ನವ ದೆಹಲಿ (ಜೂನ್ 15); ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ಕೆಲವು ರಾಮ ಭಕ್ತರು ಪ್ರಾರ್ಥನೆ ಮುಗಿಸಿ ಬರುತ್ತಿದ್ದ ಮುಸ್ಲೀಂ ವ್ಯಕ್ತಿಯನ್ನು ಜೈ ಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಥಳಿಸಿದ್ದರು. ಅಲ್ಲದೆ, ಆತನ ಆತನ ಗಡ್ಡವನ್ನು ಬೋಳಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಜೂನ್ 5ರಂದು ಅಬ್ದುಲ್ ಸಮದ್ ಎಂಬ ಹಿರಿಯ ವ್ಯಕ್ತಿ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಮರಳುತ್ತಿದ್ದರು. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಅವರ ಮೇಲೆ ಕೆಲ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಅವನ್ನು ಎಳೆದುಕೊಂಡ ಹತ್ತಿರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಕಿಡಿಗೇಡಿಗಳು ಅವರಿಗೆ ಜೈ ಶ್ರೀರಾಮ್ , ವಂದೇ ಮಾತರಂ ಎಂದು ಘೋಷಣೆ ಕೂಗುತ್ತಾ ಹೊಡೆದಿದ್ದಾರೆ. ಅಲ್ಲದೇ ಮರದ ಕಟ್ಟಿಗೆಯಿಂದ ಮನಬಂದಂತೆ ಥಳಿಸಿದ್ದರು.
ಅಷ್ಟೇ ಅಲ್ಲದೇ, ಆ ವ್ಯಕ್ತಿಯನ್ನು ಪಾಕಿಸ್ತಾನಿ ಗೂಢಚಾರಿ ಎಂದು ಆರೋಪಿಸಿದ್ದಾರೆ. ದಾಳಿಕೋರರ ಗುಂಪಿನಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ಸಮದ್ ಅವರ ಗಡ್ಡ ಕತ್ತರಿಸುವ ಪ್ರಯತ್ನ ನಡೆಸಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಮದ್, ತಮ್ಮನ್ನು ಬಿಟ್ಟು ಬಿಡುವಂತೆ ಯುವಕರಲ್ಲಿ ಪರಿಪರಿಯಾಗಿ ಬೇಡಿಕೊಂಡರೂ ಸಹ ಅವರನ್ನು ಹಿಂಸಿಸಲಾಗಿದೆ.
प्रभु श्री राम की पहली सीख है-"सत्य बोलना" जो आपने कभी जीवन में किया नहीं।
शर्म आनी चाहिए कि पुलिस द्वारा सच्चाई बताने के बाद भी आप समाज में जहर फैलाने में लगे हैं।
सत्ता के लालच में मानवता को शर्मसार कर रहे हैं। उत्तर प्रदेश की जनता को अपमानित करना, उन्हें बदनाम करना छोड़ दें। pic.twitter.com/FOn0SJLVqP
— Yogi Adityanath (@myogiadityanath) June 15, 2021
ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಒಬ್ಬ ವಯಸ್ಸಾದ ವ್ಯಕ್ತಿಯನ್ನು ವಿನಾ ಕಾರಣ ಥಳಿಸುವುದು ಅತ್ಯಂತ ಅಮಾನವೀಯ. ಮುಸ್ಲೀಂ ವೃದ್ಧರನ್ನು ರಾಮನಾಮ ಜಪಿಸುವಂತೆ ಒತ್ತಾಯಿಸುತ್ತಿರುವ ವ್ಯಕ್ತಿ ನಿಜವಾದ ರಾಮ ಭಕ್ತನಾಗಿರಲು ಸಾಧ್ಯವಿಲ್ಲ. ಇಂತಹ ಕ್ರೌರ್ಯಗಳು ಮಾನವೀಯತೆಯನ್ನು ಇಲ್ಲದಂತೆ ಮಾಡುತ್ತವೆ. ಧರ್ಮದ ಕಾರಣಕ್ಕೆ ನಡೆದ ಈ ದೌರ್ಜನ್ಯ ಸಮಾಜ ಮತ್ತು ಧರ್ಮ ಎರಡಕ್ಕೂ ದೊಡ್ಡ ಕಳಂಕ" ಎಂದು ಕಿಡಿಕಾರಿದ್ದಾರೆ.
ಆದರೆ, ಇದಕ್ಕೆ ಟ್ವೀಟ್ ಮೂಲಕವೇ ರಾಹುಲ್ ಗಾಂಧಿಗೆ ತಿರುಗೇಟು ನೀಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ಶ್ರೀ ರಾಮ ಸತ್ಯವನ್ನು ಹೇಳುವಂತೆ ಭೋದಿಸುತ್ತಾನೆ. ಆದರೆ, ನೀವು ಜೀವನದಲ್ಲಿ ಎಂದಿಗೂ ಸತ್ಯ ಮಾತನಾಡಿದವರಲ್ಲ. ಬದಲಾಗಿ ಸಮಾಜದಲ್ಲಿ ಸುಳ್ಳನ್ನು ಹರಡುತ್ತಾ, ದ್ವೇಷವನ್ನು ಭಿತ್ತುವುದೇ ನಿಮ್ಮ ಕೆಲಸವಾಗಿದೆ" ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ