎಂದು ಕೂಡ ಗುರುತಿಸಿಕೊಂಡಿದ್ದ ಈತ ಜೈಶ್​ ಎ ಮೊಹಮ್ಮದ್​​ ಸಂಘಟನೆಯ ಸಂಸ್ಥಾಪಕ ಮೌಲಾನಾ ಮಸೂದ್​ ಅಜಾರ್​ ಸಂಬಂಧಿ ಕೂಡ. 2017ರಲ್ಲಿ ಭಾರತಕ್ಕೆ ನುಸಳಿದ್ದ ಈತ ಅಂದಿನಿಂದ ತನ್ನ ಕಾರ್ಯಾಚರಣೆ ನಡೆಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.


ಈತ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ. 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ನಡೆದ ದಾಳಿಯ ಪ್ರಮುಖ ರೂವಾರಿ ಕೂಡ ಆಗಿದ್ದ. ಈತ ಪಾಕಿಸ್ತಾನದ ಜೆಇಎಂನ ಮೌಲಾನ ಮಸೂದ್​ ಅಜಾರ್​ ಮತ್ತು ರಫ್​​ ಆಜಾರ್​ ನಿಕಟವರ್ತಿಯಾಗಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.


ಈತ ದಕ್ಷಿಣ ಕಾಶ್ಮೀರದಲ್ಲಿ ಜೈಶ್ ಕಾರ್ಯಾಚರಣೆಯ ಕಮಾಂಡರ್ ಆಗಿದ್ದ. ಎನ್‌ಕ್ರಿಪ್ಟ್ ಮೆಸೇಜಿಂಗ್ ಅಪ್ಲಿಕೇಶನ್‌ಗಳಲ್ಲಿ ಈತ ನಿಪುಣನಾಗಿದ್ದ. ಐಇಡಿಯಲ್ಲಿ ಇಂತಹ ಸಂದೇಶ ರವಾನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ. ಈತ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಿಂದ ಕಾರ್ಯನಿರ್ವಹಿಸುತ್ತಿದ್ದ.

top videos


    ಇಂದು ಸೇನೆ ನಡೆಸಿದ ದಾಳಿಯಲ್ಲಿ ಲಂಬೂ ಜೊತೆ ಮತ್ತಿಬ್ಬರು ಉಗ್ರರನ್ನು ಕೂಡ ಹತ್ಯೆ ಮಾಡಲಾಗಿದೆ. ದಾಚಿಗಮ್​ ಅರಣ್ಯ ಪ್ರದೇಶದ ನಮಿಬಿಯನ್​ ಮತ್ತು ಮಾರ್ಸಾರ್​ ಪ್ರದೇಶದಲ್ಲಿ ಈ ದಾಳಿ ನಡೆಸಲಾಗಿದೆ


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು

    First published: