• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಸ್ವಾಭಿಮಾನಿಯಾದವರು ಈ ಹುದ್ದೆಯಲ್ಲಿ ಮುಂದುವರೆಯಲಾರರು; ಮಹಾರಾಷ್ಟ್ರ ರಾಜ್ಯಪಾಲರ ವಿರುದ್ಧ ಶರದ್ ಪವಾರ್ ಆಕ್ರೋಶ

ಸ್ವಾಭಿಮಾನಿಯಾದವರು ಈ ಹುದ್ದೆಯಲ್ಲಿ ಮುಂದುವರೆಯಲಾರರು; ಮಹಾರಾಷ್ಟ್ರ ರಾಜ್ಯಪಾಲರ ವಿರುದ್ಧ ಶರದ್ ಪವಾರ್ ಆಕ್ರೋಶ

ಶರದ್ ಪವಾರ್.

ಶರದ್ ಪವಾರ್.

ಸ್ವಾಭಿಮಾನ ಇರುವ ಯಾವುದೇ ವ್ಯಕ್ತಿ ರಾಜ್ಯಪಾಲ ಹುದ್ದೆಯಲ್ಲಿ ಮುಂದುವರೆಯಾರರು. ಭಗತ್ ಸಿಂಗ್ ಕೋಶ್ಯರಿ ಈಗಲೂ ಈ ಹುದ್ದೆಯಲ್ಲಿ ಮುಂದುವರೆಯಬೇಕೆ? ಎಂದು ಶರದ್ ಪವಾರ್ ಕಿಡಿಕಾರಿದ್ದಾರೆ.

  • Share this:

    ಮುಂಬೈ (ಅಕ್ಟೋಬರ್​ 20); ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವೆ ಒಂದು ಪತ್ರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮೇಲೆ ಇಂದು ನೇರ ವಾಗ್ದಾಳಿ ನಡೆಸಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್, “ಸ್ವಾಭಿಮಾನ ಹೊಂದಿರುವ ಯಾರಾದರೂ ಈ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ. ಅವರನ್ನು ರಾಜ್ಯಪಾಲ ಹುದ್ದೆಯಿಂದ ತೆಗೆದುಹಾಕುವಂತೆ ನಾವು ಬೇಡಿಕೆ ಇಡುವುದಿಲ್ಲ. ಆದರೆ, ಅವರೇ ತಮ್ಮ ಹುದ್ದೆಯನ್ನು ತ್ಯಜಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ಕೊರೋನಾ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಎಲ್ಲಾ ಪೂಜಾ ಸ್ಥಳ ದೇವಾಲಯಗಳನ್ನೂ ಮುಚ್ಚಲಾಗಿತ್ತು. ಆದರೆ, ಇತ್ತೀಚೆಗೆ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಬರೆದಿದ್ದ ಪತ್ರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸ್ವತಃ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಅಮಿತ್ ಶಾ ಸಹ ಈ ಪತ್ರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದರು.


    “ಈ ಪತ್ರದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಕೆಲವು ಪದಗಳ ಬಳಕೆಯನ್ನು ನಿಯಂತ್ರಿಸಬೇಕಿತ್ತು” ಎಂದು ಅಮಿತ್ ಶಾ ಆಕ್ರೋಶ ಹೊರಹಾಕಿದ್ದರು. ತದನಂತರ ಈ ವಿವಾದ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ, ಬಿಜೆಪಿ ಸಹ ಇಕ್ಕಟ್ಟಿನ ಪರಿಸ್ಥಿತಿಗೆ ಒಳಗಾಗಿತ್ತು.


    ಆದರೆ, ಅಮಿತ್ ಶಾ ಅವರ ಹೇಳಿಕೆ ಬೆನ್ನಿಗೆ ಈ ಕುರಿತು ಖಾರವಾಗಿ ಪ್ರತಿಕ್ರಿಯೆ ನೀಡಿರುವ ಶರದ್ ಪವಾರ್, “ಸ್ವಾಭಿಮಾನ ಇರುವ ಯಾವುದೇ ವ್ಯಕ್ತಿ ರಾಜ್ಯಪಾಲ ಹುದ್ದೆಯಲ್ಲಿ ಮುಂದುವರೆಯಾರರು. ಭಗತ್ ಸಿಂಗ್ ಕೋಶ್ಯರಿ ಈಗಲೂ ಈ ಹುದ್ದೆಯಲ್ಲಿ ಮುಂದುವರೆಯಬೇಕೆ?” ಎಂದು ಕಿಡಿಕಾರಿದ್ದಾರೆ. ಇದಲ್ಲದೆ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸಹ ಪತ್ರ ಬರೆಯುವ ಮೂಲಕ ರಾಜ್ಯ ಪಾಲರ ನಡೆಯನ್ನು ಶರದ್ ಪವಾರ್ ಖಂಡಿಸಿದ್ದರು.


    ಶಿವಸೇನೆ ಮುಖ್ಯ ವಕ್ತಾರ ಮತ್ತು ಸಂಸದ ಸಂಜಯ್ ರಾವತ್, ಅಮಿತ್ ಶಾ ಅವರ ಹೇಳಿಕೆಗಳನ್ನು ಶ್ಲಾಘಿಸಿದ್ದಾರೆ.


    ಇದನ್ನೂ ಓದಿ : ಹೆಲ್ಮೆಟ್ ಧರಿಸದೆ ವಾಹನ ಚಾಲನೆ; ಚಾಲಕನ ಡಿಎಲ್ ಮೂರು ತಿಂಗಳು ಅಮಾನತು!


    ರಾಜ್ಯದ ಪೂಜಾ ಸ್ಥಳಗಳನ್ನು ಪುನಃ ತೆರೆಯುವ ವಿಷಯದ ಬಗ್ಗೆ ಕೊಶಾರಿ ಅಕ್ಟೋಬರ್ 12 ರಂದು ಠಾಕ್ರೆ ಅವರಿಗೆ ಪತ್ರ ಬರೆದಿದ್ದು, ಠಾಕ್ರೆಯ ಹಿಂದುತ್ವ ರುಜುವಾತುಗಳನ್ನು ಪ್ರಶ್ನಿಸಿದ್ದರು. ಅಲ್ಲದೆ, “ಸಿಎಂ ಇದ್ದಕ್ಕಿದ್ದಂತೆ ಜಾತ್ಯತೀತವಾಗಿದ್ದಾರೆಯೇ” ಎಂದು ಪ್ರಶ್ನಿಸಿದ್ದರು.


    ಇದಕ್ಕೆ ಕಟುವಾಗಿ ಉತ್ತರಿಸಿದ್ದ ಸಿಎಂ ಉದ್ಧವ್ ಠಾಕ್ರೆ, “ತನಗೆ ಯಾರಿಂದಲೂ ‘ಹಿಂದುತ್ವದ’ ಪ್ರಮಾಣಪತ್ರದ ಅಗತ್ಯವಿಲ್ಲ” ಎಂದು ತಿರುಗೇಟು ನೀಡಿದ್ದರು. ಇದೇ ವೇಳೆ ಕೊರೋನಾ ಸಾಂಕ್ರಾಮಿಕದ ಸಮಸ್ಯೆಯನ್ನು ಗಣನೆಗೆ ತೆಗೆದುಕೊಂಡು ಪೂಜಾ ಸ್ಥಳಗಳನ್ನು ಪುನಃ ತೆರೆಯುವ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದರು. ಕೊರೋನಾ ಸೋಂಕಿತರ ಪ್ರಮಾಣದಲ್ಲಿ ದೇಶದಲ್ಲಿಯೇ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದೆ.

    Published by:MAshok Kumar
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು