ಕೊರೋನಾ ಕಾರಣದಿಂದ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಅವಕಾಶ ನಿರಾಕರಿಸಿದ ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್​.

ಸುಪ್ರೀಂಕೋರ್ಟ್​.

“ಒಂದು ವೇಳೆ ನಾವು  ಮೆರವಣಿಗೆಗೆ ಅನುಮತಿ ನೀಡಿದರೆ, ಅವ್ಯವಸ್ಥೆ ಉಂಟಾಗುತ್ತದೆ ಮತ್ತು ಕೋವಿಡ್ ಹರಡಲು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಪಡಿಸಲಾಗುತ್ತದೆ. ನಮಗೆ ಅದು ಬೇಡ,” ಎಂದು ಸಿಜೆಐ ಎಸ್​.ಎ. ಬೊಬ್ಡೆ ಹೇಳಿದರು.

  • Share this:

    ನವದೆಹಲಿ; ದೇಶಾದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನ್ಕೆಕ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೂ ಈವರೆಗೂ ಅವಕಾಶ ನೀಡಲಾಗಿಲ್ಲ. ಅದರಂತೆ ಮುಸ್ಲಿಂ ಸಮುದಾಯದ ಮೊಹರಂ ಹಬ್ಬದ ದಿನದಂದು ಮೆರವಣಿಗೆಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್​ನಲ್ಲಿ ಮನವಿ ಮಾಡಲಾಗಿತ್ತು. ಆದರೆ, ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.


    ಮುಖ್ಯ ನ್ಯಾಯಮೂರ್ತಿ ಎಸ್.‌ಎ. ಬೊಬ್ಡೆ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ದೇಶಾದ್ಯಂತ ಮೊಹರಂ ಮೆರವಣಿಗೆ ನಡೆಸಲು ಅನುಮತಿ ನೀಡಲು ನಿರಾಕರಿಸಿದೆ. “ಒಂದು ವೇಳೆ ನಾವು  ಮೆರವಣಿಗೆಗೆ ಅನುಮತಿ ನೀಡಿದರೆ, ಅವ್ಯವಸ್ಥೆ ಉಂಟಾಗುತ್ತದೆ ಮತ್ತು ಕೋವಿಡ್ ಅನ್ನು ಹರಡಲು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಪಡಿಸಲಾಗುತ್ತದೆ. ನಮಗೆ ಅದು ಬೇಡ,” ಎಂದು ಸಿಜೆಐ ಎಸ್​.ಎ. ಬೊಬ್ಡೆ ಹೇಳಿದರು.


    ಇದನ್ನು ಓದಿ: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ತನ್ನ ತೀರ್ಪು ಮರುಪರಿಶೀಲನೆಗೆ ಸುಪ್ರೀಂ ನಿರ್ಧಾರ

    Published by:HR Ramesh
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು