• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Swami Vivekananda Death Anniversary: ಇಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿ; ದೇಶದೆಲ್ಲೆಡೆ ವೀರ ಸನ್ಯಾಸಿಗೆ ಗೌರವ ಸಮರ್ಪಣೆ

Swami Vivekananda Death Anniversary: ಇಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿ; ದೇಶದೆಲ್ಲೆಡೆ ವೀರ ಸನ್ಯಾಸಿಗೆ ಗೌರವ ಸಮರ್ಪಣೆ

ಸ್ವಾಮಿ ವಿವೇಕಾನಂದ

ಸ್ವಾಮಿ ವಿವೇಕಾನಂದ

ಇಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಹಿನ್ನೆಲೆ, ದೇಶಾದ್ಯಂತ ಸಾರ್ವಜನಿಕರು ಹಾಗೂ ರಾಜಕೀಯ ನಾಯಕರು ಗೌರವ ಸಲ್ಲಿಸಿದ್ದಾರೆ.

  • Share this:

    ಇಂದು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯತಿಥಿ. ಪ್ರತೀ ವರ್ಷ ಜುಲೈ 4ನ್ನು ಸ್ವಾಮಿ ವಿವೇಕಾನಂದರ ಪುಣ್ಯತಿಥಿಯನ್ನು ಆಚರಿಸಲಾಗುತ್ತದೆ. ಭಾರತೀಯ ಚಿಂತನೆ ಮತ್ತು ತತ್ವಾದರ್ಶಗಳ ಬೆಳಕನ್ನು ಜಾಗತಿಕವಾಗಿ ಬೆಳಗಿದ ಅವರ ಸಮಾಜಮುಖಿ ಸಂದೇಶಗಳು ನಿರಂತರ ಸ್ಫೂರ್ತಿಯ ಚಿಲುಮೆಗಳಾಗಿವೆ. ಯೋಗ ಮತ್ತು ವೇದಾಂತದ ತತ್ವಚಿಂತನೆಗಳನ್ನು ಪಶ್ಚಿಮಕ್ಕೆ ಪರಿಚಿಯಿಸುವಲ್ಲಿ ಸ್ವಾಮಿ ವಿವೇಕಾನಂದರು ಪ್ರಮುಖ ಪಾತ್ರ ವಹಿಸಿದ್ದಾರೆ. 1893ರಲ್ಲಿ ಚಿಕಾಗೋದ ವರ್ಲ್ಡ್​ ಪಾರ್ಲಿಮೆಂಟ್​ ಆಫ್​ ರಿಲೀಜನ್​​ನಲ್ಲಿ ಅವರು ಮಾಡಿದ ಭಾಷಣ ಎಲ್ಲೆಡೆ ಜನಜನಿತವಾಗಿದೆ. ಅಮೆರಿಕದ ನನ್ನ ಸಹೋದರ ಸಹೋದರಿಯರೇ ಎಂದು ಸ್ವಾಮಿ ವಿವೇಕಾನಂದರು ಮಾತುಗಳನ್ನು ಆರಂಭಿಸಿದ್ದರು. ಈ ಮಾತು ಇಂದಿಗೂ ಎಲ್ಲರ ಮನಸಲ್ಲೂ ಚಿರಸ್ಥಾಯಿಯಾಗಿ ಉಳಿದಿವೆ.


    ಸ್ವಾಮಿ ವಿವೇಕಾನಂದರು 1863 ಜನವರಿ 12ರಂದು ಬಂಗಾಳಿ ಕುಟುಂಬದಲ್ಲಿ ಜನಿಸಿದರು. ಇವರ ಬಾಲ್ಯದ ಹೆಸರು ನರೇಂದ್ರನಾಥ ದತ್ತ. ಇವರ ತಂದೆ ವಿಶ್ವನಾಥ ದತ್ತ. ಕೊಲ್ಕತ್ತಾ ಹೈಕೋರ್ಟ್​​ನಲ್ಲಿ ಅಟಾರ್ನಿ ಜನರಲ್ ಆಗಿದ್ದರು. ತಾಯಿ ಭುವನೇಶ್ವರಿ ದೇವಿ ಗೃಹಿಣಿ. ವಿವೇಕಾನಂದರು ತಮ್ಮ ಚಿಕ್ಕ ವಯಸ್ಸಿನಿಂದಲೇ ಹಿಂದುತ್ವ ಹಾಗೂ ಆಧ್ಯಾತ್ಮದ ಕಡೆಗೆ ಹೆಚ್ಚಿನ ಒಲವು ಹೊಂದಿದ್ದರು.


    ಇದನ್ನೂ ಓದಿ:Explainer: ಝೈಕೋವ್-ಡಿ ವ್ಯಾಕ್ಸಿನ್​​ ಹೇಗೆ ಕಾರ್ಯನಿರ್ವಹಿಸುತ್ತದೆ? ಇದು ಬೇರೆ ಲಸಿಕೆಗಳಿಗಿಂತ ಹೇಗೆ ಭಿನ್ನವಾಗಿದೆ ಗೊತ್ತೇ?


    ಇಂದು ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಹಿನ್ನೆಲೆ, ದೇಶಾದ್ಯಂತ ಸಾರ್ವಜನಿಕರು ಹಾಗೂ ರಾಜಕೀಯ ನಾಯಕರು ಗೌರವ ಸಲ್ಲಿಸಿದ್ದಾರೆ. ಕರ್ನಾಟಕ ಸಿಎಂ ಬಿಎಸ್​ ಯಡಿಯೂರಪ್ಪ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಇಂದು ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.



    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸ್ವಾಮಿ ವಿವೇಕಾನಂದರ ಪುಣ್ಯತಿಥಿಯಂದು ಗೌರವ ಸಮರ್ಪಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, 1902ರಲ್ಲಿ ಇದೇ ದಿನದಂದು ಸ್ವಾಮಿ ವಿವೇಕಾನಂದರು ಮಹಾಸಮಾಧಿಯಾದರು. ಸಾಮಮಾಜಿಕ ಸಮಾನತೆ ಮತ್ತು ನ್ಯಾಯದ ಕುರಿತಾಗಿ ಅವರ ಬೋಧನೆಗಳಿಗಾಗಿ ನಾವು ಅವರಿಗೆ ಸದಾ ಚಿರಋಣಿಯಾಗಿರುತ್ತೇವೆ. ಅವರ ಆಲೋಚನೆಗಳು ಇಂದಿಗೂ ನಮಗೆ ಮಾರ್ಗದರ್ಶನದ ಬೆಳಕು ಎಂದು ಹೇಳಿದ್ದಾರೆ.




    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು