ನವದೆಹಲಿ: (New Delhi) ಸಂಸತ್ ಸದಸ್ಯರು (ಸಂಸದರು) (MPs) ಮತ್ತು ಶಾಸಕಾಂಗ ಸದಸ್ಯರ (MLAs) (ಶಾಸಕರು) ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸಲು ನಿರ್ದೇಶನಗಳನ್ನು ನೀಡಬಹುದು. ಆದರೆ, ನ್ಯಾಯಾಧೀಶರ ಕೊರತೆಯಿಂದಾಗಿ ಅಂತಹ ನಿರ್ದೇಶನಗಳನ್ನು ಜಾರಿಗೊಳಿಸುವುದು ಸುಲಭವಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಬುಧವಾರ ಹೇಳಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ (CJI NV Raman) ನೇತೃತ್ವದ ನ್ಯಾಯಪೀಠ, ಆರೋಪಿ ಜನಪ್ರತಿನಿಧಿಗಳ ಮೇಲೆ ತೂಗುಗತ್ತಿ ನೇತಾಡದಂತೆ ನೋಡಿಕೊಳ್ಳಬೇಕಿದ್ದು, ವಿಚಾರಣೆಯಲ್ಲಿ ಅತಿ ವಿಳಂಬ ತಪ್ಪಿಸಲು ನೀತಿ ರೂಪಿಸುವ ಅಗತ್ಯವಿದೆ ಎಂದು ಹೇಳಿದೆ.
ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ರೀತಿಯ ತನಿಖಾ ಸಂಸ್ಥೆಗಳ ಸ್ಥೈರ್ಯಗೆಡಿಸಲು ಬಯಸದಿದ್ದರೂ, ಈ ಸಂಸ್ಥೆಗಳ ಉತ್ತರಗಳು ವಿಚಾರಣೆಯ ವಿಳಂಬಕ್ಕೆ ಕಾರಣಗಳನ್ನು ವಿವರಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.
"ನಾವು ತನಿಖಾ ಸಂಸ್ಥೆಗಳ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ. ಏಕೆಂದರೆ ನಾವು ಅವರನ್ನು ನಿರುತ್ಸಾಹಗೊಳಿಸಲು ಇಚ್ಛಿಸುವುದಿಲ್ಲ. ಇಲ್ಲದಿದ್ದರೆ ಇದು ದೊಡ್ಡದಾಗಿ ಕೇಳುತ್ತದೆ. ಸಿಬಿಐ ನ್ಯಾಯಾಲಯಗಳಲ್ಲಿ 300ರಿಂದ 400 ಪ್ರಕರಣಗಳಿವೆ. ಇವೆಲ್ಲವನ್ನೂ ಹೇಗೆ ನಿರ್ವಹಿಸುವುದು? ಮೆಹ್ತಾ ( ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ), ವರದಿ ನಿರ್ದಿಷ್ಟವಾಗಿಲ್ಲ. 10 ರಿಂದ 15 ವರ್ಷಗಳವರೆಗೆ ಚಾರ್ಜ್ ಶೀಟ್ ಸಲ್ಲಿಸದಿರಲು ಯಾವುದೇ ಕಾರಣವಿಲ್ಲ. ಕೇವಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರಿಂದ ಯಾವುದೇ ಉದ್ದೇಶ ಪೂರೈಸುವುದಿಲ್ಲ, "ಎಂದು ನ್ಯಾಯಾಲಯ ಹೇಳಿದೆ.
ಪ್ರಕರಣ ಇತ್ಯರ್ಥಕ್ಕೆ ಕಾಲಮಿತಿ ನಿಗದಿಗೊಳಿಸಿ
ಪ್ರಕರಣಗಳನ್ನು ಇತ್ಯರ್ಥಪಡಿಸಲು ಕಾಲಮಿತಿ ನಿಗದಿಪಡಿಸಬೇಕು. ಆರು ತಿಂಗಳ ಒಳಗೆ ತನಿಖೆ ಮುಗಿಯುವಂತಿರಬೇಕು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದರು. ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಮೂಲಕ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ತ್ವರಿತ ವಿಚಾರಣೆ ನಡೆಸಬೇಕೆಂದು ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.
ಅಮಿಕಸ್ ಕ್ಯೂರಿ ವಿಜಯ್ ಹನ್ಸಾರಿಯಾ ಶಾಸಕರ ವಿರುದ್ಧದ ವಿಚಾರಣೆಯ ಸ್ಥಿತಿಗತಿಗಳ ವಿವರಗಳನ್ನು ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇಂತಹ ಪ್ರಯೋಗಗಳನ್ನು ತ್ವರಿತವಾಗಿ ಮುಗಿಸಲು ಅವರು ವಿವಿಧ ಸಲಹೆಗಳನ್ನು ನೀಡಿದ್ದರು. ಮಾನವ ಸಂಪನ್ಮೂಲದ ಕೊರತೆಯಿಂದ ತನಿಖಾ ಸಂಸ್ಥೆಗಳು ಹೇಗೆ ನಿರ್ಬಂಧಕ್ಕೆ ಒಳಪಟ್ಟಿವೆ ಎಂಬುದನ್ನು ನ್ಯಾಯಾಲಯ ಮಂಗಳವಾರ ಪ್ರಸ್ತಾಪಿಸಿತು. ಹೆಚ್ಚುವರಿಯಾಗಿ ಹೆಚ್ಚು ಮಾನವ ಸಂಪನ್ಮೂಲದ ಅಗತ್ಯವಿದೆ ಎಂಬುದನ್ನು ತಿಳಿಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ ನ್ಯಾ. ಸೂರ್ಯಕಾಂತ್ ಹೇಳಿದರು.
ಇದನ್ನು ಓದಿ: Exclusive; ಕೇಂದ್ರ ಸಚಿವ ರಾಣೆ ಬಂಧನ, ಬಿಡುಗಡೆ; ಸಂಸದ ಸಂಜಯ್ ರಾವತ್ ಹೇಳುವುದೇನು?
ಇತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಕೂಡ “ಮಾನವಸಂಪನ್ಮೂಲ ನಿಜಕ್ಕೂ ದೊಡ್ಡ ಸಮಸ್ಯೆಯಾಗಿದೆ. ನಮ್ಮಂತೆಯೇ ತನಿಖಾ ಸಂಸ್ಥೆಗಳು ಕೂಡ ಈ ಸಮಸ್ಯೆಯಿಂದ ಬಳಲುತ್ತಿವೆ. ಪ್ರತಿಯೊಬ್ಬರೂ ಸಿಬಿಐ ತನಿಖೆ ಬಯಸುತ್ತಾರೆ,” ಎಂದು ಹೇಳಿದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಸಾಧ್ಯವಾದಷ್ಟು ಗುಂಪುಗೂಡುವುದನ್ನು ನಿಯಂತ್ರಿಸಬೇಕಿದೆ. ಮತ್ತು ಸರ್ಕಾರ ಜಾರಿಗೆ ತಂದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ