ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು 2022 ವಿಧಾನಸಭಾ ಚುನಾವಣೆಯಲ್ಲಿ ಎಸ್ಪಿ 400 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ನಿರ್ಮಿಸಲಿದೆ. ಉತ್ತರ ಪ್ರದೇಶದ ಜನರು ಬಿಜೆಪಿ ಸರ್ಕಾರದ ಆಡಳಿತ ವೈಖರಿ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಅಲ್ಲದೇ, ಆಡಳಿತ ಪಕ್ಷವು ಎಲ್ಲಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಸುಲಭವಾಗಿ ಹುಡುಕಲು ಆಗುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇಲ್ಲಿಯವರೆಗೆ ನಾವು ರಾಜ್ಯದಲ್ಲಿ 2022 ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 350 ಪ್ಲಸ್ ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದೆವು ಆದರೆ ಈಗ ಜನರು ಬಿಜೆಪಿ ಬಗ್ಗೆ ತುಂಬಾ ಅಸಮಾಧಾನಗೊಂಡಿದ್ದು ಸಮಾಜವಾದಿ ಪಕ್ಷ 400 ಸ್ಥಾನಗಳನ್ನು ಪಡೆಯತ್ತದೆ ಎಂದು ಹೇಳುತ್ತೇನೆ. ಜನರು ಬಿಜೆಪಿ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು ಅವರು ಎಲ್ಲಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಬ್ರಾಹ್ಮಣರು, ದಲಿತರು ಮತ್ತು ಮುಸ್ಲಿಂ ಸಮುದಾಯ ಬಿಜೆಪಿ ತುಳಿತಕ್ಕೊಳಗಾಗಿದೆ ಮತ್ತು ಕಿರುಕುಳ ಅನುಭವಿಸಿದೆ ಎಂದು ಲಕ್ನೋದ ಎಸ್ಪಿ ಪ್ರಧಾನ ಕಚೇರಿಯಿಂದ ಸೈಕಲ್ ಯಾತ್ರೆಯನ್ನು ಆರಂಭಿಸುವ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಯಾದವ್ ಹೇಳಿದರು.
ಎಸ್ಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸವನ್ನು ಇಂದಿಗೂ ಬಿಜೆಪಿ ಜನರು ಉದ್ಘಾಟಿಸುತ್ತಿದ್ದಾರೆ, ಅವರು ಕೆಲಸ ಮಾಡಲಿಲ್ಲ ಮತ್ತು ಈಗ ಜನರನ್ನು ಗೊಂದಲಕ್ಕೀಡುಮಾಡಲು ಹೋಗಿ ತಾವೇ ಗೊಂದಲಕ್ಕೊಳಗಾಗಿದ್ದಾರೆ ಎಂದು ಅಖಿಲೇಶ್ ಚಾಟಿ ಬೀಸಿದರು.
ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ, ಕರಾಳ ಕೃಷಿ ಕಾನೂನುಗಳು ಮತ್ತು ಕಳಪೆ ಕಾನೂನು ಮತ್ತು ಸುವ್ಯವಸ್ಥೆಯಂತಹ ಸಮಸ್ಯೆಗಳನ್ನು ಎತ್ತಿ ಹಿಡಿಯಲು ಸಮಾಜವಾದಿ ಪಕ್ಷವು ಗುರುವಾರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ‘ಸೈಕಲ್ ಯಾತ್ರೆ’ ಆರಂಭಿಸಲಿದೆ.
ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರು ಕಿಲೋಮೀಟರ್ಗಳವರೆಗೆ ಸೈಕಲ್ ತುಳಿಯಲಿದ್ದಾರೆ. - ಲಕ್ನೋದ 19 ವಿಕ್ರಮಾದಿತ್ಯ ಮಾರ್ಗ್ನಲ್ಲಿರುವ ಸಮಾಜವಾದಿ ಪಕ್ಷದ ಪ್ರಧಾನ ಕಚೇರಿಯಿಂದ ಜನೇಶ್ ಮಿಶ್ರಾ ಪಾರ್ಕ್ ವರೆಗೆ ಗುರುವಾರ ಬೆಳಿಗ್ಗೆ 10 ಗಂಟೆಗೆ ಬೆಲೆ ಏರಿಕೆ, ನಿರುದ್ಯೋಗ, ಕೃಷಿ ಕಾನೂನುಗಳು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿರೋಧಿಸಿ. ಅವರ ಪತ್ನಿ ಹಾಗೂ ಮಾಜಿ ಸಂಸದೆ ಡಿಂಪಲ್ ಯಾದವ್ ಅವರು ಕನೌಜ್ನಲ್ಲಿ ಸೈಕಲ್ ಯಾತ್ರೆಯಲ್ಲಿ ಭಾಗವಹಿಸಿದರು.
ಇದನ್ನೂ ಓದಿ: Tokyo Olympics- ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ; ಕುಸ್ತಿಪಟು ವಿನೇಶ್ ಫೋಗಾಟ್, ಅಂಶುಗೆ ನಿರಾಸೆ
ಪಕ್ಷದ ಕಚೇರಿಯಿಂದ ಆರಂಭಗೊಂಡ ಸೈಕಲ್ ಯಾತ್ರೆ ಲೊರೆಟೊ ಚೌರಾಹಾ, ಕಾಳಿದಾಸ್ ಚೌರಾಹಾ, ಜಿಯಾಮೌ, 1090 ಚೌರಾಹಾ, ಜೈಪ್ರಕಾಶ್ ನಾರಾಯಣ್ ಇಂಟರ್ನ್ಯಾಷನಲ್ ಸೆಂಟರ್, ಶೆರೋಸ್ ಕೆಫೆ, ಸಿಎಂಎಸ್ ಸ್ಕೂಲ್ ಚೌರಾಹಾ ಮತ್ತು ದಯಾಳ್ ಚೌರಾಹಾ ಮೂಲಕ ಜನೇಶ್ವರ್ ಮಿಶ್ರಾ ಪಾರ್ಕ್ಗೆ ತಲುಪುತ್ತದೆ. ಸೈಕಲ್ ಯಾತ್ರೆಯಲ್ಲಿ ಭಾಗವಹಿಸಲು ಲಕ್ನೋ ಮತ್ತು ಇತರ ಜಿಲ್ಲೆಗಳ ಎಸ್ಪಿ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ಎಸ್ಪಿ ಪ್ರಧಾನ ಕಚೇರಿಯ ಹೊರಗೆ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ