ಚೆನ್ನೈ (ಸೆಪ್ಟೆಂಬರ್ 4): ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಐದು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ. ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್ಡೌನ್ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.
ಇದನ್ನೂ ಓದಿ: ಇಂದ್ರಜಿತ್ ಲಂಕೇಶ್ ಹೇಳಿಕೆಗೂ ಮುನ್ನವೇ ಸಿಸಿಬಿ ಬಳಿ ಇತ್ತು 15 ಜನ ಸೆಲಬ್ರೆಟಿಗಳ ಲಿಸ್ಟ್!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ