ಶ್ರೀನಗರ (ಏ. 9): ಜಮ್ಮು ಕಾಶ್ಮೀರದ ಆವಂತಿಪುರದ ನೌಭಾಗ್ ತ್ರಾಲ್ ಪ್ರದೇಶದಲ್ಲಿ ಉಗ್ರರು ಮತ್ತು ಗಡಿ ಭದ್ರತಾ ಪಡೆಯ ಸಿಬ್ಬಂದಿ ನಡುವೆ ನಿನ್ನೆಯಿಂದ ಗುಂಡಿನ ಚಕಮಕಿ ನಡೆಯುತ್ತಿದೆ. 2ನೇ ದಿನವಾದ ಇಂದು ಕೂಡ ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ನಿನ್ನೆ ರಾತ್ರಿಯಿಡೀ ಭಾರತೀಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ನಿನ್ನೆ ರಾತ್ರಿ ಬಿಎಸ್ಎಫ್ ಯೋಧರು ಮೂವರು ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿ ಶೋಪಿಯಾನ್ನಲ್ಲಿ ಎನ್ಕೌಂಟರ್ ನಡೆದಿದ್ದು, ಮೂವರು ಉಗ್ರರು ಹತರಾಗಿದ್ದಾರೆ. ಇಬ್ಬರು ಬಿಎಸ್ಎಫ್ ಯೋಧರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Three unidentified terrorists killed in an ongoing operation at Shopian: Kashmir Zone Police
— ANI (@ANI) April 8, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ