ಕಾಬೂಲ್ (ಆಗಸ್ಟ್ 19); ಕಳೆದ ಒಂದು ವಾರದಲ್ಲಿ ಆಫ್ಘಾನಿಸ್ತಾನದಲ್ಲಿ ಎಲ್ಲವೂ ಬದಲಾಗಿದೆ. ಜನರಿಂದ ಚುನಾಯಿತಗೊಂಡ ಸರ್ಕಾರ ಉರುಳಿದೆ. ಅಘ್ಘಾನ್ ಅಧ್ಯಕ್ಷ ಅಶ್ರಫ್ ಘಾನಿ ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತಜಕಿಸ್ಥಾನಕ್ಕೆ ಪಲಾಯನ ಮಾಡಿದ್ದಾರೆ. 20 ವರ್ಷಗಳಿಂದ ಅಧಿಕಾರದ ದಾಹದಲ್ಲಿ ಹಪಹಪಿಸುತ್ತಿದ್ದ ತಾಲಿಬಾನಿಗಳು ಕೊನೆಗೂ ಆಫ್ಘನ್ನಲ್ಲಿ ತಮ್ಮ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ತಾಲಿಬಾನಿಗಳಿಗೆ ಹೆದರಿರುವ ಆಫ್ಘನ್ ಜನ ದೇಶದಿಂದ ಪಲಾಯನ ಮಾಡಲು ಮುಂದಾಗಿದ್ದಾರೆ. ಈ ನಡುವೆ 200ಕ್ಕೂ ಹೆಚ್ಚು ಸಿಖ್ಖರು ಮತ್ತು ಹಲವು ಹಿಂದೂಗಳು ಕಾಬೂಲ್ನಲ್ಲಿ ಸಿಲುಕಿದ್ದರು. ಅವರ ಪ್ರಾಣವನ್ನು ರಕ್ಷಿಸಿ ದೇಶಕ್ಕೆ ಮರಳಿ ಕರೆತರಬೇಕು ಎಂದು ಇತ್ತೀಚೆಗೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಪ್ರಧಾನಿ ನರೇಂದ್ರ ಮೋದಿ ಬಳಿ ಕೇಳಿಕೊಂಡಿದ್ದರು. ಆದರೆ, ಇದೀಗ ಕಾಬೂಲ್ನಲ್ಲಿರುವ ಸಿಖ್ಖರ ಜೀವಕ್ಕೆ ಅಪಾಯ ಇಲ್ಲ ಎಂದು ಸ್ವತಃ ತಾಲಿಬಾನಿಗಳೇ ಸ್ಪಷ್ಟಪಡಿಸಿದ್ದಾರೆ.
I am in constant touch with the President Gurdwara Committee, Kabul S. Gurnam Singh & Sangat taking refuge in Gurdwara Karte Parwan Sahib in Kabul. Even today, Taliban leaders came to Gurdwara Sahib and met the Hindus and Sikhs and assured them of their safety @thetribunechd pic.twitter.com/glyCgZBwVI
— Manjinder Singh Sirsa (@mssirsa) August 18, 2021
ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಅಧ್ಯಕ್ಷ ಅಕಾಲಿದಳದ ಮಂಜಿಂದರ್ ಸಿಂಗ್ ಸಿರ್ಸಾ ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ. ಕಾಬೂಲ್ ಗುರುದ್ವಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತಾಲಿಬಾನ್ ನಾಯಕರು “ಹಿಂದುಗಳು ಮತ್ತು ಸಿಖ್ಖರನ್ನು ಭೇಟಿಯಾಗಿದ್ದಾರೆ. ಅವರ ಸುರಕ್ಷತೆಯ ಭರವಸೆ ನೀಡಿದ್ದಾರೆ" ಎಂದು ತಿಳಿಸಿದ್ದಾರೆ.
حیاة السیخ والهنود في کابول: رئیس معابدهم في کابول: نحن في أمن و أمان لا نشعر بأي خوف أو قلق. قبل ذلک کان خوف و قلق عند الناس علی أرواحهم وأموالهم والآن لیست هناک مشاکل. نحن مطمئنون. pic.twitter.com/NXrtRuTRod
— Dr.M.Naeem (@IeaOffice) August 18, 2021
ಅಲ್ ಜಜೀರಾ ಸುದ್ದಿ ವರದಿಯ ಭಾಗವಾಗಿರುವಂತೆ ಕಾಣುವ ಈ ವಿಡಿಯೊವನ್ನು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನದ ರಾಜಕೀಯ ಕಚೇರಿಯ ವಕ್ತಾರ ಎಂ.ನಯೀಮ್ ಕೂಡ ಟ್ವೀಟ್ ಮಾಡಿದ್ದಾರೆ.
ಕಾಬೂಲ್ನಲ್ಲಿ ಸಿಖ್ಖರು ಮತ್ತು ಭಾರತೀಯರ ಜೀವನ: ಅವರ ದೇವಾಲಯಗಳ ಮುಖ್ಯಸ್ಥರು ಹೇಳುತ್ತಾರೆ ನಾವು ಸುರಕ್ಷಿತವಾಗಿದ್ದೇವೆ. ನಾವು ಯಾವುದೇ ಭಯ ಅಥವಾ ಆತಂಕವನ್ನು ಅನುಭವಿಸುತ್ತಿಲ್ಲ. ಮೊದಲು ಇಲ್ಲಿನ ಜನರು ಅವರ ಜೀವನ ಮತ್ತು ಹಣದ ಬಗ್ಗೆ ಭಯ ಮತ್ತು ಆತಂಕದಲ್ಲಿದ್ದರು. ಈಗ ಯಾವುದೇ ಸಮಸ್ಯೆಗಳಿಲ್ಲ. ನಮಗೆ ಭರವಸೆ ಇದೆ” ಎಂದು ಗುರುದ್ವಾರದ ಮುಖ್ಯಸ್ಥರು ಹೇಳಿದ್ದಾರೆ ಎಂದು ಎಂ.ನಯೀಮ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Afghan Crisis- ಆಫ್ಘಾನಿಸ್ತಾನ-ಭಾರತ ಮಧ್ಯೆ ಆಮದು ರಫ್ತು ಸ್ಥಗಿತ
ಈ ಹಿಂದೆ, ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ