• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Afghanistan Crisis| ಭಾರತದ ರಾಯಭಾರಿ ಕಚೇರಿ ಸಿಬ್ಬಂದಿಗಳ ಸ್ಥಳಾಂತರವನ್ನು ತಾಲಿಬಾನಿಗಳು ಬಯಸಿರಲಿಲ್ಲವಂತೆ!

Afghanistan Crisis| ಭಾರತದ ರಾಯಭಾರಿ ಕಚೇರಿ ಸಿಬ್ಬಂದಿಗಳ ಸ್ಥಳಾಂತರವನ್ನು ತಾಲಿಬಾನಿಗಳು ಬಯಸಿರಲಿಲ್ಲವಂತೆ!

ತಾಲಿಬಾನ್

ತಾಲಿಬಾನ್

ತಾಲಿಬಾನ್ ಉಗ್ರರು ಅಫ್ಘಾನ್ ರಾಜಧಾನಿ ಕಾಬೂಲ್​ಗೆ ಪ್ರವೇಶಿಸುತ್ತಿದ್ದಂತೆ ಭಾರತವು ಕಳೆದ ಭಾನುವಾರವೇ ಎರಡು ವಾಯುಪಡೆಯ C-17 ಸಾರಿಗೆ ವಿಮಾನಗಳನ್ನು ಕಾಬೂಲ್ ವಿಮಾನ ನಿಲ್ದಾಣಕ್ಕೆ ಕಳುಹಿಸಿಕೊಟ್ಟಿತ್ತು.

  • Share this:

ಕಾಬೂಲ್ (ಆಗಸ್ಟ್​ 20); ಅಫ್ಘಾನಿಸ್ತಾನದಲ್ಲಿ ಉಗ್ರಗಾಮಿ ತಾಲಿಬಾನ್ ಪಡೆ ತನ್ನ ಅಧಿಪತ್ಯವನ್ನು ಸಾಧಿಸುತ್ತಿದ್ದಂತೆ ಎಲ್ಲಾ ದೇಶಗಳೂ ಕಾಬೂಲ್​ನಲ್ಲಿದ್ದ ತಮ್ಮ ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹಿಂದಕ್ಕೆ ಕರೆಸಿಕೊಂಡಿತ್ತು. ಅದರಂತೆ ಭದ್ರತಾ ದೃಷ್ಟಿಯಿಂದ ಭಾರತ ಸರ್ಕಾರ ಸಹ ಎರಡು ವಿಶೇಷ ವಿಮಾನಗಳಲ್ಲಿ ತನ್ನ ರಾಯಭಾರ ಕಚೇರಿ ಅಧಿಕಾರಗಳನ್ನು ಸುರಕ್ಷಿತವಾಗಿ ದೇಶಕ್ಕೆ ಕರೆಸಿಕೊಂಡಿದೆ. ಆದರೆ, ಭಾರತ ಸರ್ಕಾರ ತನ್ನ ಕಾಬೂಲ್ ರಾಯಭಾರ ಕಚೇರಿಯಿಂದ ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವುದನ್ನು ತಾಲಿಬಾನ್ ನಾಯಕರು ಬಯಸಿರಲಿಲ್ಲ ಎಂದು ಉನ್ನತ ಮೂಲಗಳು ಎನ್​ಡಿಟಿವಿಗೆ ಮಾಹಿತಿ ನೀಡಿವೆ. ಅಲ್ಲದೆ, ತಾಲಿಬಾನಿಗಳು ಭಾರತೀಯ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯ ಸುರಕ್ಷತೆಯ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಈ ಸಂದೇಶಗಳು - ತಾಲಿಬಾನ್‌ನ ರಾಜಕೀಯ ಘಟಕದ ಮುಖ್ಯಸ್ಥರಾದ ಅಬ್ಬಾಸ್ ಸ್ಟಾನಿಕ್‌ಜಾಯ್ ಅವರ ಕಚೇರಿಯಿಂದ ಕಳುಹಿಸಲ್ಪಟ್ಟಿವೆ. ಕಾಬೂಲ್ ಮತ್ತು ದೆಹಲಿಯ ಸಂಪರ್ಕಗಳ ಮೂಲಕ ರವಾನೆಯಾದ ಈ ಸಂದೇಶಗಳನ್ನು ರಾಯಭಾರ ಕಚೇರಿ ಸಿಬ್ಬಂದಿಗಳ ಸ್ಥಳಾಂತರಕ್ಕಿಂತ ಮೊದಲೇ ತಲುಪಿಸಲಾಗಿತ್ತು ಎಂದು ತಿಳಿದುಬಂದಿದೆ.



ತಾಲಿಬಾನಿಗಳು ಅಫ್ಘಾನ್​ ಅನ್ನು ವಶಪಡಿಸಿಕೊಂಡ ಸಂದರ್ಭದಲ್ಲಿ ಭಾರತದ ರಾಯಭಾರ ಕಚೇರಿಗೆ ಲಷ್ಕರ್​ ಎ ತೊಯ್ಬಾ ಮತ್ತು ಜೈಶ್​ ಎ ಮೊಹಮ್ಮದ್​ ಉಗ್ರ ಸಂಘಟನೆಗಳಿಂದ ದಾಳಿಯಾಗುವ ಸಾಧ್ಯತೆ ಇದೆ ಎಂದು ಭಾರತ ಸರ್ಕಾರ ಅನುಮಾನಿಸಿತ್ತು. ಆದರೆ, ಈ ಯಾವ ಉಗ್ರ ಸಂಘಟನೆಗಳಿಂದಲೂ ಭಾರತದ ರಾಯಭಾರ ಕಚೇರಿ ಮೇಲೆ ದಾಳಿಯಾಗದಂತೆ ತಾವು ಭದ್ರತೆ ನೀಡುವುದಾಗಿ ತಾಲಿಬಾನಿಗಳು ಭರವಸೆ ನೀಡಿದ್ದರು ಎನ್ನಲಾಗಿದೆ.


ಇದನ್ನೂ ಓದಿ: Afghanistan Crisis: ಹುಡುಕಿದ ಪತ್ರಕರ್ತ ಸಿಕ್ಕಿಲ್ಲವೆಂದು ಆತನ ಸಂಬಂಧಿಗಳನ್ನು ಕೊಂದ ತಾಲಿಬಾನಿಗಳು!


ಆದಾಗ್ಯೂ, ಈ ಭಯೋತ್ಪಾದಕ ಗುಂಪುಗಳಿಂದ ಬೆದರಿಕೆಯಿದೆ ಎಂದು ಗುಪ್ತಚರ ಇಲಾಖೆ ಖಚಿತ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ರಾಜತಾಂತ್ರಿಕರನ್ನು ಅಫ್ಘನ್​ನಿಂದ ಸ್ಥಳಾಂತರಿಸಲಾಗಿದೆ. ತಾಲಿಬಾನ್ ಉಗ್ರರು ಅಫ್ಘಾನ್ ರಾಜಧಾನಿ ಕಾಬೂಲ್​ಗೆ ಪ್ರವೇಶಿಸುತ್ತಿದ್ದಂತೆ ಭಾರತವು ಕಳೆದ ಭಾನುವಾರವೇ ಎರಡು ವಾಯುಪಡೆಯ C-17 ಸಾರಿಗೆ ವಿಮಾನಗಳನ್ನು ಕಾಬೂಲ್ ವಿಮಾನ ನಿಲ್ದಾಣಕ್ಕೆ ಕಳುಹಿಸಿಕೊಟ್ಟಿತ್ತು.



45 ಭಾರತೀಯ ಸಿಬ್ಬಂದಿಯನ್ನು ಸೋಮವಾರ ಸ್ಥಳಾಂತರಿಸಲಾಗಿದ್ದರೆ, ರಾಯಭಾರಿ ರುದ್ರೇಂದ್ರ ಟಂಡನ್ ಸೇರಿದಂತೆ 120 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಮಂಗಳವಾರ ಸ್ಥಳಾಂತರಿಸಲಾಗಿದೆ. ಈ ಮೂಲಕ ಭಾರತ ಸೇರಿದಂತೆ ಎಲ್ಲಾ ದೇಶಗಳು ಅಫ್ಘನ್​ನಿಂದ ತಮ್ಮ ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡಂತಾಗಿದೆ. ಅಲ್ಲದೆ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಯಾವ ಯುರೋಪ್​ ರಾಷ್ಟ್ರಗಳೂ ಸಹ ತಾಲಿಬಾನಿಗಳ ಸರ್ಕಾರವನ್ನು ಒಪ್ಪಿಕೊಂಡು ದೇಶದ ಮಾನ್ಯತೆ ನೀಡಲು ಸಿದ್ದರಿಲ್ಲ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ತಾಲಿಬಾನ್​ ಪ್ರಮುಖ ನಾಯಕ ಶೇರ್​ ಮೊಹಮ್ಮದ್​ಗೆ ಭಾರತದ ನಂಟು; ನೆನಪು ಹಂಚಿಕೊಂಡ ಮಿಲಿಟರಿ ಸ್ನೇಹಿತರು


ಅಫ್ಘಾನ್​ನಲ್ಲಿರುವ ಗುರುದ್ವಾರದಲ್ಲಿ 200ಕ್ಕೂ ಹೆಚ್ಚು ಸಿಖ್ಖರು ಇದ್ದಾರೆ. ಅಲ್ಲದೆ, ಹಲವು ಹಿಂದೂಗಳು ಅಲ್ಲಿ ಆಶ್ರಯ ಪಡೆದಿದ್ದಾರೆ. ಇವರನ್ನು ರಕ್ಷಣೆ ಮಾಡುವಂತೆ ಪಂಜಾಬ್ ಸಿಎಂ ಅಮರೀಂದರ್​ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ತಾಲಿಬಾನ್ ನಾಯಕರು ಗುರುವಾರ ಆ ಗುರುದ್ವಾರಕ್ಕೆ ಖುದ್ದು ಭೇಟಿ ನೀಡಿ ತಮ್ಮಿಂದ ಯಾವ ಸಿಖ್ಖರು ಮತ್ತು ಹಿಂದೂಗಳಿಗೂ ತೊಂದರೆ ಆಗುವುದಿಲ್ಲ ಎಂದು ಭರವಸೆ ನೀಡಿದ್ದರು. ಅವರು ಭರವಸೆ ನೀಡಿದ್ದ ವಿಡಿಯೋ ನಿನ್ನೆ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

top videos
    First published: