ಶ್ರೀನಗರ (ಆ. 30): ಜಮ್ಮು ಕಾಶ್ಮೀರದಲ್ಲಿ ಎರಡು ದಿನಗಳಿಂದ ರಾತ್ರಿ ಎನ್ಕೌಂಟರ್ ನಡೆದಿದ್ದು, ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಓರ್ವ ಪೊಲೀಸ್ ಕೂಡ ಹುತಾತ್ಮರಾಗಿದ್ದಾರೆ. ನಿನ್ನೆ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆ ಮಾಡಲಾಗಿದೆ.
ಶನಿವಾರ ರಾತ್ರಿ ಜಮ್ಮು ಕಾಶ್ಮೀರದ ಶ್ರೀನಗರದ ಪಂತಚೌಕ್ನಲ್ಲಿ ಎನ್ಕೌಂಟರ್ ನಡೆದಿದ್ದು, ಒಟ್ಟು ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಓರ್ವ ಪೊಲೀಸ್ ಸಿಬ್ಬಂದಿ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ನಾಕಾಬಂದಿ ನಡೆಸಿದ್ದ ಪೊಲೀಸರು ಮತ್ತು ಸಿಆರ್ಪಿಎಫ್ ಮೇಲೆ ಉಗ್ರರು ದಾಳಿ ಆರಂಭಿಸಿದರು.
#SrinagarEncounterUpdate: 02 more #terrorists killed (total 03). #Operation going on. Further details shall follow. @JmuKmrPolice https://t.co/8HmfypzbgK
— Kashmir Zone Police (@KashmirPolice) August 30, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ