2002ರಲ್ಲಿ ಗುಜರಾತ್ನಲ್ಲಿ ನಡೆದ ಬಾಬ್ರಿ ಮಸೀದಿಗೆ (Babri Masjid) ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ರದ್ದುಗೊಳಿಸಿದೆ. ಈ ಪ್ರಕರಣಗಳು ಈಗ "ಸಮಯದ ಜೊತೆಗೂಡಲು ಅಸಮರ್ಥವಾಗಿವೆ" ಎಂದು ದೇಶದ ಸರ್ವೋಚ್ಛ ನ್ಯಾಯಾಲಯವು ಈ ಆದೇಶದ ವೇಳೆ ಹೇಳಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಒಂಬತ್ತು ಪ್ರಕರಣಗಳ ಪೈಕಿ ಎಂಟು ಪ್ರಕರಣಗಳ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಪ್ರಸ್ತುತ ಗುಜರಾತ್ನ (Gujarat) ನರೋಡಾ ಗಾಂವ್ನಲ್ಲಿರುವ ವಿಚಾರಣಾ ನ್ಯಾಯಾಲಯದಲ್ಲಿ ಅಂತಿಮ ವಾದದಲ್ಲಿ ಅಂತಿಮ ವಾದಗಳು ನಡೆಯುತ್ತಿವೆ ಎಂದು ನ್ಯಾಯಾಲಯ ಸೂಚಿಸಿದೆ.
SC closes all proceedings arising out of 2002 riots in Gujarat. A batch of pleas was pending before SC. SC says cases have now become infructuous with passage of time, trials in 8 out of 9 cases are over&final arguments are going on in one case in trial court, Naroda Gaon,Gujarat pic.twitter.com/1db5ANs1AQ
— ANI (@ANI) August 30, 2022
ಕಾಲಾಂತರದಲ್ಲಿ ಈ ಪ್ರಕರಣಗಳು ನಿರುಪಯುಕ್ತ ಎಂದ ಸುಪ್ರೀಂ
ಕಾಲಾನಂತರದಲ್ಲಿ ಈ ಪ್ರಕರಣಗಳು ಈಗ ನಿರುಪಯುಕ್ತವಾಗಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂಬತ್ತು ಪ್ರಕರಣಗಳಲ್ಲಿ ಎಂಟು ಪ್ರಕರಣಗಳ ವಿಚಾರಣೆ ಮುಗಿದಿದ್ದು, ವಿಚಾರಣಾ ನ್ಯಾಯಾಲಯದಲ್ಲಿ ಒಂದು ಪ್ರಕರಣದಲ್ಲಿ ಅಂತಿಮ ವಾದಗಳು ನಡೆಯುತ್ತಿವೆ.
ಇದನ್ನೂ ಓದಿ: Pranitha Subhash: ಕರಸೇವಕರ ಮೇಲೆ ಗುಂಡು ಹಾರಿಸಿದಾಗ ನ್ಯಾಯ ಎಲ್ಲಿತ್ತು ಎಂದ ನಟಿ ಪ್ರಣೀತಾ
ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು 2019 ರ ಸುಪ್ರೀಂ ಕೋರ್ಟ್ ಈ ಪ್ರಕರಣಗಳು ಕಾಲದಲ್ಲಿ ಅಥವಾ ಸಮಯದಲ್ಲಿ ಕಳೆದುಹೋಗಿದೆ ಎಂದು ಗಮನಿಸಿದ್ದಾಗಿ ತಿಳಿಸಿದೆ. ನವೆಂಬರ್ 9, 2019 ರಂದು, ಸುಪ್ರೀಂ ಕೋರ್ಟ್ ಅಯೋಧ್ಯೆಯ ಸಂಪೂರ್ಣ ವಿವಾದಿತ ಪ್ರದೇಶವನ್ನು ರಾಮ ಮಂದಿರವನ್ನು ನಿರ್ಮಿಸಲು ಆದೇಶ ನೀಡಿತ್ತು. ಅಯೋಧ್ಯೆಯಲ್ಲಿ 5 ಎಕರೆ ಪರ್ಯಾಯ ಭೂಮಿಯನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ನಿರ್ಮಾಣಕ್ಕಾಗಿ ನೀಡಿತ್ತು.
ಈ ಮುನ್ನವೇ 32 ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ
ಅಯೋಧ್ಯೆಯಲ್ಲಿದ್ದ ಬಾಬ್ರಿ ಮಸೀದಿ ಕಟ್ಟಡವನ್ನು 1992ರಲ್ಲಿ ಕರಸೇವಕರು ಕೆಡವಿಹಾಕಿದ ಘಟನೆ ಸಂಬಂಧ 2020ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ದೇಶವೇ ಕುತೂಹಲದಿಂದ ಕಾಯುತ್ತಿರುವ 28 ವರ್ಷಗಳ ಈ ಹಳೆಯ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿತ್ತು. ಬಾಬರಿ ಮಸೀದಿ ಧ್ವಂಸ ಮಾಡಿದ್ದು ಪೂರ್ವನಿಯೋಜಿತ ಎಂದು ಅನಿಸುವುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಲ್ಲಾ 32 ಆರೋಪಿಗಳನ್ನ ಖುಲಾಸೆಗೊಳಿಸಿತ್ತು.
ಇದನ್ನೂ ಓದಿ: ಬಾಬ್ರಿ ಮಸೀದಿ ಉಳಿಸಲು ಪ್ರಯತ್ನಿಸಿದ್ದ ಮಾಜಿ ಐಎಎಸ್ ಅಧಿಕಾರಿಗೆ ಕೋರ್ಟ್ ತೀರ್ಪಿನಿಂದ ಅಚ್ಚರಿ
2 ಸಾವಿರ ಪುಟಗಳ ತೀರ್ಪು ಪ್ರಕಟಿಸಿತ್ತು
ಲಕ್ನೋ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠ 2 ಸಾವಿರ ಪುಟಗಳ ತೀರ್ಪನ್ನು ಪ್ರಕಟಿಸಿದೆ. ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಸೇರಿದಂತೆ 32 ಮಂದಿ ಈಗ ಈ ಪ್ರಕರಣದಲ್ಲಿ ಆರೋಪಮುಕ್ತರಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ