ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರ ಎನ್​ಕೌಂಟರ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನೌಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್​ ಮೈಂಡ್ ಆಗಿದ್ದ ಎಲ್​ಇಟಿ ಕಮಾಂಡರ್ ಸೈಫುಲ್ಲಾ ಭಾರತೀಯ ಸೇನೆಯ ಎನ್​ಕೌಂಟರ್​ಗೆ ಬಲಿಯಾಗಿದ್ದಾನೆ.

  • Share this:

    ಶ್ರೀನಗರ (ಅ. 13): ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ (ಎಲ್​ಇಟಿ) ಉಗ್ರ ಸಂಘಟನೆಯ ಟಾಪ್ ಕಮಾಂಡರ್​ ಸೇರಿ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಸಿಬ್ಬಂದಿ ಎನ್​ಕೌಂಟರ್​ ನಡೆಸಿ, ಹತ್ಯೆ ಮಾಡಿದ್ದಾರೆ. ಸೋಮವಾರ ಎಲ್​ಇಟಿ ಮತ್ತು ಭಾರತೀಯ ಸೇನೆಯ ನಡುವೆ ಶ್ರೀನಗರದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಯಲ್ಲಿ ಎಲ್​ಇಟಿ ಕಮಾಂಡರ್ ಸೇರಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ನೌಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್​ ಮೈಂಡ್ ಆಗಿದ್ದ ಎಲ್​ಇಟಿ ಕಮಾಂಡರ್ ಸೈಫುಲ್ಲಾ ಭಾರತೀಯ ಸೇನೆಯ ಎನ್​ಕೌಂಟರ್​ಗೆ ಬಲಿಯಾಗಿದ್ದಾನೆ.


    ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಸಿಆರ್​ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್​ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.




    ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ. ಭದ್ರತಾಪಡೆಯ ಮಾಹಿತಿ ಪ್ರಕಾರ, ಇಬ್ಬರು ಸಿಆರ್​ಪಿಎಫ್​ ಯೋಧರನ್ನು ಬಲಿ ಪಡೆದಿದ್ದ ನೌಗಾಮ್ ದಾಳಿಯಲ್ಲಿ ಸೈಫುಲ್ಲಾ ಮಾಸ್ಟರ್​ ಮೈಂಡ್ ಆಗಿದ್ದ. ಇದಕ್ಕೂ ಮೊದಲು ಕೂಡ ಭಾರತದ ಅನೇಕ ಕಡೆ ನಡೆದ ಉಗ್ರರ ದಾಳಿಯಲ್ಲಿ ಈತನ ಕೈವಾಡವಿತ್ತು. ಉಗ್ರರು ಅಡಗಿ ಕುಳಿತಿದ್ದ ಪ್ರದೇಶವನ್ನು ಭದ್ರತಾಪಡೆಗಳು ಸುತ್ತುವರೆದಿದ್ದರು. ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಅದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಸಿಆರ್​ಪಿಎಫ್​ ಯೋಧರು ಎಲ್ಇಟಿ ಟಾಪ್ ಕಮಾಂಡರ್ ಸೈಫುಲ್ಲಾ ಹಾಗೂ ಆತನ ಸಹಚರನನ್ನು ಎನ್​ಕೌಂಟರ್ ಮಾಡಿದ್ದಾರೆ.

    Published by:Sushma Chakre
    First published: