• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯ ಹಿಂಸಾಚಾರದ ಬಗ್ಗೆ ಟ್ವೀಟ್, 6 ಪತ್ರಕರ್ತರು ಸೇರಿ ಶಶಿ ತರೂರ್ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ

ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯ ಹಿಂಸಾಚಾರದ ಬಗ್ಗೆ ಟ್ವೀಟ್, 6 ಪತ್ರಕರ್ತರು ಸೇರಿ ಶಶಿ ತರೂರ್ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ

ಶಶಿ ತರೂರ್​.

ಶಶಿ ತರೂರ್​.

ಇವರು ಮಾಡಿರುವ ಟ್ವೀಟ್ ವಿಚಾರವಾಗಿ ಐದು ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಜನರನ್ನು ತಪ್ಪು ದಾರಿಗೆ ಎಳೆಯುವಂತಹ ಪ್ರಚೋದನಾಕಾರಿ ಬರೆಹವನ್ನು ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಇವರು ವಿರುದ್ಧ ಅಪರಾಧ ಪಿತೂರಿ, ದೇಶದ್ರೋಹ ಹಾಗೂ ದ್ವೇಷ ಉತ್ತೇಜನ ಪ್ರಕರಣ ದಾಖಲಿಸಲಾಗಿದೆ.

  • Share this:

    ನವದೆಹಲಿ: ಗಣರಾಜ್ಯೋತ್ಸವದ ದಿನ ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ ವಿಚಾರವಾಗಿ ಆರು ಪತ್ರಕರ್ತರು ಸೇರಿ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಟ್ವೀಟ್ ಮಾಡಿದ್ದರು. ಈ ವಿಚಾರವಾಗಿ ಅವರ ಮೇಲೆ ದೂರು ದಾಖಲಾಗಿತ್ತು. ಇದೀಗ ಅವರ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ ಮತ್ತು ಈ ಕುರಿತು ಎಲ್ಲಾ ಅರ್ಜಿಗಳ ಬಗ್ಗೆ ನೋಟಿಸ್ ನೀಡಿದೆ.


    ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಅವರು, ಬಾರ್​ ಆ್ಯಂಡ್ ಬೆಂಚ್ ಹೇಳಿಕೆ ಉಲ್ಲೇಖಿಸಿ, ನಾವು ಎರಡು ವಾರಗಳ ನಂತರ ಈ ವಿಚಾರವಾಗಿ ವಿಚಾರಣೆ ನಡೆಸುತ್ತೇವೆ. ಏತನ್ಮಧ್ಯೆ ಬಂಧನಕ್ಕೆ ತಡೆ ನೀಡಲಾಗಿದೆ ಎಂದು ಹೇಳಿದರು.


    ಶಶಿ ತರೂರ್, ಪತ್ರಕರ್ತರಾದ ರಾಜ್​ದೀಪ್ ಸರ್ದೆಸಾಯಿ, ಜಾಫರ್ ಆಘಾ, ಮೃನಾಲ್ ಪಾಂಡೆ, ವಿನೋದ್ ಕೆ. ಜೋಸ್, ಪರೇಶ್ ನಾಥ್, ಮತ್ತು ಅನಂತ್ ನಾಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ಎಸ್​.ಎ.ಬೋಬ್ಡೆ, ನ್ಯಾ.ಎ.ಎಸ್. ಬೋಪಣ್ಣ ಹಾಗೂ ನ್ಯಾ.ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಟ್ವೀಟ್ ವಿಚಾರವಾಗಿ ತಮ್ಮ ವಿರುದ್ಧ ದಾಖಲಾಗಿರುವ ಎಫ್​​ಐಆರ್​ ರದ್ದುಗೊಳಿಸುವಂತೆ ಅರ್ಜಿದಾರರು ಮನವಿ ಮಾಡಿದ್ದರು.


    ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಪ್ರಕರಣವನ್ನು ಬುಧವಾರ ವಿಚಾರಣೆ ನಡೆಸಬೇಕೆಂದು ಕೇಳಿಕೊಂಡರು. ಆದರೆ ಇದನ್ನು ನ್ಯಾಯಾಲಯ ನಿರಾಕರಿಸಿತು. "ಈ ಟ್ವೀಟ್‌ಗಳು ಲಕ್ಷಾಂತರ ಅನುಯಾಯಿಗಳಲ್ಲಿ ಎಂತಹ ಭಯಾನಕ ಪರಿಣಾಮವನ್ನು ಬೀರುತ್ತವೆ ಎಂಬುದನ್ನು ನಾನು ನಿಮಗೆ ತೋರಿಸಬಲ್ಲೆ" ಎಂದು ಮೆಹ್ತಾ ಉಲ್ಲೇಖಿಸಿದ್ದರು.


    ಇದನ್ನು ಓದಿ: Deep Sidhu Arrest - ರೈತ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ಆರೋಪ; ನಟ ದೀಪ್ ಸಿಧು ಬಂಧನ


    ಜೋಸ್ ಪರ ಹಾಜರಾದ ವಕೀಲ ಮುಕುಲ್ ರೋಹಟಗಿ ಅವರು ನ್ಯಾಯಾಲಯಕ್ಕೆ, "ನಾನು ಕಾರವಾನ್ ಮ್ಯಾಗಜೀನ್‌ನ ಸಂಪಾದಕನ ಪರವಾಗಿ ವಾದಿಸುತ್ತಿದ್ದೇನೆ. ಇವರು ಮಾಡಿರುವ ಟ್ವೀಟ್​ನಿಂದ ಯಾವುದೇ ಧಾರ್ಮಿಕ ಭಾವನೆಗಳಿಗೆ ನೋವಾಗಿಲ್ಲ. ಜನವರಿ 26 ರಂದು ಯಾರೋ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿರುವ ವರದಿ ಮಾಡಲಾಗಿದೆ. ಮತ್ತು ಆ ಬಳಿಕ ನಾವು ಅದನ್ನು ಸರಿಪಡಿಸಿದ್ದೇವೆ." ಎಂದು ಹೇಳಿದರು.


    ಇವರು ಮಾಡಿರುವ ಟ್ವೀಟ್ ವಿಚಾರವಾಗಿ ಐದು ರಾಜ್ಯಗಳಲ್ಲಿ ಎಫ್​ಐಆರ್ ದಾಖಲಾಗಿದೆ. ಜನರನ್ನು ತಪ್ಪು ದಾರಿಗೆ ಎಳೆಯುವಂತಹ ಪ್ರಚೋದನಾಕಾರಿ ಬರೆಹವನ್ನು ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಇವರು ವಿರುದ್ಧ ಅಪರಾಧ ಪಿತೂರಿ, ದೇಶದ್ರೋಹ ಹಾಗೂ ದ್ವೇಷ ಉತ್ತೇಜನ ಪ್ರಕರಣ ದಾಖಲಿಸಲಾಗಿದೆ.

    Published by:HR Ramesh
    First published: