• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Twitter| ನಕ್ಷೆಯಲ್ಲಿ ಕಾಶ್ಮೀರ, ಲಡಾಖ್ ಪ್ರತ್ಯೇಕ ದೇಶ ಎಂದು ತಪ್ಪಾಗಿ ತೋರಿಸಿದ್ದ ಟ್ವಿಟರ್​ ಮೇಲೆ ಬಿತ್ತು ಮತ್ತೊಂದು FIR

Twitter| ನಕ್ಷೆಯಲ್ಲಿ ಕಾಶ್ಮೀರ, ಲಡಾಖ್ ಪ್ರತ್ಯೇಕ ದೇಶ ಎಂದು ತಪ್ಪಾಗಿ ತೋರಿಸಿದ್ದ ಟ್ವಿಟರ್​ ಮೇಲೆ ಬಿತ್ತು ಮತ್ತೊಂದು FIR

ಟ್ವಿಟ್ಟರ್.

ಟ್ವಿಟ್ಟರ್.

ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿತ್ತು. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.

  • Share this:



    ನವ ದೆಹಲಿ (ಜೂನ್ 29); ಈಗಾಗಲೇ ಭಾರತದಲ್ಲಿ ಅನೇಕ ವಿವಾದಗಳಿಗೆ ಒಳಗಾಗಿರುವ ಟ್ವಿಟರ್​ ಇತ್ತೀಚೆಗೆ ಭಾರತದ ನಕ್ಷೆಯ ವಿಚಾರದಲ್ಲೂ ವಿವಾದಕ್ಕೆ ಗುರಿಯಾಗಿತ್ತು. ಸೋಮವಾರ ಲಡಾಖ್​ನ ಲೆಹ್ ಪ್ರದೇಶವನ್ನು ಚೀನಾಕ್ಕೆ ಸೇರಿರುವಂತೆ ತೋರಿಸಿದ್ದ ಟ್ವಿಟ್ಟರ್​ ನಕ್ಷೆ ವಿರುದ್ಧ ಭಾರತ ಸರ್ಕಾರ ತರಾಟೆಗೆ ತೆಗೆದುಕೊಂಡಿತ್ತು. ಅದು ಸಾಲದೆಂಬಂತೆ ಇದೀಗ ವಿವಾದಾತ್ಮಕ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಸ್ವತಂತ್ರ ದೇಶವೆಂಬಂತೆ ನಕ್ಷೆಯಲ್ಲಿ ತೋರಿಸಿ ಟ್ವಿಟ್ಟರ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ. ಟ್ವಿಟ್ಟರ್​ನ ಉದ್ಯೋಗ ವಿಭಾಗದಲ್ಲಿ ಈ ನಕ್ಷೆ ಇದ್ದು, ಭಾರತದ ಅಧಿಕೃತ ನಕ್ಷೆಯನ್ನು ತಪ್ಪಾಗಿ ತೋರಿಸುವುದು ಕೇಂದ್ರದ ಹೊಸ ಐಟಿ ನಿಯಮಗಳಿಗೆ ವಿರುದ್ಧವಾಗಿದೆ. ಈ ವಿಚಾರದ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ಅವಲೋಕಿಸಿ ಮಾಹಿತಿ ಕಲೆಹಾಕಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯ ವರದಿಯಲ್ಲಿ ತಿಳಿಸಲಾಗಿತ್ತು. ಅದರಂತೆ ಇಂದು ಟ್ವಿಟರ್​ ಸಂಸ್ಥೆಯ ಮುಖ್ಯಸ್ಥ ಮನೀಶ್​ ಮಹೇಶ್ವರಿ ವಿರುದ್ಧ FIR ದಾಖಲಿಸಲಾಗಿದೆ.



    ಇತ್ತೀಚೆಗೆ ಟ್ವಿಟರ್ ಇಂಡಿಯಾ ಸರ್ಕಾರದ ಜೊತೆಗೆ ಸಂಘರ್ಷದಲ್ಲಿ ತೊಡಗಿದ್ದು, ಅದು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿತ್ತು. ಉತ್ತರಪ್ರದೇಶದಲ್ಲಿ ಈ ತಿಂಗಳು ಟ್ವಿಟರ್ ವಿರುದ್ಧ ದಾಖಲಾದ ಎರಡನೇ FIR ಇದಾಗಿದೆ.


    ಟ್ವಿಟರ್‌ನ ವೆಬ್‌ಸೈಟ್‌ನ "ಟ್ವೀಪ್ ಲೈಫ್" ವಿಭಾಗದಲ್ಲಿ ಭಾರತದ ತಪ್ಪಾದ ನಕ್ಷೆಯನ್ನು ಪ್ರಕಟಿಸಲಾಗಿತ್ತು. ಇದನ್ನು ಬಳಕೆದಾರರು ತಪ್ಪೆಂದು ತೋರಿಸಿದ ನಂತರ ಸೋಮವಾರ ತೆಗೆದು ಹಾಕಲಾಗಿದೆ. ಈ ನಕ್ಷೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಭಾರತದ ಹೊರಗಿರುವ ಪ್ರದೇಶ ಎಂದು ತೋರಿಸಲಾಗಿತ್ತು. ಇದು ಆಕ್ರೋಶಕ್ಕೆ ಗುರಿಯಾಗಿತ್ತು.


    ಬಲಪಂಥೀಯ ಗುಂಪು ಭಜರಂಗದಳದ ಮುಖಂಡ ಪ್ರವೀಣ್ ಭಾಟಿ ಅವರು ಸಲ್ಲಿಸಿರುವ ದೂರಿನಲ್ಲಿ "ಈ ದೇಶದ್ರೋಹದ ಕೃತ್ಯವು ಉದ್ದೇಶಪೂರ್ವಕವಾಗಿ ನಡೆದಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು" ಎಂದು ಉಲ್ಲೇಖಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು ಅಥವಾ ಉತ್ತೇಜಿಸುವುದು) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.


    ದೆಹಲಿಯಿಂದ 100 ಕಿ.ಮೀ ದೂರದಲ್ಲಿರುವ ಯುಪಿಯ ಬುಲಂದ್‌ಶಹರ್‌ನಲ್ಲಿ ದಾಖಲಾದ ಈ ಎಫ್‌ಐಆರ್‌ನಲ್ಲಿ ಟ್ವಿಟರ್ ಇಂಡಿಯಾದ ನ್ಯೂಸ್ ಪಾರ್ಟನರ್‌ಶಿಪ್ ಮುಖ್ಯಸ್ಥ ಅಮೃತ್‍ ತ್ರಿಪಾಠಿ ಅವರನ್ನು ಕೂಡ ಹೆಸರಿಸಲಾಗಿದೆ.


    ಇದನ್ನೂ ಓದಿ: ನಕ್ಷೆಯಲ್ಲಿ ಕಾಶ್ಮೀರ, ಲಡಾಖ್ ಪ್ರತ್ಯೇಕ ದೇಶ; ಟ್ವಿಟ್ಟರ್ ಮೇಲೆ ಸರ್ಕಾರ ಕೆಂಗಣ್ಣು


    ಕಳೆದ ವಾರ, ಉತ್ತರಪ್ರದೇಶದ ಗಾಜಿಯಾಬಾದ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹಲ್ಲೆಗೆ ಸಂಬಂಧಿಸಿರುವ ಪೋಸ್ಟ್‌ಗಳು ವಿವಾದಕ್ಕೆ ಕಾರಣವಾದ ನಂತರ ದಾಖಲಾದ ಎಫ್‍ಐಆರ್‌ನಲ್ಲೂ ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿಯವರನ್ನು ಹೆಸರಿಸಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಅವರಿಗೆ ಸಮನ್ಸ್ ನೀಡಿದ್ದರು. ಟ್ವಿಟರ್ ಜೊತೆಗೆ, ಪತ್ರಕರ್ತರಾದ ರಾಣಾ ಅಯೂಬ್, ಸಬಾ ನಖ್ವಿ, ಮತ್ತು ಕೆಲವು ಕಾಂಗ್ರೆಸ್ ನಾಯಕರನ್ನು ಕೂಡ ಎಫ್‍ಐಆರ್‌ನಲ್ಲಿ ಹೆಸರಿಸಲಾಗಿದೆ.


    ಇದನ್ನೂ ಓದಿ: Debanjan Deb: ನಕಲಿ ಲಸಿಕೆ ಹಂಚಿದ ವ್ಯಕ್ತಿ ಸಖತ್ ಚಾಲಾಕಿ, ಇಷ್ಟು ವರ್ಷ ಎಲ್ಲರನ್ನೂ ಯಾಮಾರಿಸಿದ ದೇಬಂಜನ್ ದೇಬ್ ಯಾರು ಗೊತ್ತಾ?


    ಬೆಂಗಳೂರು ನಿವಾಸಿ ಮನೀಶ್ ಮಹೇಶ್ವರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆಯಾಜ್ಞೆ ದೊರಕಿದೆ. ಇದನ್ನು ಯುಪಿ ಪೊಲೀಸರು ಆಕ್ಷೇಪಿಸಿದ್ದರು. ಅದಕ್ಕೆ ರಾಜ್ಯ ನ್ಯಾಯಾಲಯವು, ‘ತನಿಖೆಯನ್ನು ನಿಲ್ಲಿಸುತ್ತಿಲ್ಲ, ಮನೀಶ್ ಮಹೇಶ್ವರಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ’ ಎಂದು ಹೇಳಿದೆ. “ಪೊಲೀಸರು ತನಿಖೆ ಮಾಡಲು ಅಥವಾ ಪ್ರಶ್ನಿಸಲು ಬಯಸಿದರೆ, ಅವರು ಅದನ್ನು ವರ್ಚುವಲ್‍ ಮೋಡ್ ಮೂಲಕ ಮಾಡಬಹುದು” ಎಂದು ನ್ಯಾಯಮೂರ್ತಿ ನರೇಂದರ್ ಹೇಳಿದ್ದರು.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:MAshok Kumar
    First published: