• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Afghanistan Crisis| ಸೈನಿಕರು, ರೈತರು ಸೇರಿದಂತೆ ಯಾರೊಂದಿಗೂ ದ್ವೇಷವಿಲ್ಲ, ಎಲ್ಲರನ್ನೂ ಕ್ಷಮಿಸಲಾಗಿದೆ; ತಾಲಿಬಾನ್ ಘೋಷಣೆ

Afghanistan Crisis| ಸೈನಿಕರು, ರೈತರು ಸೇರಿದಂತೆ ಯಾರೊಂದಿಗೂ ದ್ವೇಷವಿಲ್ಲ, ಎಲ್ಲರನ್ನೂ ಕ್ಷಮಿಸಲಾಗಿದೆ; ತಾಲಿಬಾನ್ ಘೋಷಣೆ

ಕಾಬೂಲ್​ನಲ್ಲಿ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್.

ಕಾಬೂಲ್​ನಲ್ಲಿ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್.

ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ ಎಂದು ಮುಜಾಹಿದ್ ಹೇಳಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುಂದೆ ಓದಿ ...
  • Share this:

ಕಾಬೂಲ್ (ಆಗಸ್ಟ್​ 17); ಅಮೇರಿಕ ತನ್ನ ಸೈನಿಕರನ್ನು ಹಿಂಪಡೆದುಕೊಂಡ ಬೆನ್ನಿಗೆ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಕೈಮೀರಿದೆ. ತಾಲಿಬಾನ್ ಬಂಡುಕೋರರು ಭಾನುವಾರ ಕಾಬೂಲ್​ ಪ್ರವೇಶಿಸಿ ಇಡೀ ದೇಶವನ್ನು ತಮ್ಮ ವಶಕ್ಕೆ ಪಡೆದುಕೊಂಡಿ ದ್ದಾರೆ. ಅಘ್ಘಾನ್ ಅಧ್ಯಕ್ಷ ಅಶ್ರಫ್ ಘಾನಿ ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತಜಕಿಸ್ಥಾನಕ್ಕೆ ಪಲಾಯನ ಮಾಡಿದ್ದಾರೆ. ದೇಶದ ಜನ ಜೀವ ಉಳಿಸಿಕೊಂಡರೆ ಸಾಕು ಎಂಬ ಭಯದಲ್ಲಿ ಅನ್ಯ ದೇಶಗಳಿಗೆ ಪಲಾಯನ ಮಾಡಲು ವಿಮಾನ ನಿಲ್ದಾಣಗಳ ಲ್ಲಿ ಜಮಾಯಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಒಳಗಾಗುತ್ತಿದೆ. ಈ ನಡುವೆ ಬಂದೂಕುಗಳ ಜೊತೆಗೆ ಕಾಬೂಲ್​ನಲ್ಲಿರುವ ಸಂಸತ್​ ಅನ್ನು ವಶಕ್ಕೆ ಪಡೆದು ಇಂದು ಮೊದಲ ಪತ್ರಿಕಾಗೋಷ್ಠಿಯನ್ನೂ ನಡೆಸಿರುವ ತಾಲಿಬಾನ್ ನಾಯಕರು "ಯಾರ ವಿರುದ್ಧವೂ ನಾವು ದ್ವೇಷ ಸಾಧಿಸುವುದಿಲ್ಲ. ಎಲ್ಲರಿಗೂ ಕ್ಷಮೆ ನೀಡಲಾಗಿದೆ" ಎಂದು ಘೋಷಿಸಿದ್ದಾರೆ.



ತಾಲಿಬಾನ್ ಸರ್ಕಾರ ವಕ್ತಾರ ಜಬೀಹುಲ್ಲಾ ಮುಜಾಹಿದ್​ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, ಈ ಪತ್ರಿಕಾಗೋಷ್ಠಿಯಲ್ಲಿ, "ವಿದೇಶಿ ರಾಯಭಾರ ಕಚೇರಿಗಳ ಭದ್ರತೆಯು ತಾಲಿಬಾನ್‌ಗೆ ಮುಖ್ಯವಾಗಿದ್ದು, ಅವರು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತಾರೆ. ತಾಲಿಬಾನಿಗಳು ಯಾರೊಂದಿಗೂ ದ್ವೇಷವನ್ನು ಹೊಂದಿಲ್ಲ. ದೇಶದ ಸೈನಿಕರು ಮತ್ತು ರೈತರ ವಿರುದ್ಧ ತಾಲಿಬಾನ್​ಗಳು ದ್ವೇಷ ಸಾಧಿಸುವುದಿಲ್ಲ ಮತ್ತು ತಮ್ಮ ನಾಯಕನ ಆದೇಶದ ಮೇರೆಗೆ ಎಲ್ಲರಿಗೂ ಕ್ಷಮೆ ನೀಡಲಾಗಿದೆ" ಎಂದು ಅವರು ಹೇಳಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.


ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವಿಲ್ಲ ಎಂದು ‘ಇಸ್ಲಾಮಿಕ್ ಎಮಿರೇಟ್’ ಜಗತ್ತಿನ ಎಲ್ಲ ದೇಶಗಳಿಗೆ ಪ್ರತಿಜ್ಞೆ ಮಾಡುತ್ತಿದೆ ಎಂದು ಮುಜಾಹಿದ್ ಹೇಳಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕತೆ ಮತ್ತು ಜನ ಜೀವನೋಪಾಯದಲ್ಲಿ ಸುಧಾರಣೆಯಾಗಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಮಂಗಳವಾರ ಮುಂಜಾನೆ, ತಾಲಿಬಾನ್ ಸರ್ಕಾರಿ ಅಧಿಕಾರಿಗಳಿಗೆ ‘ಸಾಮಾನ್ಯ ಕ್ಷಮಾದಾನ’ ಘೋಷಿಸಿದ್ದು, ಅವರನ್ನು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪಲಾಯನ ಮಾಡಿದ ನಂತರ ಬಂಡುಕೋರ ರು 20 ವರ್ಷಗಳ ಯುದ್ಧವನ್ನು ಗೆದ್ದಿದ್ದಾರೆ ಎಂದು ಘೋಷಿಸಿದ್ದಾರೆ. ಪ್ರಸ್ತುತ ದೇಶವು ತಾಲಿಬಾನ್‌ ನಿಯಂತ್ರಣದಲ್ಲಿದೆ.


ಇದನ್ನೂ ಓದಿ: Afghanistan Crisis| ತ್ವರಿತ ಪರಿಶೀಲನೆಗೆ ಅಫ್ಘಾನಿಸ್ತಾನ ಜನತೆಗೆ ಇ-ವೀಸಾ ಪರಿಚಯಿಸಿದ ಕೇಂದ್ರ ಸರಕಾರ


ಭಾರತವು ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ ಎಂಬ ಹೊಸ ವರ್ಗದ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಿದ್ದು, ಇದು ದೇಶಕ್ಕೆ ಪ್ರವೇಶಿಸುವ ವೀಸಾ ಅರ್ಜಿಗಳನ್ನು ತ್ವರಿತಗತಿ ಯಲ್ಲಿ ಪರಿಣಿಸಲಿದೆ. ಅಫ್ಘಾನಿಸ್ತಾನದಲ್ಲಿ ಅಮೆರಿಕವು ಅಶಾಂತಿ, ವಿಭಜನೆ ಮತ್ತು ಒಡೆದ ಕುಟುಂಬ ಗಳ ಭೀಕರ ಅವ್ಯವಸ್ಥೆಯನ್ನು ಬಿಟ್ಟಿದೆ ಎಂದು ಚೀನಾ ಹೇಳಿದೆ.


ಇದನ್ನೂ ಓದಿ: ಅಫ್ಘಾನ್ ಬಿಕ್ಕಟ್ಟು| ಕೇಂದ್ರ ಸರ್ಕಾರ ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು; ಶರದ್ ಪವಾರ್


ಭಾನುವಾರ ವಷ್ಟೇ, ತಾಲಿಬಾನ್ ಕಮಾಂಡರ್‌ಗಳು ತಾವು ಅಫ್ಘಾನ್ ಅಧ್ಯಕ್ಷರ ಅರಮನೆ ಯ ನಿಯಂತ್ರಣವನ್ನು ಪಡೆದುಕೊಂಡಿದ್ದೇವೆ ಎಂದು ಘೋಷಿಸಿದ್ದರು. ಮೇ 1 ರಂದು ಬಹುಪಾಲು ಅಮೆರಿಕಾ ಸೈನ್ಯವನ್ನು ಹಿಂತೆಗೆದುಕೊಂಡ ನಂತರ, ತಾಲಿಬಾನ್ ಅಫ್ಘಾನ್‌ ಅನ್ನು ಶೀಘ್ರವಾಗಿ ಆವರಿಸಿ, ರಾಜಧಾನಿಯನ್ನು ವಶಪಡಿಸಿಕೊಂಡಿತು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿ ತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿ ನಿಂದ ತಮ್ಮನ್ನು ತಾವು ಕಾಪಾಡಿ ಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾ ರಿಯುತವಾಗಿ ನಡೆದುಕೊಳ್ಳಬೇಕು.

top videos
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು