ಶ್ರೀನಗರ (ಏ. 2): ಜಮ್ಮು ಕಾಶ್ಮೀರದ ಪುಲ್ವಾಮಾ ಬಳಿಯ ಕಾಕಾಪುರದಲ್ಲಿ ಭಾರತೀಯ ಭದ್ರತಾ ಪಡೆ ಸಿಬ್ಬಂದಿ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಸ್ಥಳದಲ್ಲಿ ಉಗ್ರರು ಬೀಡುಬಿಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಸೇನಾ ಪಡೆ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಕಾಪುರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಭದ್ರತಾ ಪಡೆಯ ಸಿಬ್ಬಂದಿಯ ಗುಂಡಿನ ಮೇಲೆ ಅನುಮಾನಾಸ್ಪದ ಉಗ್ರರ ಗುಂಪು ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ಪ್ರತ್ಯುತ್ತರವಾಗಿ ಸೇನಾ ಸಿಬ್ಬಂದಿ ಕೂಡ ಗುಂಡು ಹಾರಿಸಿದ್ದಾರೆ. ಕಾಕಾಪುರದ ಸುತ್ತಲೂ ಭಯೋತ್ಪಾದಕರು ಅಡಗಿರುವ ಅನುಮಾನ ವ್ಯಕ್ತವಾಗಿದ್ದು, ಭಾರತೀಯ ಸೇನೆಯ ಕಾರ್ಯಾಚರಣೆಗೆ ಪೊಲೀಸರು ಹಾಗೂ ಸಿಆರ್ಪಿಎಫ್ ಸಿಬ್ಬಂದಿ ಕೂಡ ಜೊತೆಯಾಗಿದ್ದಾರೆ.
ನಿನ್ನೆ ರಾತ್ರಿಯಿಂದ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಇನ್ನೂ ಮುಂದುವರೆದಿದೆ. ಮೂಲಗಳ ಪ್ರಕಾರ, ಭಾರತೀಯ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ಈಗಾಗಲೇ 3ರಿಂದ 4 ಉಗ್ರರನ್ನು ಸುತ್ತುವರೆದಿದ್ದಾರೆ. ಅವರನ್ನು ಸೆರೆಹಿಡಿದ ಬಳಿಕ ಎಷ್ಟು ಜನರು ಅಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಗುವ ಸಾಧ್ಯತೆಗಳಿವೆ.
An encounter has started at the Kakapora area in Pulwama district. Police and Security Forces are carrying out the operation. More details awaited: Jammu & Kashmir Police
— ANI (@ANI) April 1, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ