Jammu-Kashmir Encounter: ಮೋಸ್ಟ್​ ವಾಂಟೆಡ್​ ಉಗ್ರ ಮುದಾಸಿರ್​ ಪಂಡಿತ್ ಸೇರಿ ಮೂವರ ಹತ್ಯೆ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಮುದಾಸಿರ್ ಪಂಡಿರ್ ಕಳೆದ ಮಾರ್ಚ್​ ತಿಂಗಳಿನಲ್ಲಿ ಸೊಪೋರ್​ನಲ್ಲಿ ಸಭೆ ನಡೆಯುತ್ತಿದ್ದ ವೇಳೆ, ಇಬ್ಬರು ಬಿಜೆಪಿ ಕೌನ್ಸಿಲರ್​​ಗಳು ಹಾಗೂ ಒಬ್ಬ ಪೊಲೀಸ್ ಅಧಿಕಾರಿಯನ್ನು ಕೊಂದಿದ್ದ.

  • Share this:

ನವದೆಹಲಿ(ಜೂ.21): ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೈನಿಕರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಹತ್ಯೆಯಾದ ಮೂವರು ಉಗ್ರರು ಲಷ್ಕರ್​-ಎ-ತೊಯ್ಬಾ (ಎಲ್​ಇಟಿ) ಭಯೋತ್ಪಾದಕ ಸಂಘಟನೆಗೆ ಸೇರಿದವರಾಗಿದ್ದರು. ಮೋಸ್ಟ್​ ವಾಂಟೆಡ್ ಉಗ್ರ ಮುದಾಸಿರ್​ ಪಂಡಿತ್​ ಕೂಡ ಈ ಎನ್​ಕೌಂಟರ್​ನಲ್ಲಿ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಸೊಪೋರ್​ನ ಗುಂದ್ ಬ್ರಾತ್​​ ಪ್ರದೇಶದಲ್ಲಿ ಈ ಎನ್​ಕೌಂಟರ್​ ನಡೆದಿದೆ.


ಕಮಾಂಡರ್ ಹಾಗೂ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮುದಾಸಿರ್ ಪಂಡಿತ್ ಕೂಡ ಈ ಎನ್​ಕೌಂಟರ್​​ನಲ್ಲಿ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ ಕಳೆದ ಮಾರ್ಚ್​ ತಿಂಗಳಿನಲ್ಲಿ ಸೊಪೋರ್​ನಲ್ಲಿ ಸಭೆ ನಡೆಯುತ್ತಿದ್ದ ವೇಳೆ, ಇಬ್ಬರು ಬಿಜೆಪಿ ಕೌನ್ಸಿಲರ್​​ಗಳು ಹಾಗೂ ಒಬ್ಬ ಪೊಲೀಸ್ ಅಧಿಕಾರಿಯನ್ನು ಕೊಂದಿದ್ದ. ಜೊತೆಗೆ ಹಲವು ಪ್ರಕರಣಗಳಲ್ಲಿ ಸಿಕ್ಕಿಕೊಂಡಿದ್ದ ಈತನನ್ನು ಭದ್ರತಾ ಪಡೆಯವರು ಹುಡುಕುತ್ತಿದ್ದರು.


ಇದನ್ನೂ ಓದಿ:International Yoga Day 2021: ಅಂತರಾಷ್ಟ್ರೀಯ ಯೋಗ ದಿನದಂದು M Yoga App ಲಾಂಚ್​ ಮಾಡಿದ ಪ್ರಧಾನಿ ಮೋದಿ


ಪಂಡಿತ್​ ಸೇರಿ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಗುಪ್ತಚರ ದಳದ ಖಚಿತ ಮಾಹಿತಿ ಮೇರೆಗೆ, ಭದ್ರತಾ ಪಡೆ ಭಾನುವಾರ ರಾತ್ರಿ ಸೊಪೋರ್​ ಪ್ರದೇಶದಲ್ಲಿ ಕಾರ್ಡನ್​ ಲಾಂಚ್ ಮಾಡಿ, ಶೋಧ ಕಾರ್ಯಾಚರಣೆ ಆರಂಭಿಸಿತ್ತು.

top videos


    ಎಲ್​ಇಟಿ ಸಂಘಟನೆಯ ಟಾಪ್​ ಟೆರರಿಸ್ಟ್ ಮುದಾಸಿರ್ ಪಂಡಿತ್ ಇತ್ತೀಚೆಗೆ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್​ಗಳು ಹಾಗೂ ಇಬ್ಬರು ನಾಗರಿಕರನ್ನು ಕೊಲೆ ಮಾಡಿದ್ದ. ಸೊಪೋರ್​ನಲ್ಲಿ ಭಯೋತ್ಪಾದನಾ ಪ್ರಕರಣ ಸಂಬಂಧ ನಡೆದ ಎನ್​ಕೌಂಟರ್​​ನಲ್ಲಿ ಹಲವರು ಈತನ ಗುಂಡೇಟಿಗೆ ಬಲಿಯಾಗಿದ್ದರು. ಈಗ ಮುದಾಸಿರ್​ ಪಂಡಿತ್​​ನನ್ನು ಭಾರತೀಯ ಸೈನಿಕರು ಹತ್ಯೆಗೈದಿದ್ದಾರೆ ಎಂದು ಕಾಶ್ಮೀರದ ಇನ್ಸ್​ಪೆಕ್ಟರ್​​ ಜನರಲ್​ ಆಫ್​ ಪೊಲೀಸ್ ವಿಜಯ್​ ಕುಮಾರ್​ ಟ್ವೀಟ್ ಮಾಡಿದ್ದಾರೆ.


    ​​ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.

    First published: