Union Budget 2021: ಚುನಾವಣೆ ಸಮೀಪದಲ್ಲಿರುವ ಕೇರಳ, ಪಶ್ಚಿಮ ಬಂಗಾಳಕ್ಕೆ ಬಜೆಟ್​ನಲ್ಲಿ ಭಾರೀ ಅನುದಾನ

ಬಜೆಟ್ ಮಂಡಿಸುತ್ತಿರುವ ಸಚಿವೆ ನಿರ್ಮಲಾ ಸೀತಾರಾಮನ್

ಬಜೆಟ್ ಮಂಡಿಸುತ್ತಿರುವ ಸಚಿವೆ ನಿರ್ಮಲಾ ಸೀತಾರಾಮನ್

ಕೊರೋನಾ ನಡುವೆಯೇ ಸಂಸತ್ ಅಧಿವೇಶನ ಆರಂಭವಾಗಿದ್ದು, ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಲ್ಲಿ ಕಾಗದರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ Union Budget Mobile App ಬಿಡುಗಡೆ ಮಾಡಿದ್ದು, ಇದರಲ್ಲಿ ಬಜೆಟ್​ನ ಪೂರ್ತಿ ಮಾಹಿತಿ, ದಾಖಲೆಗಳು ಸಿಗಲಿವೆ.

ಮುಂದೆ ಓದಿ ...
  • Share this:

ನವದೆಹಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದರು. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ನಾಲ್ಕು ರಾಜ್ಯಗಳಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಹಣ ಹಂಚಿಕೆ ಮಾಡಿದರು. ಈ ನಾಲ್ಕು ರಾಜ್ಯಗಳಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.  


ತಮಿಳುನಾಡಿನಲ್ಲಿ 3,500 ಕಿ.ಮೀ. ಕಾರಿಡಾರ್ ಯೋಜನೆ, ಕೇರಳದಲ್ಲಿ 1,100 ಕಿ.ಮೀ. ರಸ್ತೆ ನಿರ್ಮಾಣಕ್ಕೆ 65,000 ಕೋಟಿ ರೂಪಾಯಿ ನೀಡಿದ್ದಾರೆ. ಅದೇ ರೀತಿ ಪಶ್ಚಿಮ ಬಂಗಾಳದಲ್ಲಿ 675 ಕಿ.ಮೀ. ರಸ್ತೆ ನಿರ್ಮಾಣಕ್ಕೆ 95,000 ಕೋಟಿ ರೂಪಾಯಿ ನೀಡಿದ್ದಾರೆ. ಅಸ್ಸಾಂನಲ್ಲಿ ಮುಂದಿನ ಮೂರು ವರ್ಷದಲ್ಲಿ 1,300 ಕಿ.ಮೀ. ರಸ್ತೆ ನಿರ್ಮಾಣಕ್ಕೆ 34 ಸಾವಿರ ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು.


ಇದನ್ನು ಓದಿ: Budget 2021 LIVE: ಕೇಂದ್ರ ಬಜೆಟ್ ಹೈಲೈಟ್ಸ್​; ಬೆಂಗಳೂರು ಮೆಟ್ರೋಗೆ 14,788 ಕೋಟಿ ರೂ. ಅನುದಾನ

top videos


    ಕೊರೋನಾ ನಡುವೆಯೇ ಸಂಸತ್ ಅಧಿವೇಶನ ಆರಂಭವಾಗಿದ್ದು, ಇಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಲ್ಲಿ ಕಾಗದರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ Union Budget Mobile App ಬಿಡುಗಡೆ ಮಾಡಿದ್ದು, ಇದರಲ್ಲಿ ಬಜೆಟ್​ನ ಪೂರ್ತಿ ಮಾಹಿತಿ, ದಾಖಲೆಗಳು ಸಿಗಲಿವೆ. ಕೊರೋನಾದಿಂದ ಸಂಕಷ್ಟಕ್ಕೀಡಾದ ಭಾರತಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದಿನ ಬಜೆಟ್ ಮೂಲಕ ಯಾವ ರೀತಿಯ ಆರ್ಥಿಕ ಲಸಿಕೆ ನೀಡಲಿದ್ದಾರೆ ಎಂಬ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಉಂಟಾಗಿದೆ.


    ಸತತ ಮೂರನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಮತ್ತು ಅಕಾಲಿದಳದ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್​ಗೆ ಬಂದಿದ್ದಾರೆ.  ಈ ಬಾರಿಯ ಬಜೆಟ್ ಕಾಗದರಹಿತವಾಗಿರಲಿದ್ದು, ಮೊಬೈಲ್ ಆ್ಯಪ್​ಗಳಲ್ಲೂ ಬಜೆಟ್​ನ ಮಾಹಿತಿ ಲಭ್ಯವಾಗಲಿದೆ.

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು